Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎಲೆಕ್ಟ್ರಿಕಲ್ ಬಸ್‌ಗಳ ಸಂಚಾರಕ್ಕೆ...

ಎಲೆಕ್ಟ್ರಿಕಲ್ ಬಸ್‌ಗಳ ಸಂಚಾರಕ್ಕೆ ಮುಖ್ಯಮಂತ್ರಿ ನಿರ್ಧಾರ?

ವಾರ್ತಾಭಾರತಿವಾರ್ತಾಭಾರತಿ9 Nov 2018 9:12 PM IST
share
ಎಲೆಕ್ಟ್ರಿಕಲ್ ಬಸ್‌ಗಳ ಸಂಚಾರಕ್ಕೆ ಮುಖ್ಯಮಂತ್ರಿ ನಿರ್ಧಾರ?

ಬೆಂಗಳೂರು, ನ.9: ರಾಜ್ಯದ ರಾಜಧಾನಿಯಲ್ಲಿ ಎಲೆಕ್ಟ್ರಿಕಲ್ ಬಸ್‌ಗಳ ಕಾರ್ಯಾಚರಣೆ ವಿಚಾರಕ್ಕೆ ಸಂಬಂಧಿಸಿದ ಕಡತ ಇದೀಗ ಮುಖ್ಯಮಂತ್ರಿ ಕುಮಾರಸ್ವಾಮಿ ಬಳಿಗೆ ರವಾನೆಯಾಗಿದ್ದು, ಶೀಘ್ರ ಒಪ್ಪಿಗೆ ದೊರೆಯುವ ಸಾಧ್ಯತೆ ಇದೆ.

ಹಿಂದಿನ ಸರಕಾರದ ಅವಧಿಯಲ್ಲಿ ಬಿಎಂಟಿಸಿ ಕರೆದಿದ್ದ ಟೆಂಡರ್‌ನಲ್ಲಿ ಹೈದರಾಬಾದ್ ಮೂಲದ ಒಲೆಕ್ಟ್ರಾ ಕಂಪನಿ ಗುತ್ತಿಗೆ ಪಡೆದಿತ್ತು. ಆದರೆ, ಹೊಸ ಸರಕಾರ ಬಂದ ನಂತರ ಯೋಜನೆ ಬಗ್ಗೆ ಬಿಎಂಟಿಸಿ ಹಾಗೂ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಭಿನ್ನಾಭಿಪ್ರಾಯ ಹೊಂದಿದ್ದರಿಂದ ಅದು ಜಾರಿಯಾಗಲು ವಿಳಂಬವಾಗಿತ್ತು. ಗುತ್ತಿಗೆ ಆಧಾರದಲ್ಲಿ ಅತಿಕಡಿಮೆ ದರದಲ್ಲಿ ನಿಗಮಕ್ಕೆ ಎಲೆಕ್ಟ್ರಿಕಲ್ ಬಸ್ ಸಿಗುತ್ತದೆ ಎಂದು ಬಿಎಂಟಿಸಿ ವಾದಿಸಿದ್ದರೆ, ಖಾಸಗಿ ಕಂಪನಿಗೆ ಏಕೆ ಲಾಭ ಮಾಡಿಕೊಡಬೇಕು ಎನ್ನುವುದು ಸಚಿವರ ಅಭಿಪ್ರಾಯವಾಗಿತ್ತು. ಅಲ್ಲದೆ, ಬಿಎಂಟಿಸಿ ಹಿರಿಯ ಅಧಿಕಾರಿಗಳ ವಿರುದ್ಧ ತಮ್ಮಣ್ಣ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಈ ಎಲ್ಲ ವಿಚಾರ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಾರಿಗೆ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬಹಿರಂಗವಾಗಿತ್ತು.

ಎಂಡಿ ಬೆನ್ನಿಗೆ ಸಿಎಂ: ಸಭೆಯಲ್ಲಿ ಬಿಎಂಟಿಸಿ ಎಂಡಿ ವಿ.ಪೊನ್ನುರಾಜ್ ಪರವಾಗಿ ನಿಂತಿದ್ದ ಸಿಎಂ, ನಿಮ್ಮ (ಪೊನ್ನುರಾಜ್) ಪ್ರಾಮಾಣಿಕತೆ ಪ್ರಶ್ನಾತೀತ ಎಂದಿದ್ದರು. ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ನೇತೃತ್ವದಲ್ಲಿ ಸಮಿತಿ ರಚಿಸಿದ್ದ ಸಿಎಂ, ವರದಿ ಸಲ್ಲಿಸುವಂತೆ ಸೂಚಿಸಿದ್ದರು. ಅಲ್ಲದೆ, ಸಂಬಂಧಿಸಿದ ಕಡತಗಳನ್ನು ಸಾರಿಗೆ ಇಲಾಖೆಗೆ ಬಿಎಂಟಿಸಿ ಸಲ್ಲಿಸಿದೆ. ಇದನ್ನು ಆಧರಿಸಿ ಸಿಎಂ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.

ಮೊದಲ ಹಂತದಲ್ಲಿ 80 ಬಸ್: ಮೊದಲ ಹಂತದಲ್ಲಿ 80 ಬಸ್‌ಗಳನ್ನು ಗುತ್ತಿಗೆ ಆಧಾರದಲ್ಲಿ ನಿಗಮ ಪಡೆಯಲಿದೆ. ಇದರಲ್ಲಿ 12 ಮೀ. ಉದ್ದದ 39 ಸೀಟು ಸಾಮರ್ಥ್ಯದ 60 ಎಸಿ ಬಸ್‌ಗಳು ಹಾಗೂ 9 ಮಿ. ಉದ್ದದ 31 ಸೀಟಿನ 20 ಎಸಿ ರಹಿತ ಬಸ್ ಇರಲಿವೆ. ಕಂಪನಿಯ ಎಲೆಕ್ಟ್ರಿಕಲ್ ಬಸ್‌ಗಳನ್ನು ನಿರ್ವಹಣೆ ಮಾಡಲಿದ್ದರೆ, ಪರ್ಮಿಟ್ ಮತ್ತು ವಿದ್ಯುತ್ ದರದ ಜವಾಬ್ದಾರಿಯನ್ನು ಬಿಎಂಟಿಸಿ ವಹಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X