Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಟಿಪ್ಪು ಸುಲ್ತಾನ್ ಮಾನವ ಹಕ್ಕುಗಳ...

ಟಿಪ್ಪು ಸುಲ್ತಾನ್ ಮಾನವ ಹಕ್ಕುಗಳ ಸಂರಕ್ಷನಾಗಿದ್ದ: ಮೌಲಾನ ಇಕ್ಬಾಲ್ ನಾಯ್ತೆ

ವಾರ್ತಾಭಾರತಿವಾರ್ತಾಭಾರತಿ10 Nov 2018 7:30 PM IST
share
ಟಿಪ್ಪು ಸುಲ್ತಾನ್ ಮಾನವ ಹಕ್ಕುಗಳ ಸಂರಕ್ಷನಾಗಿದ್ದ: ಮೌಲಾನ ಇಕ್ಬಾಲ್ ನಾಯ್ತೆ

ಭಟ್ಕಳ, ನ.10 :ಟಿಪ್ಪು ಸುಲ್ತಾನ್ ತನ್ನ ಆಡಳಿತಾವಧಿಯಲ್ಲಿ ಎಲ್ಲ ಪ್ರಜೆಗಳನ್ನು ಸಮಾನವಾಗಿ ಕಾಣುತ್ತ ಮಾನವ ಹಕ್ಕುಗಳನ್ನು ಸಂರಕ್ಷಣೆಯನ್ನು ಮಾಡು ತ್ತಿದ್ದ ಎಂದು ಜಾಮಿಯಾ ಇಸ್ಲಾಮಿಯಾ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕ ಮೌಲಾನ ಮುಹಮ್ಮದ್ ಇಕ್ಬಾಲ್ ನಾಯ್ತೆ ನದ್ವಿ ಹೇಳಿದರು.

ಅವರು ಶನಿವಾರ  ನವಾಯತ್ ಕಾಲನಿಯ ಖುಷ್ ಹಾಲ್ ಶಾದಿ ಮಹಲ್ ನಲ್ಲಿ ತಾಲೂಕಾಡಳಿತ, ತಾಲೂಕಾ ಪಂಚಾಯತ್, ಪುರಸಭೆ, ಹಾಗೂ ಪಟ್ಟಣ ಪಂಚಾಯತ್ ಜಾಲಿ  ಇವರ ಸಂಯುಕ್ತ ಆಶ್ರಯದಲ್ಲಿ ಮೈಸೂರು ಹುಲಿ ಹಜರತ್ ಟಿಪ್ಪು ಸುಲ್ತಾನರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡುತ್ತಿದ್ದರು.

ಟಿಪ್ಪುವಿನ ಆಳ್ವಿಕೆಯಲ್ಲಿ ಹಿಂದು-ಮುಸ್ಲಿಮರು ಪರಸ್ಪರ ಸಹೋದರತೆಯಿಂದ ಬಾಳುತ್ತಿದ್ದರು. ನಿಮ್ನವರ್ಗದ ಏಳಿಗೆಗಾಗಿ ಶ್ರಮಿಸುತ್ತಿದ್ದ ಟಿಪ್ಪು ಮತಾಂಧ ನಾಗಿರದೆ ಪರಧರ್ಮ ಸಂಹಿಷ್ಟುವಾಗಿದ್ದ, ರಾಜ್ಯದಲ್ಲಿ ವಿವಿಧ ಕೈಗಾರಿಕೆಗಳನ್ನು ಸ್ಥಾಪಿಸುವುದರ ಮೂಲಕ ಕರ್ನಾಟಕದ ಅಭಿವೃದ್ಧಿಗೆ ಬಹಳಷ್ಟು ಕೊಡುಗೆ ಗಳನ್ನು ನೀಡಿದ್ದಾರೆ ಎಂದರು.

ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಜಿ.ಪಂ ಅಧ್ಯಕ್ಷೆ ಜಯಶ್ರೀ ಮೊಗೇರ್, ಟಿಪ್ಪು ಜಯಂತಿ ಆಚರಣೆಯನ್ನು ನಾವಿಂದು ಧರ್ಮ, ಜಾತಿ, ಭಾಷೆ ಯನ್ನು ಮರೆತು ಒಂದೇ ವೇದಿಕೆಯಲ್ಲಿ ಕುಳಿತು ಆಚರಿಸುತ್ತಿದ್ದೇವೆ. ನಾವೆಲ್ಲರೂ ಭಾರತೀಯರು ಎಂಬ ಪ್ರಜ್ಞೆ ನಮ್ಮಲ್ಲಿ ಬೆಳೆಸಿಕೊಂಡಾಗ ಮಾತ್ರ ದೇಶ ಅಭಿವೃಧ್ಧಿ ಕಾಣಲು ಸಾಧ್ಯವಾಗುತ್ತದೆ. ಟಿಪ್ಪು ಜಯಂತಿ ಸರ್ಕಾರದ ಕಾರ್ಯಕ್ರಮವಾಗಿದ್ದು ಇದನ್ನು ಅಚ್ಚುಕಟ್ಟಾಗಿ ನಡೆಸಿಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದ ಅವರು, ಹಲವಾರು ವರ್ಷದಿಂದ ಅನೇಕ ಗಣ್ಯರ ಜಯಂತಿಯನ್ನು ನಾವು ಆಚರಿಸುತ್ತಾ ಬಂದಿದ್ದೇವೆ. ಅದರಲ್ಲೂ ಟಿಪ್ಪು ಒಬ್ಬ ಮಹಾನ್ ವ್ಯಕ್ತಿ. ಬ್ರಿಟಿಷರ ವಿರುದ್ಧ ಹೋರಾಡಿ ಉತ್ತಮ ಆಡಳಿತವನ್ನು ನಡೆಸಿದ ಇಂತಹ ಮಾಹಾನ್ ವ್ಯಕ್ತಿಯ ಜಯಂತಿಯನ್ನು  ತುಂಬಾ ಸಂತೋಷದಿಂದ ಇಂದು ನಾವು ಆಚರಿಸುತ್ತಿದ್ದೇವೆ. ಟಿಪ್ಪು ಜಯಂತಿಯ ಕಾರ್ಯಕ್ರಮ ವನ್ನು ಉದ್ಘಾಟಿಸಿರುವುದು ನನಗೆ ಸಂತೋಷ ತಂದಿದೆ ಎಂದರು.

ಟಿಪ್ಪುವಿನ ಕುರಿತಾಗಿ ಉಪನ್ಯಾಸ ನೀಡಿದ ಸಾಹಿತಿ ಹಾಗೂ ವಿಶ್ರಾಂತ ಪ್ರಾಧ್ಯಾಪಕ ಶ್ರೀಪಾದ ಶೆಟ್ಟಿ ಮಾತನಾಡಿ, ಅರಸೊತ್ತಿಗೆ ಎಂದರೆ ಗುಲಾಬಿ ಹೂವಿನ ಹಾಸಿಗೆ ಮೇಲೆ ಮಲಾಗಿರುವವರಲ್ಲ. ಅಂದರೆ ಅದು ಮುಳ್ಳುಗಳ ಮಂಚ ಅಂತಹ ಪ್ರದೇಶದಲ್ಲಿ ಬಂದು ಟಿಪ್ಪು ಉತ್ತಮ ಕೆಲಸಗಳನ್ನು ಮಾಡಿದ್ದಾನೆ. ಟಿಪ್ಪು  ಒಬ್ಬ ಮಹಾನ್ ವ್ಯಕ್ತಿಯಾಗಿದ್ದು. ನಾವೆಲ್ಲ ಟಿಪ್ಪುವಿನಲ್ಲಿರುವ ಒಳ್ಳೆತನಗಳನ್ನು  ಅಳವಡಿಸಿಕೊಳ್ಳುವಲ್ಲಿ ಗಮನ ಹರಿಸಬೇಕು. ಟಿಪ್ಪುವಿನ ತಂದೆಯಾದ ಹೈದರಾಲಿ ಬೆಂಗಳೂರಿನ ಲಾಲ್‍ಬಾಗ್ ಕಟ್ಟಲು ಆರಂಭಿಸಿದರೆ ಟಿಪ್ಪು ಅದನ್ನು ಪೂರ್ಣ ಗೊಳಿಸುವ ಕಾರ್ಯಮಾಡುತ್ತಾನೆ ಎಂದ ಅವರು, ‘ನರಿಯಾಗಿ ನೂರು ದಿನ ಬಾಳುವುದಕ್ಕಿಂತ ಹುಲಿಯಾಗಿ ಮೂರು ದಿನ ಬಾಳುವುದು ದೊಡ್ಡದು, ಆ ಕಾರಣಕ್ಕಾಗಿ ಮೂರು ದಿನ ಬಾಳಿದರೂ ಆತ ಬಾಳಿ ಬೆಳಗಿದ ದಿನಗಳು ಇವತ್ತಿಗೂ ಒಂದು ಚರಿತ್ರೆಯಾಗಿ ಉಳಿದಿದೆ. ಒಬ್ಬ ವ್ಯಕ್ತಿಯಾದವನು ನ್ಯಾಯದ  ಹಾದಿಯನ್ನು ಬಿಟ್ಟುಹೋಗಬಾರದು. ಅದು ಎಲ್ಲಾ ಧರ್ಮದವರಿಗೂ  ಅನ್ವಯಿಸುತ್ತದೆ.  ನೀನು ನಿನ್ನ ಮನಸಾಕ್ಷಿಗೆ ಒಪ್ಪುವಂತೆ ಕೆಲಸ ಮಾಡಬೇಕು’ ಎಂದರು.

ಈ ಸಂದರ್ಭದಲ್ಲಿ ಟಿಪ್ಪುವಿನ ಕುರಿತು ಪ್ರಬಂದ ಸ್ಪರ್ಧೆಯಲ್ಲಿ ಭಾಗವಹಿಸಿದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಹಾಯಕ ಆಯುಕ್ತ ಸಾಜೀದ್ ಅಹ್ಮಮದ್ ಮುಲ್ಲಾ, ತಹಶಿಲ್ದಾರ ವಿ.ಎನ್.ಬಾಡಕರ, ಪೊಲೀಸ್ ಉಪ ಅಧೀಕ್ಷಕ ವೆಲೈಂಟೆನ್ ಡಿಸೋಜಾ, ಪುರಸಭೆ ಅಧ್ಯಕ್ಷ ಮೊಹಮ್ಮದ ಸಾಧಿಕ ಮಟ್ಟಾ, ಜಿ.ಪಂ.ಸದಸ್ಯೆ ಸಿಂದು ಭಾಸ್ಕರ ನಾಯ್ಕ, ಜಾಲಿ ಪಟ್ಟಣ ಪಂಚಾಯತ ಅಧ್ಯಕ್ಷ ಆದಂ ಪಣಂಬೂರು. ಕಾರ್ಯನಿರ್ವಾಹಕ ಅಧಿಕಾರಿ ಜೆ.ಡಿ.ಮುರಗೋಡು, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವುಡ, ಜಾಲಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ವೇಣುಗೋಪಾಲ ಶಾಸ್ತ್ರೀ, ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಪ್ರಧಾನ ಕಾರ್ಯದರ್ಶಿ ಮುಹಿದ್ದೀನ್ ಅಲ್ತಾಫ ಖರೂರಿ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X