Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಕಮ್ಯೂನಿಸ್ಟರ ಬಗ್ಗೆ ಎಸ್.ಎಲ್.ಭೈರಪ್ಪ...

​ಕಮ್ಯೂನಿಸ್ಟರ ಬಗ್ಗೆ ಎಸ್.ಎಲ್.ಭೈರಪ್ಪ ಟೀಕೆ ಸಲ್ಲದು: ಸಿಪಿಎಂ

ವಾರ್ತಾಭಾರತಿವಾರ್ತಾಭಾರತಿ8 Nov 2018 5:15 PM IST
share

ಮಂಗಳೂರು, ನ.8: ಜಿಲ್ಲೆಯ ಅಭಿವೃದ್ಧಿಗೆ ಎಡಪಂಥೀಯ ಚಳವಳಿ ಮಾರಕ ಎಂಬ ಎಸ್.ಎಲ್. ಭೈರಪ್ಪಹೇಳಿಕೆ ಅಜ್ಞಾನದಿಂದ ಕೂಡಿದ್ದು, ಈ ಟೀಕೆ ಸಲ್ಲದು ಎಂದು ಸಿಪಿಎಂ ಅಭಿಪ್ರಾಯಪಟ್ಟಿದೆ.

ಕಾರ್ಪೊರೇಟ್ ಸಂಘಟನೆಗಳು ನಗರ ಕೇಂದ್ರಗಳಲ್ಲಿ ಸಾಹಿತ್ಯ ಸಮ್ಮೇಳನಗಳನ್ನು ಅದ್ದೂರಿಯಾಗಿ ನಡೆಸುತ್ತಿದ್ದು, ಅವುಗಳ ವಿಸ್ತರಣೆಯಾಗಿ ಇತ್ತೀಚೆಗೆ ‘ಮಂಗಳೂರು ಲಿಟ್ ಫೆಸ್ಟ್’ ನಡೆದಿದೆ. ಮಂಗಳೂರಿನಲ್ಲಂತೂ ಅದು ಸಂಪೂರ್ಣವಾಗಿ ಹಿಂದುತ್ವ ಸಂಘಟನೆಗಳಿಂದಲೇ ಸಂಯೋಜನೆಗೊಂಡಿತ್ತು.

ಜಿಲ್ಲೆಯು 20ನೇ ಶತಮಾನದುದ್ದಕ್ಕೂ ಅಭಿವೃದ್ಧಿ ದಾರಿಯಲ್ಲಿ ಮುನ್ನಡೆಯುವಲ್ಲಿ ಸ್ವಾತಂತ್ರ್ಯ ಚಳವಳಿಯ ಕಾಲದಿಂದಲೂ ಜತೆಯಲ್ಲಿ ಸಾಗಿ ಬಂದಿರುವ ಕಮ್ಯೂನಿಸ್ಟ್ ಚಳವಳಿಯು ಕಾರಣವಾಗಿದೆ. ಎನ್.ಎಲ್.ಉಪಾಧ್ಯಾಯ, ಸಿಂಪ್ಸನ್ ಸೋನ್ಸ್, ಎ.ಕೃಷ್ಣ ಶೆಟ್ಟಿ, ಬಿ.ವಿ.ಕಕ್ಕಿಲ್ಲಾಯ, ಎಂ.ಎಚ್.ಕೃಷ್ಣಪ್ಪ ಮೊದಲಾದವರು ಕಮ್ಯೂನಿಸ್ಟ್ ಚಳವಳಿಯನ್ನು ಜಿಲ್ಲೆಯಲ್ಲೂ ಬಳಿಕ ಕರ್ನಾಟಕದಲ್ಲೂ ಕಟ್ಟುವುದರಲ್ಲಿ ಪ್ರಮುಖ ಪಾತ್ರವಹಿಸಿದವರು.

ಔದ್ಯೋಗೀಕರಣಗೊಳ್ಳುತ್ತಿರುವ ಜಿಲ್ಲೆಯಲ್ಲಿ ಕಾರ್ಮಿಕ ಚಳವಳಿಯನ್ನು ಕಟ್ಟುತ್ತಾ, ಕಾರ್ಮಿಕರಿಗೆ ತಮ್ಮ ಹಕ್ಕುಗಳ ಬಗ್ಗೆ ತಿಳಿವಳಿಕೆ ಕೊಡುತ್ತಾ ಬಂದವರು ಇವರು. ಇಡೀ ರಾಜ್ಯದಲ್ಲೇ ಪ್ರಥಮವಾಗಿ ‘ಉಳುವವನಿಗೇ ಭೂಮಿ’ ಹೋರಾಟವನ್ನು ಕಟ್ಟಿ, ಭೂಸುಧಾರಣಾ ಶಾಸನ ಜಾರಿಯಾಗುವುದಕ್ಕೆ ಕಾರಣರಾಗಿದ್ದಾರೆ.

ಇದರಿಂದಾಗಿ ರಾಜ್ಯದ ಇತರ ಜಿಲ್ಲೆಗಳಿಗಿಂತಲೂ ದ.ಕ-ಉಡುಪಿ ಜಿಲ್ಲೆಗಳು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಆರೋಗ್ಯ-ಎಲ್ಲ ರಂಗಗಳಲ್ಲೂ ಅತಿ ಹೆಚ್ಚಿನ ಅಭಿವೃದ್ಧಿ ಹೊಂದಲು ಸಾಧ್ಯವಾಯಿತು. ಸಮೀಪದ ಕೇರಳ ರಾಜ್ಯದ ಅಭಿವೃದ್ಧಿಗೆ ಅಲ್ಲಿನ ಕಮ್ಯೂನಿಸ್ಟ್ ಚಳವಳಿಯೇ ಕಾರಣ ಎನ್ನುವುದನ್ನು ಕಮ್ಯೂನಿಸ್ಟ್ ವಿರೋಧಿಗಳೇ ಒಪ್ಪಿಕೊಳ್ಳುತ್ತಾರೆ.

ಎಸ್.ಎಲ್.ಭೈರಪ್ಪಅಭಿಮಾನ ಹೊಂದಿರುವ ಹಿಂದುತ್ವ ಸಂಘಟನೆಗಳಲ್ಲಿ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಾಗಲಿ, ಆನಂತರದಲ್ಲಿ ರೈತ ಕಾರ್ಮಿಕ ಹೋರಾಟಗಳಲ್ಲಾಗಲೀ ನೇತೃತ್ವ ವಹಿಸಿದ ಒಂದೇಒಂದು ಉದಾಹರಣೆಯೂ ಇಲ್ಲ ಎಂಬುದನ್ನು ಭೈರಪ್ಪಅವರಿಗೆ ಯಾರಾದರೂ ಅವರ ಮಿತ್ರರು ತಿಳಿಸಿಕೊಡುವುದು ಒಳ್ಳೆಯದು ಎಂದು ಸಿಪಿಎಂ ಕಾರ್ಯದರ್ಶಿ ವಸಂತ ಆಚಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X