Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಂಡೀಸ್ ವಿರುದ್ಧ ಭಾರತಕ್ಕೆ ಟ್ವೆಂಟಿ –...

ವಿಂಡೀಸ್ ವಿರುದ್ಧ ಭಾರತಕ್ಕೆ ಟ್ವೆಂಟಿ – 20ಯಲ್ಲಿ ಸರಣಿ ಗೆಲುವು

2-0 ಮುನ್ನಡೆ

ವಾರ್ತಾಭಾರತಿವಾರ್ತಾಭಾರತಿ6 Nov 2018 10:38 PM IST
share
ವಿಂಡೀಸ್ ವಿರುದ್ಧ ಭಾರತಕ್ಕೆ ಟ್ವೆಂಟಿ – 20ಯಲ್ಲಿ    ಸರಣಿ ಗೆಲುವು

ಲಕ್ನೋ, ನ.6:  ದ್ವಿತೀಯ ಟ್ವೆಂಟಿ-20 ಅಂತರ್ ರಾಷ್ಟ್ರೀಯ ಪಂದ್ಯದಲ್ಲಿ ವೆಸ್ಟ್ ಇಂಡೀಸ್  ವಿರುದ್ಧ ಭಾರತ 71 ರನ್ ಗಳ ಜಯ ಗಳಿಸಿದ್ದು, ಇದರೊಂದಿಗೆ ಮೂರು ಪಂದ್ಯಗಳ ಸರಣಿಯನ್ನು ಭಾರತ 2 -0 ಅಂತರದಲ್ಲಿ ವಶಪಡಿಸಿಕೊಂಡಿದೆ.
 ‘ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ  ನಡೆದ ಪಂದ್ಯದಲ್ಲಿ ಗೆಲುವಿಗೆ 196 ರನ್ ಗಳ ಕಠಿಣ ಸವಾಲು ಪಡೆದಿದ್ಧ ವೆಸ್ಟ್ ಇಂಡೀ ಸ್ ತಂಡ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟದಲ್ಲಿ 124  ರನ್ ಗಳಿಸಿತು.
ಭಾರತ  ಇನ್ನೂ ಒಂದು ಪಂದ್ಯ ಆಡಲು ಬಾಕಿ ಇರುವಾಗಲೇ ಸರಣಿ ಜಯ ದಾಖಲಿಸಿದ್ದು, ಟೆಸ್ಟ್ ನಲ್ಲಿ 2-0 ಹಾಗೂ ಏಕದಿನ ಸರಣಿಯಲ್ಲಿ 3-1     ಅಂತರದಲ್ಲಿ ಸರಣಿ ಗೆಲುವು ದಾಖಲಿಸಿತ್ತು.
ಇಂದು ನಡೆದ ಪಂದ್ಯದಲ್ಲಿ  ಗೆಲುವಿಗೆ ಕಠಿಣ ಸವಾಲು ಪಡೆದಿದ್ಧ ವೆಸ್ಟ್ ಇಂಡೀಸ್ ತಂಡದ ಪರ ಶಾಯ್ ಹೋಪ್ 6ರನ್, ಹೆಟ್ಮೆಯರ್ 15 ರನ್, ಡರೆನ್ ಬ್ರಾವೊ 23 ರನ್, ದಿನೇಶ್ ರಾಮ್ ದಿನ್ 10ರನ್, ನಿಕೊಲಾಸ್ ಪೊರನ್ 6ರನ್, ಫ್ಯಾಬಿಯನ್ ಆ್ಯಲನ್ 0, ಕಿಮೊ ಪೌಲ್ 20 ರನ್,  ಖಾರಿ ಪಿಯರ್ 1ರನ್ , ಒಶಾನೆ ಥಾಮಸ್ ಔಟಾಗದೆ  8 ರನ್ ಗಳಿಸಿದರು. ನಾಯಕ ಕಾರ್ಲೊಸ್ ಬ್ರಾಥ್ ವೇಟ್   ಹೋರಾಟದ ಮೂಲಕ ಔಟಾಗದೆ 15 ರನ್  ಸೇರಿಸಿದರೂ ತಂಡ ಗೆಲುವಿನ ದಡ ಸೇರಿಲ್ಲ.
ಭಾರತ ಖಲೀಲ್ ಅಹ್ಮದ್, ಭುವನೇಶ್ವರ್ ಕುಮಾರ್, ಕುಲ್ ದೀಪ್ ಯಾದವ್  ಮತ್ತು ಜಸ್ ಪ್ರೀತ್ ಬುಮ್ರಾ ತಲಾ 2 ವಿಕೆಟ್ ಪಡೆದರು.
ರೋಹಿತ್ ಶತಕ: ಭಾರತ 195/2
 ‘ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಭಾರತ ನಿಗದಿತ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟದಲ್ಲಿ 195 ರನ್ ಗಳಿಸಿತ್ತು.
ರೋಹಿತ್ ಶರ್ಮಾ ಔಟಾಗದೆ 111 ರನ್ (61ಎ, 8ಬೌ,7ಸಿ) ಮತ್ತು ಲೋಕೇಶ್ ರಾಹುಲ್ ಔಟಾಗದೆ 26 ರನ್ , ರಿಷಭ್ ಪಂತ್ 5 ರನ್  ಮತ್ತು ಶಿಖರ್ ಧವನ್ 43 ರನ್ (41ಎ, 3ಬೌ) ಗಳಿಸಿ ಔಟಾದರು.
ರೋಹಿತ್ ಶರ್ಮಾ 86ನೇ ಪಂದ್ಯದಲ್ಲಿ  58 ಎಸೆತಗಳಲ್ಲಿ 8 ಬೌಂಡರಿ ಮತ್ತು 6 ಸಿಕ್ಸರ್ ಸಹಾಯದಿಂದ 4ನೇ ಶತಕ ದಾಖಲಿಸಿದರು.ಇದರೊಂದಿಗೆ ಅಂತಾರಾಷ್ಟ್ರೀಯ ಟ್ವೆಂಟಿ-20 ಕ್ರಿಕೆಟ್‌ನಲ್ಲಿ ದಾಖಲೆಯ ನಾಲ್ಕನೇ ಶತಕ ಸಾಧನೆ ಮಾಡಿದ ವಿಶ್ವದ ಮೊತ್ತ ಮೊದಲ ಬ್ಯಾಟ್ಸ್‌ಮನ್ ಎಂಬ ಕೀರ್ತಿಗೆ ಪಾತ್ರವಾಗಿದ್ದಾರೆ.    ಅತಿ ಹೆಚ್ಚು ಶತಕಗಳನ್ನು ದಾಖಲಿಸಿದ ಪಟ್ಟಿಯಲ್ಲಿ ನ್ಯೂಝಿಲೆಂಡ್‌ನ ಕಾಲಿನ್ ಮನ್ರೊ ದಾಖಲೆಯನ್ನು ಮುರಿದಿದ್ದಾರೆ.  ಇದಕ್ಕೂ ಮೊದಲು ಅವರು 38 ಎಸೆತಗಳಲ್ಲಿ 3 ಬೌಂಡರಿ ಮತ್ತು 3 ಸಿಕ್ಸರ್ ಸಹಾಯದಿಂದ ಅರ್ಧಶತಕ ಪೂರ್ಣಗೊಳಿಸಿದ್ದರು. 
ಇನಿಂಗ್ಸ್ ಆರಂಭಿಸಿದ ರೋಹಿತ್ ಮತ್ತು ಧವನ್ ಮೊದಲ ವಿಕೆಟ್ ಗೆ 14 ಓವರ್ ಗಳಲ್ಲಿ 123 ರನ್ ಗಳ ಜೊತೆಯಾಟ ನೀಡಿದರು. ಮೂರನೇ ವಿಕೆಟ್ ಗೆ ಲೋಕೇಶ್ ರಾಹುಲ್ ಜೊತೆ 62 ರನ್ ಗಳ ಜೊತೆಯಾಟ ನೀಡಿ ವಿಂಡೀಸ್  ಕಠಿಣ ಸವಾಲು ವಿಧಿಸಲು ನೆರವಾದರು.
ವಿಂಡೀಸ್ ಪರ ಖಾರಿ ಪಿಯರ್ 49ಕ್ಕೆ 1 ಮತ್ತು ಫ್ಯಾಬಿಯಾನ್ ಆಲನ್ 33ಕ್ಕೆ 1 ವಿಕೆಟ್ ಕಬಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X