Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಲ್‌ಪಿಜಿ ಬೆಲೆ 2 ರೂ. ಏರಿಕೆ

ಎಲ್‌ಪಿಜಿ ಬೆಲೆ 2 ರೂ. ಏರಿಕೆ

ವಾರ್ತಾಭಾರತಿವಾರ್ತಾಭಾರತಿ9 Nov 2018 7:42 PM IST
share
ಎಲ್‌ಪಿಜಿ ಬೆಲೆ 2 ರೂ. ಏರಿಕೆ

ಹೊಸದಿಲ್ಲಿ,ನ.9: ಸರಕಾರವು ಎಲ್‌ಪಿಜಿ ವಿತರಕರ ಕಮಿಷನ್ ಹೆಚ್ಚಿಸಿರುವ ಪರಿಣಾಮ ಶುಕ್ರವಾರ ಗೃಹಬಳಕೆ ಅಡುಗೆ ಅನಿಲದ ಪ್ರತಿ ಸಿಲಿಂಡರ್‌ನ ಬೆಲೆಯಲ್ಲಿ ಎರಡು ರೂ.ಏರಿಕೆಯಾಗಿದೆ.

ದಿಲ್ಲಿಯಲ್ಲೀಗ 14.2 ಕೆಜಿಯ ಸಬ್ಸಿಡಿ ಸಹಿತ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 505.34 ರೂ.ನಿಂದ 507.42 ರೂ.ಗೆ ಹೆಚ್ಚಿಸಲಾಗಿದೆ. ತೈಲ ಸಚಿವಾಲಯದ ಆದೇಶದ ಮೇರೆಗೆ ಬೆಲೆಗಳನ್ನು ಹೆಚ್ಚಿಸಲಾಗಿದೆ ಎಂದು ಸರಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬೆಲೆ ಅಧಿಸೂಚನೆಯಲ್ಲಿ ತಿಳಿಸಿವೆ.

ಈ ಹಿಂದೆ ಸೆ.2017ರಲ್ಲಿ ಗೃಹಬಳಕೆ ಎಲ್‌ಪಿಜಿ ವಿತರಕರಿಗೆ ಪ್ರತಿ 14.2 ಕೆಜಿ ಸಿಲಿಂಡರ್‌ಗೆ 48.89 ರೂ. ಮತ್ತು 5 ಕೆಜಿ ತೂಕದ ಸಿಲಿಂಡರ್‌ಗೆ 24.20 ರೂ.ಕಮಿಷನ್ ನಿಗದಿಗೊಳಿಸಲಾಗಿತ್ತು. ಇದೀಗ ಇವುಗಳನ್ನು ಅನುಕ್ರಮವಾಗಿ 50.58 ರೂ. ಮತ್ತು 25.29 ರೂ.ಗಳಿಗೆ ಹೆಚ್ಚಿಸಲಾಗಿದೆ.

ಇದು ಈ ತಿಂಗಳಲ್ಲಿ ಎರಡನೇ ಬೆಲೆ ಏರಿಕೆಯಾಗಿದೆ. ನ.1ರಂದು ಮೂಲಬೆಲೆಯ ಮೇಲೆ ಜಿಎಸ್‌ಟಿ ಹೆಚ್ಚಳದಿಂದಾಗಿ ಪ್ರತಿ 14.2 ಕೆಜಿ ಸಿಲಿಂಡರ್‌ನ ಬೆಲೆ 2.94 ರೂ.ಏರಿಕೆಯಾಗಿದ್ದು,ಜೂನ್‌ನಿಂದ ಒಟ್ಟು 16.21ರೂ. ಹೆಚ್ಚಳವಾಗಿದೆ.

ಶುಕ್ರವಾರದ ಏರಿಕೆಯ ಬಳಿಕ ಪ್ರತಿ 14.2 ಕೆಜಿ ಸಿಲಿಂಡರ್‌ಗೆ ಮುಂಬೈನಲ್ಲಿ 505.05 ರೂ.,ಕೋಲ್ಕತಾದಲ್ಲಿ 510.70 ರೂ. ಮತ್ತು ಚೆನ್ನೈನಲ್ಲಿ 495.39 ರೂ.ಗಳಾಗಿವೆ. ಸ್ಥಳೀಯ ತೆರಿಗೆಗಳು ಮತ್ತು ಸಾಗಾಣಿಕೆ ವೆಚ್ಚಗಳನ್ನು ಅವಲಂಬಿಸಿ ರಾಜ್ಯದಿಂದ ರಾಜ್ಯಕ್ಕೆ ಬೆಲೆಗಳು ಭಿನ್ನವಾಗಿರುತ್ತವೆ.

ಗ್ರಾಹಕರಿಂದ ಹೆಚ್ಚುವರಿ ಡೆಲಿವರಿ ಶುಲ್ಕ ದೋಚುತ್ತಿರುವ ವಿತರಕರು

ಪ್ರತಿ 14.2 ಕೆಜಿ ಸಿಲಿಂಡರ್‌ಗೆ ವಿತರಕರಿಗೆ ನಿಗದಿಗೊಳಿಸಲಾಗಿರುವ 50.58 ರೂ.ಕಮಿಷನ್‌ನಲ್ಲಿ 20.50 ರೂ.ಗಳ ಮತ್ತು 5 ಕೆಜಿ ಸಿಲಿಂಡರ್‌ಗೆ ನೀಡಲಾಗುವ 25.29 ರೂ.ಕಮಿಷನ್‌ನಲ್ಲಿ 10.25 ರೂ.ಗಳ ಡೆಲಿವರಿ ಶುಲ್ಕಗಳೂ ಸೇರಿವೆ. ನೇರವಾಗಿ ವಿತರಕರ ಮಳಿಗೆಯಿಂದ ಸಿಲಿಂಡರ್ ಪಡೆದುಕೊಳ್ಳುವ ಗ್ರಾಹಕರಿಗೆ ಡೆಲಿವರಿ ಶುಲ್ಕವನ್ನು ವಿಧಿಸುವಂತಿಲ್ಲ. ವಿತರಕರಿಗೆ ನೀಡುವ ಕಮಿಷನ್‌ನಲ್ಲಿ ಡೆಲಿವರಿ ಶುಲ್ಕಗಳೂ ಸೇರಿರುತ್ತವೆ ಎನ್ನುವುದು ಹೆಚ್ಚಿನ ಗ್ರಾಹಕರಿಗೆ ತಿಳಿದಿಲ್ಲ.ಇದರ ದುರುಪಯೋಗ ಮಾಡಿಕೊಳ್ಳುತ್ತಿರುವ ವಿತರಕರು ಗ್ರಾಹಕರಿಂದ ಹೆಚ್ಚುವರಿ ಡೆಲಿವರಿ ಶುಲ್ಕ ವಸೂಲು ಮಾಡುವುದು ಮಂದುವರಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X