Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿಯ ಮಲಿನ ಗಾಳಿ ಸೇವನೆ ಮರಣಶಿಕ್ಷೆಗೆ...

ದಿಲ್ಲಿಯ ಮಲಿನ ಗಾಳಿ ಸೇವನೆ ಮರಣಶಿಕ್ಷೆಗೆ ಸಮಾನ : ವೈದ್ಯರ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ5 Nov 2018 11:48 PM IST
share
ದಿಲ್ಲಿಯ ಮಲಿನ ಗಾಳಿ ಸೇವನೆ ಮರಣಶಿಕ್ಷೆಗೆ ಸಮಾನ : ವೈದ್ಯರ ಹೇಳಿಕೆ

ಹೊಸದಿಲ್ಲಿ, ನ.5: ಹೊಗೆಮಂಜಿನಿಂದಾಗಿ ಪ್ರತೀ ವರ್ಷ ಒಂದು ಮಿಲಿಯಕ್ಕೂ ಅಧಿಕ ಭಾರತೀಯರು ಸಾಯುತ್ತಿದ್ದು ವಿಶ್ವದಲ್ಲಿ ಅತ್ಯಂತ ಕಳಪೆ ಗುಣಮಟ್ಟದ ಗಾಳಿ ಹೊಂದಿರುವ ಪ್ರಮುಖ ನಗರವಾಗಿ ದಿಲ್ಲಿ ಗುರುತಿಸಿಕೊಂಡಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

     ಪ್ರತೀ ವರ್ಷದ ನವೆಂಬರ್ ತಿಂಗಳಲ್ಲಿ ಬೂದು ಬಣ್ಣದ ಹೊಗೆಮಂಜು ದಿಲ್ಲಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಆವರಿಸಿಕೊಳ್ಳುತ್ತಿರುವ ಕಾರಣ ದಿಲ್ಲಿಯ ಬಹುತೇಕ ಆಸ್ಪತ್ರೆಗಳ ವಾರ್ಡ್‌ಗಳಲ್ಲಿ ಉಸಿರಾಟದ ಸಮಸ್ಯೆಯಿಂದ ಬಾಧಿತವಾಗಿರುವ ರೋಗಿಗಳ ಸಂಖ್ಯೆ ಹೆಚ್ಚಿರುತ್ತದೆ. ದೀಪಾವಳಿಯ ಹಬ್ಬದ ಸಂದರ್ಭ ವಾಹನಗಳ ಸಂಚಾರ ಅಧಿಕವಾಗಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಹೊಗೆ ವಾತಾವರಣವನ್ನು ಸೇರಿಕೊಳ್ಳುತ್ತದೆ. ಇದಕ್ಕೆ ಪಟಾಕಿ ಹಚ್ಚುವುದರಿಂದ ಹೊರಬೀಳುವ ದಟ್ಟ ಹೊಗೆಯೂ ಸೇರಿಕೊಳ್ಳುತ್ತದೆ. ಅಲ್ಲದೆ ಅಕ್ಟೋಬರ್ ಅಂತ್ಯದಲ್ಲಿ ಪಂಜಾಬ್ ಮತ್ತು ಹರ್ಯಾಣ ರಾಜ್ಯಗಳಲ್ಲಿ ಬೆಳೆತ್ಯಾಜ್ಯ ಸುಡುವ ಕಾರಣ ಇಲ್ಲಿ ಉತ್ಪತ್ತಿಯಾಗುವ ಹೊಗೆ ದಿಲ್ಲಿಯತ್ತ ಸಾಗುತ್ತದೆ. ಕಟ್ಟಡ ನಿರ್ಮಾಣ ಕಾಮಗಾರಿಯ ಸಂದರ್ಭ ಉಂಟಾಗುವ ಧೂಳು ಕೂಡಾ ವಾತಾವರಣ ಸೇರಿಕೊಂಡು ದಿಲ್ಲಿಯಲ್ಲಿ ಗಾಳಿಯ ಗುಣಮಟ್ಟವನ್ನು ನಿಕೃಷ್ಟ ಸ್ಥಿತಿಗೆ ತಲುಪಿಸಿದೆ. ದಿಲ್ಲಿಯ ಮಲಿನ ಗಾಳಿ ಸೇವನೆ ಜನರಿಗೆ ಮರಣ ಶಿಕ್ಷೆಗೆ ಸಮಾನವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ದಿಲ್ಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದ ಯೋಗೇಶ್ ಕುಮಾರ್ ಎಂಬಾತ ಶಸ್ತ್ರಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದ. ಆದರೆ ಈತನನ್ನು ಈ ಸಂದರ್ಭ ಬಿಡುಗಡೆಗೊಳಿಸಿದರೆ ಆತನ ಆರೋಗ್ಯ ಮತ್ತೆ ಹದಗೆಡುವ ಅಪಾಯವಿದೆ ಎನ್ನುತ್ತಾರೆ ವೈದ್ಯರು. ಆಸ್ಪತ್ರೆಯ ಒಳಗಡೆ ಗಾಳಿಯ ಗುಣಮಟ್ಟವನ್ನು ಉತ್ತಮ ಸ್ಥಿತಿಯಲ್ಲಿ ಕಾಯ್ದುಕೊಳ್ಳಲಾಗಿದೆ. ಆದರೆ ಆಸ್ಪತ್ರೆಯಿಂದ ಹೊರಗೆ ಹೋದರೆ ಆತ ಮತ್ತೆ ಆರೋಗ್ಯದ ಸಮಸ್ಯೆಗೆ ಸಿಲುಕುವ ಸಾಧ್ಯತೆಯಿದೆ ಎಂದು ಆಸ್ಪತ್ರೆಯ ವೈದ್ಯ ಶ್ರೀನಿವಾಸ್ ಕೆ.ಗೋಪೀನಾಥ್ ಹೇಳಿದ್ದಾರೆ.

ದಿಲ್ಲಿಯಲ್ಲಿ ಈಗಿರುವ ಕಳಪೆ ಗುಣಮಟ್ಟದ ಗಾಳಿ ಫೆಬ್ರವರಿ ಅಂತ್ಯದ ಬಳಿಕ ಸುಧಾರಣೆಯಾಗುತ್ತದೆ. ಆದರೆ ಅದುವರೆಗೆ ಅಸ್ತಮಾ ಮುಂತಾದ ಉಸಿರಾಟದ ತೊಂದರೆಯಿರುವ ವ್ಯಕ್ತಿಗಳು ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಮಕ್ಕಳು ವಯಸ್ಕರಿಗಿಂತ ವೇಗವಾಗಿ ಉಸಿರಾಟ ನಡೆಸುತ್ತಾರೆ. ಇದರಿಂದ ಅವರು ವಯಸ್ಕರಿಗಿಂತ ದುಪ್ಪಟ್ಟು ಪ್ರಮಾಣದಲ್ಲಿ ವಿಷಕಾರಿ ಗಾಳಿಯನ್ನು ತಮ್ಮ ದೇಹದೊಳಗೆ ಎಳೆದುಕೊಳ್ಳುತ್ತಾರೆ. ಇದರಿಂದ ಪ್ರತೀ ವರ್ಷ ಸಾವಿರಾರು ಮಕ್ಕಳು ಸಾವಿಗೀಡಾಗುತ್ತಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ದಿಲ್ಲಿಯಲ್ಲಿ ಜನಿಸಿದ ಮಗು ಮೊದಲ ದಿನ ಉಸಿರಾಡುವಾಗಲೇ ಸುಮಾರು 25 ಸಿಗರೇಟು ಸೇವನೆಯಿಂದ ದೇಹದೊಳಗೆ ಸೇರುವಷ್ಟು ಹೊಗೆಯನ್ನು ಒಳಗೆಳೆದುಕೊಳ್ಳುತ್ತದೆ ಎಂದು ಮತ್ತೊಬ್ಬ ವೈದ್ಯ ಡಾ ಅರವಿಂದ್ ಕುಮಾರ್ ಹೇಳುತ್ತಾರೆ. ಯುವಜನತೆಯ ಶ್ವಾಸಕೋಶದಲ್ಲೂ ಕಪ್ಪು ಕಲೆಗಳು ಕಂಡು ಬರುತ್ತಿದ್ದು ಇದು ಭಯಾನಕವಾಗಿದೆ ಎಂದವರು ಕಳವಳ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ವಾಯು ಮಾಲಿನ್ಯದ ಅಪಾಯದ ಕುರಿತು ಜಾಗೃತಿ ಮೂಡಿಸಲು ಇದೀಗ ಪ್ರಯತ್ನಿಸಲಾಗುತ್ತಿದೆ ಮತ್ತು ವಾಯುಮಾಲಿನ್ಯ ನಿಯಂತ್ರಿಸಲು ಆಡಳಿತ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೆ ನಿರ್ಮಾಣ ಕಾಮಗಾರಿಯನ್ನು ನಿಷೇಧಿಸಿರುವುದು, ಸಾರಿಗೆ ದಟ್ಟಣೆಯನ್ನು ಕಡಿಮೆಗೊಳಿಸಲು ಸಮ-ಬೆಸ ಯೋಜನೆ, ಡೀಸೆಲ್ ಜನರೇಟರ್ ಬಳಕೆ ನಿಷೇಧ ಮುಂತಾದ ಕ್ರಮಗಳು ಹೆಚ್ಚಿನ ಪರಿಣಾಮ ಬೀರಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X