Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆರು ಕಾಲ್ಬೆರಳ ಅಥ್ಲೀಟ್ ಸ್ವಪ್ನಾಗೆ...

ಆರು ಕಾಲ್ಬೆರಳ ಅಥ್ಲೀಟ್ ಸ್ವಪ್ನಾಗೆ ಕೊನೆಗೂ ಲಭಿಸಿತು ಶೂ

ವಾರ್ತಾಭಾರತಿವಾರ್ತಾಭಾರತಿ5 Nov 2018 11:55 PM IST
share
ಆರು ಕಾಲ್ಬೆರಳ ಅಥ್ಲೀಟ್ ಸ್ವಪ್ನಾಗೆ ಕೊನೆಗೂ ಲಭಿಸಿತು ಶೂ

ಹೊಸದಿಲ್ಲಿ, ನ.5: ಏಶ್ಯನ್ ಗೇಮ್ಸ್‌ನಲ್ಲಿ ಸ್ವರ್ಣ ಪದಕ ವಿಜೇತ ಸ್ವಪ್ನಾ ಬರ್ಮನ್ ಹೆಪ್ಟಾಥ್ಲಾನ್ ವಿಭಾಗದ ವಿವಿಧ ಸ್ಪರ್ಧೆಗಳಿಗೆ ಸೂಕ್ತವಾಗುವ ಏಳು ಜೊತೆ ಶೂಗಳನ್ನು ಸ್ವೀಕರಿಸಿದ್ದಾರೆ ಎಂದು ಕ್ರೀಡಾಸಾಧನಗಳನ್ನು ಉತ್ಪಾದಿಸುವ ಕಂಪೆನಿ ಅಡಿಡಾಸ್ ತಿಳಿಸಿದೆ.

ಈ ವರ್ಷಾರಂಭದಲ್ಲಿ ಜಕಾರ್ತದಲ್ಲಿ ನಡೆದ ಏಶ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಜಯಿಸಿದ ಭಾರತದ ಮೊದಲ ಹೆಪ್ಟಾಥ್ಲಾನ್ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಸ್ವಪ್ನಾ ಬರ್ಮನ್‌ಗೆ ಹುಟ್ಟುವಾಗಲೇ ಎರಡೂ ಪಾದದಲ್ಲಿ ಆರು ಬೆರಳುಗಳಿದ್ದವು. ಏಶ್ಯನ್ ಗೇಮ್ಸ್‌ನಲ್ಲಿ ಐತಿಹಾಸಿಕ ಸಾಧನೆ ಬಳಿಕ ಸ್ವಪ್ನಾರ ಪರಿಸ್ಥಿತಿ ಎಲ್ಲರ ಗಮನ ಸೆಳೆದಿತ್ತು.

ಅಡಿಡಾಸ್ ಕಳೆದ ಎರಡು ತಿಂಗಳುಗಳಿಂದ ಭಾರತದ ಪ್ರಾಧಿಕಾರ ಹಾಗೂ ಜರ್ಮನಿಯಲ್ಲಿರುವ ತನ್ನದೇ ಅಥ್ಲೆಟಿಕ್ಸ್ ಸರ್ವಿಸ್ ಲ್ಯಾಬ್‌ನಲ್ಲಿ ಸ್ವಪ್ನಾರ ಸಮಸ್ಯೆಯನ್ನು ಬಗೆಹರಿಸಲು ವಿಶೇಷ ಕಾಳಜಿ ವಹಿಸಿ ಕಾರ್ಯೋನ್ಮುಖವಾಗಿತ್ತು.

‘‘ಅಡಿಡಾಸ್ ಕುಟುಂಬಕ್ಕೆ ಸೇರುವುದು ಎಲ್ಲ ಕ್ರೀಡಾಪಟುಗಳಿಗೆ ಒಂದು ಗೌರವ. ಭಾರತಕ್ಕೆ ಚಿನ್ನ ಗೆದ್ದುಕೊಡಬೇಕೆಂಬ ನನ್ನ ಕನಸು ಈಡೇರಿದೆ. ಇದೀಗ ನಾನು ದೇಶಕ್ಕೆ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲಲು ತಯಾರಿ ನಡೆಸುವೆ. ನನ್ನ ಹೊಸ ಪಾದರಕ್ಷೆಯನ್ನು ಧರಿಸಿ ತರಬೇತಿ ನಡೆಸಲು, ಸ್ಪರ್ಧಿಸಲು ಎದುರು ನೋಡುತ್ತಿರುವೆ. ಅಡಿಡಾಸ್‌ನ ನಿರಂತರ ಬೆಂಬಲದಿಂದ ಅಥ್ಲೀಟ್ ಆಗಿ ಮತ್ತಷ್ಟು ಬೆಳೆಯಲು ಇಷ್ಟಪಡುವೆ’’ ಎಂದು ತನ್ನ ಕಾಲಿಗೆ ಒಪ್ಪುವ ಶೂ ಪಡೆಯಲು ಜರ್ಮನಿಗೆ ತೆರಳಿದ್ದ ಸ್ವಪ್ನಾ ಪ್ರತಿಕ್ರಿಯೆ ನೀಡಿದರು.

ಏಶ್ಯನ್ ಗೇಮ್ಸ್‌ನಲ್ಲಿ ಚಿನ್ನ ಜಯಿಸಿದ ಬಳಿಕ ತನ್ನ ಕಾಲಿಗೆ ಒಪ್ಪುವಂತಹ ಶೂಗಳನ್ನು ಒದಗಿಸಿ ಎಂದು ಸ್ವಪ್ನಾ ವಿನಂತಿಸಿದ್ದರು. ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ತುರ್ತಾಗಿ ಈ ವಿಷಯದ ಬಗ್ಗೆ ಗಮನ ಹರಿಸುವಂತೆ ಸಂಬಂಧಪಟ್ಟ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X