Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹುಲಿ ಅವನಿ ಹತ್ಯೆಯ ಬಗ್ಗೆ ಮೇನಕಾ...

ಹುಲಿ ಅವನಿ ಹತ್ಯೆಯ ಬಗ್ಗೆ ಮೇನಕಾ ಗಾಂಧಿಗೆ ಮಾಹಿತಿಯಿಲ್ಲ: ಮಹಾರಾಷ್ಟ್ರ ಸಚಿವ

ವಾರ್ತಾಭಾರತಿವಾರ್ತಾಭಾರತಿ5 Nov 2018 11:33 PM IST
share
ಹುಲಿ ಅವನಿ ಹತ್ಯೆಯ ಬಗ್ಗೆ ಮೇನಕಾ ಗಾಂಧಿಗೆ ಮಾಹಿತಿಯಿಲ್ಲ: ಮಹಾರಾಷ್ಟ್ರ ಸಚಿವ

ಮುಂಬೈ,ನ.5: ಹೆಣ್ಣು ಹುಲಿ ಅವನಿಯನ್ನು ಹತ್ಯೆ ಮಾಡಿರುವ ಕಾರಣಕ್ಕೆ ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕೇಂದ್ರ ಸಚಿವೆ, ತನ್ನದೇ ಪಕ್ಷದ ಮೇನಕಾ ಗಾಂಧಿ ಬಗ್ಗೆ ಅಸಮಾಧಾನ ತೋಡಿಕೊಂಡಿರುವ ಮಹಾರಾಷ್ಟ್ರ ಅರಣ್ಯ ಸಚಿವ ಸುಧೀರ್ ಮುಂಗಂತಿವರ್, ಘಟನೆಯ ಬಗ್ಗೆ ಮೇನಕಾ ಗಾಂಧಿಗೆ ಸರಿಯಾದ ಮಾಹಿತಿಯಿಲ್ಲ. ಹಾಗಾಗಿ ಅವರು ಬೇಕಾದರೆ ಈ ವಿಷಯದಲ್ಲಿ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಬಹುದು ಎಂದು ಸೋಮವಾರ ತಿಳಿಸಿದ್ದಾರೆ.

ನರಭಕ್ಷಕ ಹೆಣ್ಣು ಹುಲಿ ಅವನಿಯನ್ನು ಮಹಾರಾಷ್ಟ ಅರಣ್ಯ ಇಲಾಖೆ ಯವತ್ಮಲ್ ಜಿಲ್ಲೆಯಲ್ಲಿ ಗುಂಡಿಟ್ಟು ಹತ್ಯೆ ಮಾಡಿತ್ತು. ಟಿ1 ಎಂದು ಕರೆಯಲ್ಪಡುತ್ತಿದ್ದ ಆರು ವರ್ಷ ಪ್ರಾಯದ ಹುಲಿಗೆ ಎರಡು ಒಂಬತ್ತು ತಿಂಗಳು ಪ್ರಾಯದ ಮರಿಗಳಿವೆ. ಅವನಿ 2016ರಿಂದ ಯವತ್ಮಲ್‌ನ ರಾಲೆಗಾಂವ್ ಅರಣ್ಯ ಪ್ರದೇಶದಲ್ಲಿ 13 ಜನರನ್ನು ಬಲಿಪಡೆದುಕೊಂಡಿದೆ ಎಂದು ಹೇಳಲಾಗಿದೆ. ಅವನಿಯನ್ನು ಗುಂಡಿಟ್ಟು ಹತ್ಯೆ ಮಾಡಿರುವುದು ಕಾನೂನುಬಾಹಿರ ಮತ್ತು ಅದೊಂದು ಭೀಕರ ಕೊಲೆ ಎಂದು ರವಿವಾರ ಟೀಕಿಸಿದ್ದ ಮೇನಕಾ ಗಾಂಧಿ, ಹುಲಿಯನ್ನು ಹತ್ಯೆಗೈಯ್ಯಲು ಆದೇಶ ನೀಡಿದ್ದ ಅರಣ್ಯ ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವ ಮುಂಗತಿವರ್, ಕೇಂದ್ರ ಸಚಿವೆಯ ಹೇಳಿಕೆಯು ಆಕೆಗೆ ಈ ಪ್ರಕರಣದ ಬಗ್ಗೆ ಸರಿಯಾದ ಮಾಹಿತಿಯಿಲ್ಲ ಎಂಬುದನ್ನು ಸೂಚಿಸುತ್ತದೆ. ನನಗಾಗಲೀ ಅಥವಾ ನನ್ನ ಕಾರ್ಯಾಲಯಕ್ಕಾಗಲೀ ಇಂಥ ಹತ್ಯೆಗಳನ್ನು ನಡೆಸಲು ಆದೇಶ ನೀಡುವ ಅಧಿಕಾರವಿಲ್ಲ. ಈ ನಿರ್ಧಾರವನ್ನು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಸೂಚನೆಯಂತೆ ತೆಗೆದುಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಅವನಿ ಐದು ಮಂದಿಯನ್ನು ಬಲಿಪಡೆದಾಗ ಅದನ್ನು ಹಿಡಿಯಲು ಆದೇಶ ನೀಡಲಾಗಿತ್ತು. ಆದರೆ ಇದಕ್ಕೆ ಹೋರಾಟಗಾರರು ಬಾಂಬೆ ಉಚ್ಚ ನ್ಯಾಯಾಲಯದಿಂದ ತಡೆ ತಂದ ಪರಿಣಾಮ ನರಭಕ್ಷಕ ಹುಲಿ ನರ ಬಲಿಯನ್ನು ಪಡೆಯುತ್ತಲೇ ಸಾಗಿತು ಎಂದು ಸಚಿವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X