ನೋಟು ಅಪವೌಲ್ಯೀಕರಣ ವಿರುದ್ಧ ಇಂದು ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ
ಉಡುಪಿ, ನ.8: ದೇಶದ ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲುಗೊಳಿಸಿದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ನೋಟು ಅಪವೌಲ್ಯೀಕರಣಕ್ಕೆ ಇದೀಗ ಎರಡು ವರ್ಷಗಳು ತುಂಬಿದ್ದು, ಇದರ ದುಷ್ಪರಿಣಾಮಗಳನ್ನು ದೇಶದ ಜನಸಾಮಾನ್ಯರು ಈಗಲೂ ಅನುಭವಿಸುತ್ತಿದ್ದಾರೆ. ದೇಶದ ಜನಸಾಮಾನ್ಯರ ಜನಜೀವನವನ್ನೇ ಏರುಪೇರು ಮಾಡಿದ ಈ ಕ್ರಮದ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಿರ್ದೇಶನದಂತೆ ನ.9ರಂದು ಅಪರಾಹ್ನ 3 ಗಂಟೆಗೆ ಉಡುಪಿ ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜನಾರ್ದನ ತೋನ್ಸೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story