Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ. 10-11: ಪಿಲಿಕುಳದಲ್ಲಿ ಪರಿಸರ ಸ್ನೇಹಿ...

ನ. 10-11: ಪಿಲಿಕುಳದಲ್ಲಿ ಪರಿಸರ ಸ್ನೇಹಿ ದೀಪಾವಳಿ-ಆಹಾರ ಮೇಳ

ವಾರ್ತಾಭಾರತಿವಾರ್ತಾಭಾರತಿ5 Nov 2018 10:42 PM IST
share

ಮಂಗಳೂರು, ನ.5: ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮವು ದೀಪಾವಳಿಯ ಸಂಭ್ರಮದ ಅರಿವನ್ನು ಮೂಡಿಸುವ ಆಚರಿಸುವ ಸಲುವಾಗಿ ಲೇಕ್ ಗಾರ್ಡನ್‌ನಲ್ಲಿ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಪರಿಸರ ಸ್ನೇಹಿ ದೀಪಾವಳಿ ಮತ್ತು ಆಹಾರ ಮೇಳವನ್ನು ನ.10 ಹಾಗೂ 11ರಂದು ವೈವಿಧ್ಯಮಯ ಆಕರ್ಷಣೆಗಳೊಂದಿಗೆ ಆಯೋಜಿಸಲಾಗಿದೆ.

ನ.10ರಂದು ಸಂಜೆ 4ರಿಂದ 7 ಗಂಟೆಯವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಗೂಡುದೀಪ ಪಂಥವು ಸಾಂಪ್ರಾದಾಯಿಕ ಹಾಗೂ ಆಧುನಿಕ ವಿಭಾಗ ಗಳಲ್ಲಿ ನಡೆಯಲಿದೆ. ಸಾಂಪ್ರಾದಾಯಿಕ ವಿಭಾಗದ ಗೂಡುದೀಪ ತಯಾರಿಯಲ್ಲಿ ಬಟ್ಟೆ, ಬಣ್ಣದ ಕಾಗದ, ಗ್ಲಾಸ್ ಪೇಪರ್‌ಗಳನ್ನು ಮತ್ತು ಆಧುನಿಕ ವಿಭಾಗಕ್ಕೆ ನವಧಾನ್ಯ, ಫ್ಲೆಕ್ಸ್, ಪ್ಲಾಸ್ಟಿಕ್, ಗರಿ, ಹೂ ಇತ್ಯಾದಿ ಉಪಯೋಗಿಸಿರಬೇಕು.

ಸ್ಪರ್ಧಾಳುಗಳು ಮೇಲಿನ ದಿನಾಂಕದಂದು ಅಪರಾಹ್ನ 2 ಗಂಟೆಯೊಳಗೆ ತಮ್ಮ ಆಯ್ಕೆಯ ವಿಭಾಗಳನ್ನು ಸ್ಥಳದಲ್ಲಿಯೇ ನೋಂದಾಯಿಸಬೇಕು. ಗೂಡುದೀಪಗಳನ್ನು ನೋಡಿ ವಿಭಾಗಗಳನ್ನು ನಿರ್ಣಯಿಸಲಾಗುವುದು. ಗೂಡುದೀಪಕ್ಕೆ ಬೇಕಾದ ಬಲ್ಬ್, ಹೋಲ್ಡರ್, ವೈರ್, ಪ್ಲಗ್ ಇತ್ಯಾದಿಗಳನ್ನು ಸ್ಪರ್ಧಾಳು ಗಳು ಸ್ವತಃ ತರಬೇಕು. ಹೆಚ್ಚಿನ ಮಾಹಿತಿಗಾಗಿ ಮುಂಚಿತವಾಗಿ 7899687937, 7829581031ನ್ನು ಸಂಪರ್ಕಿಸಬಹುದಾಗಿದೆ.

ಚೆಂಡೆಮೇಳ: ಇದೇ ವೇಳೆಯಲ್ಲಿ ಕೆರಿಯರ್ ಡೆಸ್ಟಿನಿ ಸಹಯೋಗದಲ್ಲಿ ನಡೆಯಲಿರುವ ಚೆಂಡೆಮೇಳ ದುಂದುಭಿ ಚೆಂಡೆ ಸ್ಪರ್ಧೆ ನಡೆಯಲಿದೆ. ಮುಂಚಿತವಾಗಿ ನೋಂದಣಿಗಾಗಿ 9148758589, 9483054605, 9742454909ನ್ನು ಸಂಪರ್ಕಿಸಬಹುದಾಗಿದೆ.

ಅದೇ ದಿನಾಂಕದಂದು ಸಂಜೆ 6 ಗಂಟೆಯಿಂದ 6:30ರ ಅವಧಿಯಲ್ಲಿ ಸಾಂಪ್ರದಾಯಿಕ ಹಣತೆ ಬೆಳಗುವ ಸ್ಪರ್ಧೆಯು ನಡೆಯಲಿದೆ. 2 ನಿಮಿಷಗಳಲ್ಲಿ ಅತಿಹೆಚ್ಚು ಹಣತೆ ಬೆಳಗಿಸುವವರನ್ನು ಬಹುಮಾನಕ್ಕೆ ಆಯ್ಕೆ ಮಾಡಲಾಗುವುದು. ಸ್ಥಳದಲ್ಲಿಯೇ ನೋಂದಣಿ ವ್ಯವಸ್ಥೆ ಮಾಡಲಾಗುವುದು. ಎಲ್ಲ ವಿಭಾಗ ಗಳಲ್ಲೂ ವಿಜೇತರಾದವರಿಗೆ ಸೂಕ್ತ ಬಹುಮಾನ ನೀಡಲಾಗುವುದು. 

ವಿಶೇಷ ಆಕರ್ಷಣೆಯಾಗಿ ನ.10 ಹಾಗೂ 11ರಂದು ಲೇಕ್ ಗಾರ್ಡನ್‌ನಲ್ಲಿ ಬೆಳಗ್ಗೆ 11ರಿಂದ ಸಂಜೆ 7 ಗಂಟೆ ವರೆಗೆ ತುಳುನಾಡಿನ ಸಾಂಪ್ರದಾಯಿಕ ಸಸ್ಯಹಾರಿ ಮತ್ತು ಮಾಂಸಹಾರಿ ಖಾದ್ಯಗಳನ್ನು ಸ್ಥಳದಲ್ಲಿಯೇ ತಯಾರಿಸಿ ಪ್ರದರ್ಶಿಸಿ ಕೈಗೆಟಕುವ ದರದಲ್ಲಿ ಮಾರಾಟ ಮಾಡಲಾಗುವುದು.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X