Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಂವಿಧಾನ-ಪ್ರಜಾಪ್ರಭುತ್ವ ರಕ್ಷಣೆ ನಮ್ಮ...

ಸಂವಿಧಾನ-ಪ್ರಜಾಪ್ರಭುತ್ವ ರಕ್ಷಣೆ ನಮ್ಮ ಆದ್ಯತೆ: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು

ವಾರ್ತಾಭಾರತಿವಾರ್ತಾಭಾರತಿ8 Nov 2018 7:16 PM IST
share
ಸಂವಿಧಾನ-ಪ್ರಜಾಪ್ರಭುತ್ವ ರಕ್ಷಣೆ ನಮ್ಮ ಆದ್ಯತೆ: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು

ಬೆಂಗಳೂರು, ನ.8: ದೇಶದಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ರಕ್ಷಿಸಲು ಜಾತ್ಯತೀತ ಹಾಗೂ ಸಮಾನ ಮನಸ್ಕ ಪಕ್ಷಗಳು ಒಂದಾಗಿ ಶ್ರಮಿಸಬೇಕಾದ ಅಗತ್ಯವಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬುನಾಯ್ಡು ಅಭಿಪ್ರಾಯಪಟ್ಟರು.

ಗುರುವಾರ ಪದ್ಮನಾಭನಗರದಲ್ಲಿರುವ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸದಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಹತ್ವದ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಪ್ರಧಾನಿಯಾಗಿದ್ದಾಗಿನಿಂದಲೂ ನಾನು ಅವರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿದ್ದೇನೆ. ದೇವೇಗೌಡ, ಕುಮಾರಸ್ವಾಮಿ ಹಾಗೂ ನಮ್ಮಂತಹವರು ಎಲ್ಲರೂ ಒಗ್ಗಟ್ಟಾಗಿ ದೇಶ ಹಾಗೂ ಪ್ರಜಾಪ್ರಭುತ್ವವನ್ನು ರಕ್ಷಣೆ ಮಾಡಬೇಕಿದೆ ಎಂದು ಅವರು ಹೇಳಿದರು.

ಸಿಬಿಐ, ಆರ್‌ಬಿಐ, ಇಡಿ, ಐಟಿ ಸೇರಿದಂತೆ ಎಲ್ಲ ಸಾಂವಿಧಾನಿಕ ಸಂಸ್ಥೆಗಳು ಆತಂಕದ ಪರಿಸ್ಥಿತಿಯಲ್ಲಿವೆ. ಕೇಂದ್ರ ಸರಕಾರ ಸೃಷ್ಟಿಸುತ್ತಿರುವ ಸಮಸ್ಯೆಗಳನ್ನು ಎದುರಿಸಲು ತನ್ನಿಂದ ಸಾಧ್ಯವಿಲ್ಲ. ತನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಆರ್‌ಬಿಐ ಗವರ್ನರ್ ಗಡುವು ನೀಡಿರುವುದಾಗಿ ಮಾಧ್ಯಮಗಳ ವರದಿಗಳು ತಿಳಿಸಿವೆ ಎಂದು ಅವರು ಹೇಳಿದರು.

ಇಡಿ, ಐಟಿ ಸಂಸ್ಥೆಗಳನ್ನು ವಿಪಕ್ಷಗಳನ್ನು ನಿಯಂತ್ರಿಸಲು ಬಳಸಿಕೊಳ್ಳಲಾಗುತ್ತಿದೆ. ಕರ್ನಾಟಕ, ತಮಿಳುನಾಡು, ತೆಲಂಗಾಣ, ಉತ್ತರಪ್ರದೇಶ, ಬಿಹಾರ, ಗುಜರಾತ್ ಸೇರಿದಂತೆ ಎಲ್ಲೆಡೆಯೂ ಇದೇ ತಂತ್ರವನ್ನು ಕೇಂದ್ರ ಸರಕಾರ ಅನುಸರಿಸುತ್ತಿದೆ. ವಿರೋಧ ಪಕ್ಷದ ನಾಯಕರಿಗೆ ನಿರಂತರವಾಗಿ ಕಿರುಕುಳ ನೀಡಲಾಗುತ್ತಿದೆ ಎಂದು ಚಂದ್ರಬಾಬು ನಾಯ್ಡು ದೂರಿದರು.

ರಫೇಲ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ಈವರೆಗೆ ಉತ್ತರ ನೀಡಿಲ್ಲ. ದೇಶದ ಆರ್ಥಿಕ ಪರಿಸ್ಥಿತಿ ಶೋಚನೀಯವಾಗಿದೆ. ಪೆಟ್ರೋಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಡಾಲರ್ ಎದುರು ರೂಪಾಯಿ ಮೌಲ್ಯ ಪಾತಾಳಕ್ಕೆ ಕುಸಿದಿದೆ . ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ರೈತರು ಸಂಕಷ್ಟದಲ್ಲಿದ್ದಾರೆ. ಅಲ್ಪಸಂಖ್ಯಾತರು ಅಭದ್ರತೆಯ ವಾತಾವರಣದಲ್ಲಿ ಬದುಕುವಂತಾಗಿದೆ ಎಂದು ಅವರು ಟೀಕಿಸಿದರು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ವಿಚಾರದಲ್ಲಿ ನನ್ನ ಆಸಕ್ತಿಯಿಲ್ಲ. ದೇಶ ಹಾಗೂ ಸಂವಿಧಾನವನ್ನು ರಕ್ಷಣೆ ಮಾಡಬೇಕೆಂಬುದು ಮಾತ್ರ ನನ್ನ ಉದ್ದೇಶ. ದಿಲ್ಲಿಯಲ್ಲಿರುವ ಮಾಧ್ಯಮಗಳು ಮುಕ್ತವಾಗಿ ವರದಿ ಮಾಡುವ ಸ್ಥಿತಿಯಲ್ಲಿ ಇಲ್ಲ. ದೇಶದ ಎದುರು ಸತ್ಯವನ್ನು ತಿಳಿಸಬೇಕಾದ ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಲಾಗುತ್ತಿದೆ ಎಂದು ಅವರು ದೂರಿದರು.

ಪ್ರಧಾನಿ ಅಭ್ಯರ್ಥಿ ಯಾರಾಗಬೇಕು ಎಂಬುದರ ಕುರಿತು ನಾವು ಆನಂತರ ಚರ್ಚೆ ಮಾಡುತ್ತೇವೆ. ಕಾಂಗ್ರೆಸ್ ರಾಷ್ಟ್ರೀಯ ಮಟ್ಟದಲ್ಲಿ ಪ್ರಮುಖ ವಿಪಕ್ಷ. ಅವರ ಸಹಕಾರ ನಮಗೆ ಅಗತ್ಯವಿದೆ. ಈ ಹಿಂದೆ ದೇವೇಗೌಡರ ನೇತೃತ್ವದಲ್ಲಿ ತೃತೀಯ ರಂಗ ಅಧಿಕಾರಕ್ಕೆ ಬಂದಿತ್ತು. ಕಾಂಗ್ರೆಸ್ ಬಾಹ್ಯ ಬೆಂಬಲ ನೀಡಿತ್ತು ಎಂದು ಅವರು ಹೇಳಿದರು.

ಬಿಎಸ್ಪಿ ವರಿಷ್ಠೆ ಮಾಯಾವತಿ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಜೊತೆ ಚರ್ಚೆ ಮಾಡಿದ್ದೇನೆ. ನಾಳೆ ತಮಿಳುನಾಡಿನಲ್ಲಿ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಜೊತೆ ಮಾತುಕತೆ ನಡೆಸುತ್ತೇನೆ. ಒಂದು ಪ್ರಮುಖವಾದ ಉದ್ದೇಶಕ್ಕಾಗಿ ನಾವು ಎಲ್ಲರನ್ನೂ ಭೇಟಿ ಮಾಡಿ ಚರ್ಚೆ ಮಾಡುತ್ತಿದ್ದೇವೆ ಎಂದು ಚಂದ್ರಬಾಬು ನಾಯ್ಡು ತಿಳಿಸಿದರು.

ಆಂಧ್ರಪ್ರದೇಶಕ್ಕೆ ವಿಶೇಷ ಸೌಲಭ್ಯಗಳನ್ನು ನೀಡುವುದಾಗಿ ಪ್ರಧಾನಿ ನರೇಂದ್ರಮೋದಿ ಮಾಡಿದ್ದ ವಾಗ್ದಾನ ಈಡೇರಿಸದೆ ಇದ್ದುದ್ದರಿಂದ, ನಾವು ಎನ್‌ಡಿಎಗೆ ನೀಡಿದ್ದ ಬೆಂಬಲ ಹಿಂಪಡೆದೆವು. ಅಲ್ಲದೆ, ನಮ್ಮ ಕೇಂದ್ರ ಸಚಿವರಿಂದಲೂ ರಾಜೀನಾಮೆ ಕೊಡಿಸಿದೆವು ಎಂದು ಅವರು ಹೇಳಿದರು.

ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಉಪ ಚುನಾವಣೆಯ ಫಲಿತಾಂಶವನ್ನು ನೋಡಿದರೆ, ದೇಶದ ಜನರ ಮನಸ್ಥಿತಿ ಅರ್ಥವಾಗುತ್ತದೆ. ಸಾಮಾನ್ಯ ಜನರಷ್ಟೇ ಅಲ್ಲ, ಎನ್‌ಡಿಎ ಸರಕಾರದ ಆಡಳಿತದಿಂದ ಮಾಧ್ಯಮಗಳು ಬೇಸತ್ತಿವೆ ಎಂದು ಚಂದ್ರಬಾಬು ನಾಯ್ಡು ತಿಳಿಸಿದರು.

ಮುಂದಿನ ಜನವರಿಯಲ್ಲಿ ಮಮತಾ ಬ್ಯಾನರ್ಜಿ ಬೃಹತ್ ರ್ಯಾಲಿ ಆಯೋಜನೆ ಮಾಡಿದ್ದಾರೆ. ಅದೇ ರೀತಿ, ಕುಮಾರಸ್ವಾಮಿ ರೈತರ ಸಮಾವೇಶವನ್ನು ಮಾಡಲಿದ್ದಾರೆ. ಇದೊಂದು ಆರಂಭಿಕ ಪ್ರಯತ್ನವಾಗಿದ್ದು, ನಾವು ಯಶಸ್ಸು ಗಳಿಸುತ್ತೇವೆ ಎಂಬ ವಿಶ್ವಾಸವಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X