Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಪ್ಪು ಹಣದ ಸಮಸ್ಯೆಗೆ ಯಾವುದೇ ಕಡಿವಾಣ...

ಕಪ್ಪು ಹಣದ ಸಮಸ್ಯೆಗೆ ಯಾವುದೇ ಕಡಿವಾಣ ಬಿದ್ದಿಲ್ಲ: ಶೇ.60 ಭಾರತೀಯರ ಅಭಿಪ್ರಾಯ

ನೋಟು ರದ್ದತಿಗೆ 2 ವರ್ಷ

ವಾರ್ತಾಭಾರತಿವಾರ್ತಾಭಾರತಿ7 Nov 2018 8:03 PM IST
share
ಕಪ್ಪು ಹಣದ ಸಮಸ್ಯೆಗೆ ಯಾವುದೇ ಕಡಿವಾಣ ಬಿದ್ದಿಲ್ಲ: ಶೇ.60 ಭಾರತೀಯರ ಅಭಿಪ್ರಾಯ

ಹೊಸದಿಲ್ಲಿ, ನ.7: ಕಪ್ಪುಹಣದ ಸಮಸ್ಯೆಗೆ ಕಡಿವಾಣ ಹಾಕಲು ಕೇಂದ್ರ ಸರಕಾರ ನೋಟು ನಿಷೇಧಿಸುವ ನಿರ್ಧಾರ ಕೈಗೊಂಡಿದ್ದರೂ, ಈ ಎರಡು ವರ್ಷಗಳಲ್ಲಿ ಮತ್ತೆ ಕಪ್ಪುಹಣದ ಸಮಸ್ಯೆ ಈ ಹಿಂದಿನ ಸ್ಥಿತಿಗೇ ಮರಳಿದೆ ಎಂದು ಶೇ.60ರಷ್ಟು ಭಾರತೀಯರು ಅಭಿಪ್ರಾಯಪಟ್ಟಿದ್ದಾರೆ. 2016ರ ನವೆಂಬರ್ 8ರಂದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ನೋಟು ನಿಷೇಧ ನಿರ್ಧಾರ ಕೈಗೊಂಡ ಸಂದರ್ಭ ದೇಶದ ಅರ್ಥವ್ಯವಸ್ಥೆಗೆ ಕಂಟಕವಾಗಿದ್ದ ಕಪ್ಪುಹಣವನ್ನು ತೊಡೆದು ಹಾಕುವ ಉದ್ದೇಶದಿಂದ ಈ ಕ್ರಮ ಕೈಗೊಂಡಿರುವುದಾಗಿ ತಿಳಿಸಿತ್ತು. ಆದರೆ ಎರಡು ವರ್ಷದ ಬಳಿಕ ಉದ್ದೇಶ ಸಫಲವಾಗಿದೆಯೇ ಎಂಬುದನ್ನು ಕಂಡುಕೊಳ್ಳಲು ‘ಲೋಕಲ್ ಸರ್ಕಲ್ಸ್’ ನಡೆಸಿದ ಸಮೀಕ್ಷೆಯಲ್ಲಿ ಶೇ.60ರಷ್ಟು ಭಾರತೀಯರು ನಕಾರಾತ್ಮಕ ಉತ್ತರ ನೀಡಿದ್ದು ಕಪ್ಪುಹಣದ ಸಮಸ್ಯೆ ಮತ್ತೆ ಹಿಂದಿನ ಸ್ಥಿತಿಗೇ ಮರಳಿದ್ದಲ್ಲದೆ, 2019ರ ಲೋಕಸಭಾ ಚುನಾವಣೆ ಸಂದರ್ಭ ಇನ್ನಷ್ಟು ಅಧಿಕಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

ಆದರೆ ಶೇ. 40ರಷ್ಟು ಜನತೆ, ನೋಟು ರದ್ದತಿಯಿಂದ ತೆರಿಗೆ ತಪ್ಪಿಸುವವರನ್ನು ತೆರಿಗೆ ಜಾಲದಡಿ ತರಲು ಸಾಧ್ಯವಾಗಿದೆ ಎಂದು ಅಭಿಪ್ರಾಯಪಟ್ಟರೆ, ಶೇ.25ರಷ್ಟು ಮಂದಿ ನೋಟು ರದ್ದತಿ ನಿರ್ಧಾರ ಒಂದು ವ್ಯರ್ಥ ಪ್ರಯತ್ನ, ಇದರಿಂದ ಯಾವುದೇ ಪ್ರಯೋಜನವಾಗಿಲ್ಲ ಎಂದು ತಿಳಿಸಿದ್ದಾರೆ. ಶೇ.23ರಷ್ಟು ಮಂದಿ ನೋಟು ರದ್ದತಿಯಿಂದ ಪ್ರತ್ಯಕ್ಷ ತೆರಿಗೆ(ನೇರ ತೆರಿಗೆ) ಪ್ರಮಾಣ ಅಧಿಕವಾಗಿದೆ ಎಂದು ಅಭಿಪ್ರಾಯಪಟ್ಟರೆ, ನೋಟು ರದ್ದತಿಯಿಂದ ಚಲಾವಣೆಯಲ್ಲಿದ್ದ ಕಪ್ಪುಹಣ ನಿಯಂತ್ರಣಕ್ಕೆ ಬಂದಿದೆ ಎಂದು ಕೇವಲ ಶೇ.13ರಷ್ಟು ಮಂದಿ ಮಾತ್ರ ಹೇಳಿದ್ದಾರೆ. ಶೇ.39ರಷ್ಟು ಮಂದಿ ತಾವು ರಶೀದಿ ಪಡೆಯದೆ ವಸ್ತುಗಳನ್ನು ಖರೀದಿಸುವುದಾಗಿ ತಿಳಿಸಿದ್ದರೆ, ಬಹುತೇಕ ಮಂದಿ ತಾವು ಕಳೆದ ಒಂದು ವರ್ಷದಲ್ಲಿ ಆಸ್ತಿಗಳನ್ನು ನಗದು ರೂಪದಲ್ಲಿ ಹಣ ಪಾವತಿಸಿ ಅಥವಾ ಆಂಶಿಕವಾಗಿ ನಗದು ರೂಪದಲ್ಲಿ ಪಾವತಿಸಿ ಖರೀದಿಸಿದ್ದಾಗಿ ತಿಳಿಸಿದ್ದಾರೆ.

ನೋಟು ರದ್ದತಿ ರಿಯಲ್ ಎಸ್ಟೇಟ್ ಕ್ಷೇತ್ರದ ಮೇಲೆ ತಾತ್ಕಾಲಿಕ ಪ್ರಭಾವ ಬೀರಿದ್ದರೂ, ಇದೀಗ ಮತ್ತೆ ಚೇತರಿಸಿಕೊಂಡಿದ್ದು ಈ ಹಿಂದಿನಂತೆಯೇ ಕಪ್ಪು ಹಣದ ಚಲಾವಣೆ ನಡೆಯುತ್ತಿದೆ ಎಂದು ಹೆಚ್ಚಿನವರು ಅಭಿಪ್ರಾಯಪಟ್ಟಿರುವುದಾಗಿ ಸಮೀಕ್ಷೆಯ ವರದಿ ತಿಳಿಸಿದೆ. 215 ತಾಲೂಕುಗಳಲ್ಲಿ 15 ಸಾವಿರಕ್ಕೂ ಹೆಚ್ಚು ಮಂದಿಯನ್ನು ಸಮೀಕ್ಷೆಗೆ ಒಳಪಡಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X