Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ತಂದೆಯ ಆಸ್ತಿ ಕಬಳಿಸಿದ ಮಕ್ಕಳ ವಿರುದ್ಧ...

ತಂದೆಯ ಆಸ್ತಿ ಕಬಳಿಸಿದ ಮಕ್ಕಳ ವಿರುದ್ಧ ಕಿಡಿಕಾರಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ9 Nov 2018 9:56 PM IST
share
ತಂದೆಯ ಆಸ್ತಿ ಕಬಳಿಸಿದ ಮಕ್ಕಳ ವಿರುದ್ಧ ಕಿಡಿಕಾರಿದ ಹೈಕೋರ್ಟ್

ಬೆಂಗಳೂರು, ನ.9: ತಂದೆಯ ಆಸ್ತಿಯನ್ನು ಕಬಳಿಸಿ ಬೀದಿಗೆ ತಳ್ಳಿದ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಕ್ಕಳ ಮೇಲೆ ಕೆಂಡ ಕಾರಿ,  ಮಕ್ಕಳಿಂದಲೇ ಕಿರುಕುಳ ಅನುಭವಿಸುತ್ತಿರುವ ತಂದೆಯ ಅಸಹಾಯಕತೆಯ ಬಗ್ಗೆ ಮರುಕಪಟ್ಟಿತು.  

ತನ್ನ ಮಕ್ಕಳಿಂದ ನ್ಯಾಯ ಕೊಡಿಸಬೇಕು ಹಾಗೂ ರಕ್ಷಣೆ ಒದಗಿಸಬೇಕೆಂದು ಕೋರಿ ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ಸಿ.ಎ.ಕೆರೆ ಹೋಬಳಿ ಅಣ್ಣೂರು ಗ್ರಾಮದ 71 ವರ್ಷದ ವೃದ್ಧ ಪಟೇಲ್ ಶಿವಲಿಂಗೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ನ್ಯಾಯಪೀಠ, ತಂದೆಯನ್ನು ಬೀದಿಗೆ ತಳ್ಳಿದ ಮಕ್ಕಳ ವಿರುದ್ಧ ಹರಿಹಾಯ್ದರಲ್ಲದೆ, ಉಪವಿಭಾಗಾಧಿಕಾರಿ ಆದೇಶ ಪಾಲಿಸದ ಪೊಲೀಸರ ಮೇಲೆ ಕಿಡಿಕಾರಿದರು. ಪ್ರತಿವಾದಿಗಳ ಪರ ವಕೀಲರನ್ನು ತೀವ್ರ ತರಾಟೆಗೆ ತೆಗೆದುಕೊಂಡು, ಅಂತೆಯೇ ವೃದ್ಧ ತಂದೆಯ ಅಸಹಾಯಕತೆಯನ್ನು ಕಂಡು ಮರುಕಪಟ್ಟರು.

ಇದೇ ವೇಳೆ ಪ್ರಕರಣದ ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳು, ಶಿವಲಿಂಗೇಗೌಡರು ತಮ್ಮ ಸ್ವಯಾರ್ಜಿತ ಆಸ್ತಿಯನ್ನು ಅನುಭವಿಸಲು ಮತ್ತು ಮಕ್ಕಳು ಅವರನ್ನು ಪಾಲನೆ, ಪೋಷಣೆ ಮಾಡುವ ಬಗ್ಗೆ ಮಂಡ್ಯ ಉಪವಿಭಾಗಾಧಿಕಾರಿಗಳು 2017ರ ನ.14ರಂದು ನೀಡಿದ್ದ ಆದೇಶ ಪಾಲನೆ ಮಾಡಿ, ಅದರ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಈ ಪ್ರಕರಣದಲ್ಲಿ ನಿರ್ಲಕ್ಷ ವಹಿಸಿದ ಕೆ.ಎಂ. ದೊಡ್ಡಿ ಪೊಲೀಸ್ ಠಾಣೆಯ ಸಂಬಂಧಪಟ್ಟ ಎಲ್ಲ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿ ವಿಚಾರಣೆಯನ್ನು ನ.19ಕ್ಕೆ ಮುಂದೂಡಿದರು.

ವಾದ-ಪ್ರತಿ ವಾದ ಆಲಿಸಿದ ಬಳಿಕ ನ್ಯಾಯಮೂರ್ತಿಗಳು ತೀರ್ಪು ಬರೆಸುತ್ತಿದ್ದರು. ಈ ವೇಳೆ ಶಿವಲಿಂಗೇಗೌಡರ ಹಿರಿಯ ಮಗ ರಾಮಕೃಷ್ಣ, ‘ಸ್ವಾಮಿ ನಮ್ದೂ ಸ್ವಲ್ಪ ಕೇಳಿ, ನಾವೂ ಹೇಳ್ತೀವಿ’ ಎಂದು ಏರಿದ ಧ್ವನಿಯಲ್ಲಿ ಕೇಳಿದ. ಇದರಿಂದ ಕೋಪಗೊಂಡ ನ್ಯಾಯಮೂರ್ತಿಗಳು ಕೋರ್ಟ್ ಕಲಾಪಕ್ಕೆ ಅಡ್ಡಿಪಡಿಸಿದ, ನ್ಯಾಯಾಲಯಕ್ಕೆ ಅಗೌರವ ತೋರಿದ ಕಾರಣಕ್ಕೆ ಆತನನ್ನು ಬಂಧಿಸಿ ಜೈಲಿಗೆ ಕರೆದುಕೊಂಡು ಹೋಗುವಂತೆ ಕೋರ್ಟ್‌ನಲ್ಲಿದ್ದ ಪೊಲೀಸರಿಗೆ ಸೂಚನೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X