Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಚುನಾವಣೆ ಬಂದಾಗ ಬಿಜೆಪಿಗೆ ರಾಮಮಂದಿರ...

ಚುನಾವಣೆ ಬಂದಾಗ ಬಿಜೆಪಿಗೆ ರಾಮಮಂದಿರ ನೆನಪಾಗುತ್ತದೆ: ಯುವ ಕಾಂಗ್ರೆಸ್

ನೋಟುಗಳ ಅಮಾನ್ಯೀಕರಣ ಖಂಡಿಸಿ ಕರಾಳ ದಿನ ಆಚರಣೆ

ವಾರ್ತಾಭಾರತಿವಾರ್ತಾಭಾರತಿ8 Nov 2018 7:44 PM IST
share
ಚುನಾವಣೆ ಬಂದಾಗ ಬಿಜೆಪಿಗೆ ರಾಮಮಂದಿರ ನೆನಪಾಗುತ್ತದೆ: ಯುವ ಕಾಂಗ್ರೆಸ್

ಬೆಂಗಳೂರು, ನ.8: ಬಿಜೆಪಿಗೆ ಚುನಾವಣೆ ಬಂದಾಗ ಮಾತ್ರ ರಾಮಮಂದಿರ ನೆನಪಿಗೆ ಬರುತ್ತದೆ. ನೋಟ್ ಬ್ಯಾನ್ ಸೇರಿದಂತೆ ಆಡಳಿತ ವೈಫಲ್ಯ ಮರೆಮಾಚಲು ಇದೀಗ ಬಿಜೆಪಿ ರಾಮಮಂದಿರದ ವಿಚಾರವನ್ನು ಕೈಗೆತ್ತಿಗೊಂಡಿದೆ ಎಂದು ಯುವ ಕಾಂಗ್ರೆಸ್ ಆರೋಪ ಮಾಡಿದೆ.

ಗರಿಷ್ಠ ಮುಖಬೆಲೆಯ ನೋಟುಗಳ ಅಮಾನ್ಯೀಕರಣಕ್ಕೆ ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬಸವನಗುಡಿಯ ಶಂಕರನಾಗ್ ವೃತ್ತದಲ್ಲಿ ಗುರುವಾರ ಕರಾಳ ದಿನಾಚರಣೆ ಆಚರಿಸಿದರು. ನೋಟ್‌ ಬ್ಯಾನ್ ವಿರೋಧಿಸಿ ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮೋದಿ ಹಠಾವೋ ದೇಶ್ ಬಚಾವೋ ಎಂದು ಘೋಷಣೆ ಕೂಗಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ನಾಗರಾಜ್, ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ಆಯ್ಕೆಯಾದರೆ ಬಡವರಿಗೆ ಹಾಗೂ ದೇಶಕ್ಕೆ ಉಳಿಗಾಲವಿಲ್ಲ . ಹೀಗಾಗಿ, ಮೋದಿ ಸರಕಾರವನ್ನು ತೊಲಗಿಸಿ ಎಂದು ಕರೆ ನೀಡಿದರು. ಉಪ ಚುನಾವಣೆಯಲ್ಲಿಯೇ ರಾಜ್ಯದ ಜನತೆ ಮೋದಿ ವಿರುದ್ಧ ನಾವಿದ್ದೇವೆ ಎನ್ನುವ ಸಂದೇಶ ನೀಡಿದ್ದಾರೆ. ಜಾತಿ, ಧರ್ಮದ ವಿಷಯಗಳನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತಿರುವ ಬಿಜೆಪಿಗೆ ಪಾಠ ಕಲಿಸಿದ್ದಾರೆ. ಅಪವಿತ್ರ ಮೈತ್ರಿ ಎನ್ನುವ ಮೂದಲಿಕೆಗೆ ಉಪ ಚುನಾವಣೆಯಲ್ಲಿ ಜನತೆಯೇ ತೀರ್ಪು ನೀಡಿದ್ದಾರೆ, ಮೈತ್ರಿ ಸರಕಾರದ ಪರವಾಗಿ ಜನಾದೇಶ ನೀಡಿದ್ದಾರೆ. ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಮ್ಮ ಸ್ವಕ್ಷೇತ್ರದಲ್ಲಿಯೇ ಪುತ್ರನನ್ನು ಗೆಲ್ಲಿಸಿಕೊಳ್ಳಲು ಪ್ರಯಾಸ ಪಡಬೇಕಾಯಿತು ಎಂದು ಟೀಕಿಸಿದರು.

ಎಲ್ಲ ರಂಗದಲ್ಲಿ ಬಿಜೆಪಿ ವಿಫಲವಾಗಿದೆ, ಮೋದಿಯನ್ನು ಮನೆಗೆ ಕಳುಹಿಸಿ ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ಮಾಡಲಿದ್ದಾರೆ ಎನ್ನುವುದನ್ನು ಅರಿತ ಬಿಜೆಪಿ ನಾಯಕರು ಇದೀಗ ಧರ್ಮದ ಬಗ್ಗೆ ಮಾತನಾಡುತ್ತಿದ್ದಾರೆ. ರಾಮಮಂದಿರ ನಿರ್ಮಾಣದ ವಿಷಯ ಪ್ರಸ್ತಾಪ ಮಾಡಿದ್ದಾರೆ. ನಾಲ್ಕು ವರ್ಷ ಇಲ್ಲದ ರಾಮ ಮಂದಿರ ಈಗ ನೆನಪಾಗಿದೆ. ಚುನಾವಣೆ ವೇಳೆ ಇದನ್ನು ಬಳಸಿಕೊಳ್ಳಲು ಹೊರಟಿದ್ದಾರೆ. 1991ರಲ್ಲಿಯೂ ಹೀಗೆಯೇ ಮಾಡಿದ್ದರು. ಶ್ರೀರಾಮ ಸರ್ವೋತ್ತಮ, ಮರ್ಯಾದಾ ಪುರುಷ, ಅಂತಹ ರಾಮನ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ವಿರೋಧವಿಲ್ಲ. ಆದರೆ ಈ ವಿಷಯದಲ್ಲಿ ಬಿಜೆಪಿ ಮಾಡುವ ರಾಜಕಾರಣಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಲಿದೆ ಎಂದರು.

ಬಿಜೆಪಿ ವೈಫಲ್ಯವನ್ನು ಜನತೆ ಮುಂದೆ ಇಡುತ್ತೇವೆ. ಬಿಜೆಪಿ ವಿರುದ್ಧ ಅಲೆ ಎಬ್ಬಿಸಿ, ಕೋಮುವಾದಿ, ಜಾತಿವಾದಿ ಪಕ್ಷವನ್ನು ಧಿಕ್ಕರಿಸಿ ಪ್ರಗತಿಪರ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಎಂದು ಜಾಗೃತಿ ಮೂಡಿಸುತ್ತೇವೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X