Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ.1ರಿಂದ ಮನಪಾ ವ್ಯಾಪ್ತಿಯಲ್ಲಿ...

ಡಿ.1ರಿಂದ ಮನಪಾ ವ್ಯಾಪ್ತಿಯಲ್ಲಿ ಪ್ರಾಪರ್ಟಿ ಕಾರ್ಡ್ ಕಡ್ಡಾಯ: ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ7 Nov 2018 4:29 PM IST
share
ಡಿ.1ರಿಂದ ಮನಪಾ ವ್ಯಾಪ್ತಿಯಲ್ಲಿ ಪ್ರಾಪರ್ಟಿ ಕಾರ್ಡ್ ಕಡ್ಡಾಯ: ಜಿಲ್ಲಾಧಿಕಾರಿ

ಮಂಗಳೂರು, ನ.7: ರಾಜ್ಯ ಸರಕಾರದ ಅಧಿಸೂಚನೆಯಂತೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಡಿ.1ರಿಂದ ಅನ್ವಯವಾಗುವಂತೆ ಪ್ರಾಪರ್ಟಿ ಕಾರ್ಡ್ (ಅರ್ಬನ್ ಪ್ರಾಪರ್ಟಿ ಓನರ್‌ಶಿಪ್ ರೆಕಾರ್ಡ್ಸ್-ಪಿಆರ್ ಕಾರ್ಡ್) ಕಡ್ಡಾಯಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದರು.

ದ.ಕ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನಪಾ ವ್ಯಾಪ್ತಿಯಲ್ಲಿ ಬರುವ 32 ಕಂದಾಯ ಗ್ರಾಮಗಳನ್ನು 6 ವಲಯಗಳನ್ನಾಗಿ ಮತ್ತು 30 ಸೆಕ್ಟರ್‌ಗಳನ್ನಾಗಿ ವಿಂಗಡಿಸಲಾಗಿದೆ. ಅದರೊಳಗಡೆ ಬರುವ ಸುಮಾರು 1,50,635 ಆಸ್ತಿಗಳ ಅಳತೆ ಕಾರ್ಯವನ್ನು ಈಗಾಗಲೆ ನಡೆಸಲಾಗಿದೆ ಎಂದರು.

ಆ ಪೈಕಿ 77,306 ಆಸ್ತಿಗಳ ದಾಖಲೆಗಳನ್ನು ಸಂಗ್ರಹಿಸಲಾಗಿದೆ. 31,883 ಆಸ್ತಿಗಳ ಕರಡು ಪಿಆರ್ ಕಾರ್ಡ್‌ಗಳನ್ನು ಮಾಡಲಾಗಿದೆ. 26,393 ಆಸ್ತಿಗಳ ಕರಡು ಪಿಆರ್ ಕಾರ್ಡ್‌ಗಳನ್ನು ನೀಡಲಾಗಿದೆ. 23,569 ಆಸ್ತಿಗಳ ಪಿಆರ್ ಕಾರ್ಡ್‌ಗಳಿಗೆ ಅನುಮೋದನೆ ನೀಡಲಾಗಿದೆ. 18,491 ಪಿಆರ್ ಕಾರ್ಡ್‌ಗಳನ್ನು ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದರು.

ಈ ಯೋಜನೆಯು 2012ರಿಂದ ಆರಂಭಗೊಂಡಿದೆ. ಆಸ್ತಿಗಳಿಗೆ ಸಂಬಂಧಿಸಿ ಎಲ್ಲಾ ದಾಸ್ತಾವೇಜು/ದಾಖಲೆಗಳನ್ನು ಯುಪಿಒಆರ್ ತಂತ್ರಾಂಶದಲ್ಲಿ ಸ್ಕ್ಯಾನ್ ಮಾಡಿ ಸಂಗ್ರಹಿಸಿ ಡಾಟಾ ಎಂಟ್ರಿ ಕಾರ್ಯ ಮಾಡಲಾಗುತ್ತದೆ. ಈ ಎಲ್ಲಾ ದಾಖಲೆಗಳ ಬಗ್ಗೆ ಹಕ್ಕು ವಿಚಾರಣಾ ಪ್ರಕ್ರಿಯೆಯ ಬಳಿಕ 30 ದಿನಗಳೊಳಗೆ ನಿಗದಿತ ಶುಲ್ಕ ವಸೂಲಿ ಮಾಡಿ ಪಿಆರ್ ಕಾರ್ಡ್ ನೀಡಲಾಗುತ್ತದೆ. ಕರಡು ಪಿಆರ್ ಕಾರ್ಡ್ ಬಗ್ಗೆ ಆಕ್ಷೇಪಗಳಿದ್ದರೆ ಸೂಕ್ತ ದಾಖಲೆಯೊಂದಿಗೆ ಸಲ್ಲಿಸಬಹುದು. ಪಿಆರ್ ಕಾರ್ಡ್ ಪ್ರಮಾಣಪತ್ರ ಅಂತಿಮಗೊಂಡ ಬಳಿಕ ಯುಪಿಒಆರ್ ತಂತ್ರಾಂಶವು ಕಾವೇರಿ ತಂತ್ರಾಂಶದೊಂದಿಗೆ ಸಂಯೋಜನೆಗೊಳ್ಳುತ್ತದೆ. ಮುಂದಿನ ದಿನಗಳಲ್ಲಿ ಪಿಆರ್ ಕಾರ್ಡ್ ಪ್ರಮಾಣಪತ್ರವು ನೋಂದಣಿಗೆ ಕಡ್ಡಾಯವಾಗಿರುವುದರಿಂದ ಪಿಆರ್ ಕಾರ್ಡ್ ಮಾಡಿಸದವರು ಶೀಘ್ರ ಇದನ್ನು ಮಾಡಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಮಂಗಳೂರು ತಾಲೂಕು ಕಚೇರಿ ಬಳಿ ಇದಕ್ಕಾಗಿ ಕಚೇರಿಯನ್ನು ತೆರೆಯಲಾಗಿದೆ. 8 ಹಳೆಯ ಸರ್ವೆಯರ್‌ಗಳಲ್ಲದೆ 12 ಹೊಸ ಸರ್ವೆಯರ್‌ಗಳನ್ನು ನೇಮಕ ಮಾಡಲಾಗಿದೆ. ಅಲ್ಲದೆ ಹೆಚ್ಚುವರಿ ಐವರು ಸರ್ವೆಯರ್‌ಗಳನ್ನು ನಿಯುಕ್ತಿಗೊಳಿಸಲಾಗುವುದು. 10 ಡಾಟಾ ಎಂಟ್ರಿ ಸಹಿತ ಒಟ್ಟು 60 ಮಂದಿ ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಪಿಆರ್ ಕಾರ್ಡ್‌ಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕೆ ತನ್ನ ಅಧ್ಯಕ್ಷತೆಯ ಸಮಿತಿಯು ವಾರಕ್ಕೆ ಎರಡು ಬಾರಿ ಸಭೆ ನಡೆಸಲಿದೆ.

*ಹೊಸ ವೆಬ್‌ಸೈಟ್: ಇದಕ್ಕಾಗಿಯೇ ನ.12ರಿಂದ ಹೊಸ ವೆಬ್‌ಸೈಟ್ ಕಾರ್ಯಾಚರಿಸಲಿದೆ. ಪೂರಕ ಮಾಹಿತಿ ಸಹಿತ ಇದರಲ್ಲಿ ಎಲ್ಲವನ್ನೂ ದಾಖಲಿಸಲಾಗುತ್ತದೆ. ಅಲ್ಲದೆ ಹೆಲ್ಪ್‌ಲೈನ್ ವಿಭಾಗವನ್ನೂ ತೆರೆಯಲಾಗುತ್ತದೆ. ಇಮೇಲ್ ಮಾಡಿಯೂ ಆಸ್ತಿ ನೋಂದಣಿ ಮಾಡಿಸಬಹುದಾಗಿದೆ. ಅದಕ್ಕಾಗಿಯೇ ಹೊಸ ಆ್ಯಪ್ ನಿರ್ಮಿಸಲಾಗುತ್ತದೆ. ಮನೆಯಿಂದ ಹೊರ ಹೋಗಲು ಅಸಾಧ್ಯವಿದ್ದವರಿಗೆ ಮಾತ್ರ ಸ್ಥಳಕ್ಕೆ ತೆರಳಿ ಸೇವೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X