Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೋಳ್ಯ ಲಕ್ಷ್ಮೀ ವೆಂಕಟರಮಣ ಮಠದಿಂದ...

ಪೋಳ್ಯ ಲಕ್ಷ್ಮೀ ವೆಂಕಟರಮಣ ಮಠದಿಂದ ವಿಗ್ರಹ, ಬೆಳ್ಳಿ ಸಾಮಗ್ರಿ ಕಳವು

ವಾರ್ತಾಭಾರತಿವಾರ್ತಾಭಾರತಿ9 Nov 2018 10:06 PM IST
share
ಪೋಳ್ಯ ಲಕ್ಷ್ಮೀ ವೆಂಕಟರಮಣ ಮಠದಿಂದ ವಿಗ್ರಹ, ಬೆಳ್ಳಿ ಸಾಮಗ್ರಿ ಕಳವು

ಪುತ್ತೂರು, ನ. 9: ಪುತ್ತೂರು ತಾಲೂಕಿನ ಕಬಕ ಗ್ರಾಮದ ಪೋಳ್ಯ ಶ್ರೀ ಲಕ್ಷ್ಮೀ ವೆಂಕಟರಮಣ ಮಠದಿಂದ ಪುರಾತನ ಕಾಲದ ಅಪರೂಪದ ಗಣಪತಿ ವಿಗ್ರಹಗಳ ಸಹಿತ 8 ವಿಗ್ರಹಗಳು, 2 ಕೆಜಿ ತೂಕದ ಬೆಳ್ಳಿಯ ಪ್ರಭಾವಳಿ ಸಹಿತ ಸುಮಾರು ನಾಲ್ಕು ಮುಕ್ಕಾಲು ಕೆಜಿಯಷ್ಟು ತೂಕದ ಬೆಳ್ಳಿಯ ಸಾಮಗ್ರಿಗಳು ಸೇರಿದಂತೆ ಅಪಾರ ಮೌಲ್ಯದ ಸೊತ್ತು ಕಳವಾದ ಘಟನೆ ಬೆಳಕಿಗೆ ಬಂದಿದೆ.

ದೇವಳದ ಗರ್ಭಗುಡಿಯಲ್ಲಿದ್ದ ಪುರಾತನ ಕಾಲದ ಗಣಪತಿ ವಿಗ್ರಹ ಸಹಿತ ದೇವಳದಲ್ಲಿದ್ದ 8 ವಿಗ್ರಹಗಳು, ಬೆಳ್ಳಿಯ ಕವಚ ಹೊಂದಿರುವ ಬಲಮುರಿ ತೀರ್ಥ ಶಂಖ, ದೇವರ ಪ್ರಭಾವಳಿ, ಬೆಳ್ಳಿಯ ಶಡಗೋಪ ಸಹಿತ 4.690 ಕೆ.ಜಿಯಷ್ಟು ಬೆಳ್ಳಿಯ ಸಾಮಗ್ರಿಗಳು ಕಳವಾಗಿದೆ. ಗರ್ಭಗುಡಿಯಲ್ಲಿದ್ದ ಭೂದೇವಿ, ಶ್ರೀದೇವಿ ಹಾಗೂ ವೆಂಕಟ್ರಮಣ ವಿಗ್ರಹದ ಬೆಳ್ಳಿ ಕವಚಗಳನ್ನು ಕಿತ್ತು ತೆಗೆದಿರುವ ದುಷ್ಕರ್ಮಿಗಳು ಈ ಮೂರು ವಿಗ್ರಹಗಳನ್ನು ದೇವಳದ ಒಳಾಂಗಣದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ.

ಗರ್ಭಗುಡಿಯಲ್ಲಿದ್ದ 650 ಗ್ರಾಂ ಬೆಳ್ಳಿ ಮತ್ತು 1 ಗ್ರಾಂ ಚಿನ್ನ ಹೊಂದಿರುವ ಭೂದೇವಿ ಮತ್ತು ಶ್ರೀದೇವಿ ವಿಗ್ರಹ, ವೆಂಕಟರಮಣ ದೇವರ 3 ಬೆಳ್ಳಿ ಕವಚ, ವೆಂಕಟ್ರಮಣ ದೇವರ ಒಂದು ಸಣ್ಣ ವಿಗ್ರಹ, 35 ಗ್ರಾಂ ತೂಕದ ಬೆಳ್ಳಿ ಕವಚದ ಉತ್ಸವ ಮೂರ್ತಿ, ಪಂಚಲೋಹದ 3 ಗಣಪತಿ ವಿಗ್ರಹ, 155 ಗ್ರಾಂ ತೂಕದ ಬೆಳ್ಳಿ ಕವಚ ಹೊಂದಿರುವ 3 ಗಣಪತಿ ವಿಗ್ರಹ, 500 ಗ್ರಾಂ ತೂಕದ ಬೆಳ್ಳಿಯ ಶಡಗೋಪ, 2 ಕೆ.ಜಿ.ತೂಕದ ಬೆಳ್ಳಿಯ ಪ್ರಭಾವಳಿ, 300 ಗ್ರಾಂ ತೂಕದ ಬೆಳ್ಳಿ ಕವಚ ಸಹಿತ ಬಲಮುರಿ ಶಂಖ, 750 ಗ್ರಾಂ ತೂಕದ 3 ಬೆಳ್ಳಿ ಗ್ಲಾಸು ಮತ್ತು 2 ಬೆಳ್ಳಿ ಚಮಚ, 300 ಗ್ರಾಂ ತೂಕದ ಬೆಳ್ಳಿ ಅರ್ಘ್ಯ ಪಾತ್ರೆ ಕಳವಾಗಿರು ವುದಾಗಿ ತಿಳಿದು ಬಂದಿದೆ. ಕಳವಾದ ಸೊತ್ತುಗಳ ಮೌಲ್ಯ 3 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಪುತ್ತೂರು ಡಿವೈಎಸ್ಪಿ ಶ್ರೀನಿವಾಸ್, ನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ತಿಮ್ಮಪ್ಪ ನಾಯ್ಕ, ಎಸ್‌ಐ ಅಜೇಯ್‌ಕುಮಾರ್ ಡಿ.ಎನ್, ಅಪರಾಧ ವಿಭಾಗದ ಎಸ್‌ಐ ರುಕ್ಮಯ, ಎ.ಎಸ್.ಐ ಲೋಕನಾಥ್ ಮತ್ತು ಸಿಬ್ಬಂದಿ ದೇವಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು ಮತ್ತು ಶ್ವಾನ ದಳವನ್ನು ಕರೆಸಲಾಗಿದೆ. ಕಳವು ಘಟನೆಯ ಕುರಿತು ಲಕ್ಷ್ಮೀ ವೆಂಕಟ್ರಮಣ ಮಠದ ಆಡಳಿತ ಮಂಡಳಿಯ ಅಧ್ಯಕ್ಷ ಉಮಾಶಂಕರ್ ಎದುರ್ಕಳ ಅವರು ಪುತ್ತೂರು ನಗರ ಪೊಲೀಸರಿಗೆ ದೂರು ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X