Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾಂಗ್ರೆಸ್ ಪ್ರಣಾಳಿಕೆಗೆ 20 ಉಪ ಸಮಿತಿಗಳ...

ಕಾಂಗ್ರೆಸ್ ಪ್ರಣಾಳಿಕೆಗೆ 20 ಉಪ ಸಮಿತಿಗಳ ರಚನೆ: ರಾಜ್ಯಸಭಾ ಸದಸ್ಯ ಪ್ರೊ.ಎಂ.ವಿ.ರಾಜೀವ್‌ ಗೌಡ

ಲೋಕಸಭಾ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ10 Nov 2018 9:32 PM IST
share
ಕಾಂಗ್ರೆಸ್ ಪ್ರಣಾಳಿಕೆಗೆ 20 ಉಪ ಸಮಿತಿಗಳ ರಚನೆ: ರಾಜ್ಯಸಭಾ ಸದಸ್ಯ ಪ್ರೊ.ಎಂ.ವಿ.ರಾಜೀವ್‌ ಗೌಡ

ಬೆಂಗಳೂರು, ನ.10: ಮುಂಬರುವ ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯನ್ನು ಸಿದ್ಧಪಡಿಸಲು ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಅಧ್ಯಕ್ಷತೆಯಲ್ಲಿ 20 ಪ್ರಣಾಳಿಕೆ ಉಪ ಸಮಿತಿಗಳನ್ನು ರಚಿಸಲಾಗಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ಎಐಸಿಸಿ ಸಂಶೋಧನಾ ವಿಭಾಗದ ಮುಖ್ಯಸ್ಥ ಪ್ರೊ.ಎಂ.ವಿ. ರಾಜೀವ್‌ ಗೌಡ ತಿಳಿಸಿದರು.

ಶನಿವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಶಶಿತರೂರ್, ಜೈರಾಮ್ ರಮೇಶ್, ಆನಂದ್‌ಶರ್ಮ, ಮನ್ಪ್ರೀತ್‌ ಬಾದಲ್, ಪ್ರೊ.ಬಾಲಚಂದ್ರ ಮುಂಗೇಕರ್, ಮೀನಾಕ್ಷಿ ನಟರಾಜನ್, ಕೆ.ರಾಜು ಹಾಗೂ ತನ್ನ ನೇತೃತ್ವದಲ್ಲಿ ಈ ಉಪ ಸಮಿತಿಗಳು ಕಾರ್ಯನಿರ್ವಹಿಸಲಿವೆ ಎಂದರು.

ಪ್ರಣಾಳಿಕೆ ಸಮಿತಿಯು ಕಳೆದ ಅಕ್ಟೋಬರ್ ತಿಂಗಳಿನಿಂದ ದೇಶಾದ್ಯಂತ ಸಂಚರಿಸಿ ಜನರ ಕುಂದು ಕೊರತೆಗಳು ಮತ್ತು ಸಲಹೆ ಸೂಚನೆಗಳನ್ನು ಸಂಗ್ರಹಿಸುತ್ತಿದೆ. ದೇಶಾದ್ಯಂತ ಸುಮಾರು 200 ಸಮಾಲೋಚನಾ ಸಭೆಗಳನ್ನು ನಡೆಸಲು ಉದ್ದೇಶಿಸಿದ್ದು, ಈವರೆಗೆ 44 ಸಭೆಗಳನ್ನು ನಡೆಸಲಾಗಿದೆ ಎಂದು ಅವರು ಹೇಳಿದರು.

ಪ್ರಣಾಳಿಕೆ ಉಪ ಸಮಿತಿಗಳ ವಿವರ: ಕೃಷಿ, ತೋಟಗಾರಿಕೆ, ಕಾರ್ಮಿಕರು, ಉದ್ಯಮ, ಆರ್ಥಿಕ ನೀತಿ, ತೆರಿಗೆ ನೀತಿ, ಎಂಎಸ್‌ಎಂಇ ನೀತಿ, ಜಿಎಸ್ಟಿ, ಉದ್ಯೋಗ, ಯುವಜನತೆ, ಕ್ರೀಡೆ, ಮಹಿಳೆಯರು, ಮಕ್ಕಳು, ಎಸ್ಸಿ-ಎಸ್ಟಿ, ಅಲ್ಪಸಂಖ್ಯಾತರು, ಧಾರ್ಮಿಕ ಸ್ವಾತಂತ್ರ, ವೈಯಕ್ತಿಕ ಕಾನೂನುಗಳು, ಮಾಜಿ ಸೈನಿಕರು, ಸ್ವಾತಂತ್ರ ಹೋರಾಟಗಾರರು, ಹಿರಿಯ ನಾಗರಿಕರು, ಅಸಂಘಟಿತ ವಲಯ, ಮೀನುಗಾರರು, ಸಾಮಾಜಿಕ ಭದ್ರತೆ.

ಶಿಕ್ಷಣ, ಶಿಕ್ಷಕರು, ಆರೋಗ್ಯ, ನೀರು, ನೈರ್ಮಲ್ಯ, ಆಹಾರ ಭದ್ರತೆ, ವಸತಿ, ನಗರೀಕರಣ, ಮೂಲಸೌಕರ್ಯ, ಕೇಂದ್ರ-ರಾಜ್ಯ ಸಂಬಂಧಗಳು, ರಾಷ್ಟ್ರೀಯ ಭದ್ರತೆ, ವಿದೇಶಿ ನೀತಿ, ಆಂತರಿಕ ಭದ್ರತೆ, ಪಾರದರ್ಶಕತೆ ಮತ್ತು ಹೊಣೆಗಾರಿಕೆ ಸೇರಿದಂತೆ ಇನ್ನಿತರ ಕ್ಷೇತ್ರಗಳ ಕುರಿತು ಉಪ ಸಮಿತಿಗಳು ಸಮಾಲೋಚನಾ ಸಭೆಗಳನ್ನು ನಡೆಸಿ ಜನರ ಅಭಿಪ್ರಾಯ, ಸಲಹೆಗಳನ್ನು ಸಂಗ್ರಹಿಸಲಿವೆ ಎಂದು ಅವರು ವಿವರಣೆ ನೀಡಿದರು.

ಸಾರ್ವಜನಿಕರು ಯಾವುದೇ ಕ್ಷೇತ್ರದ ಕುರಿತು ತಮ್ಮ ಅನಿಸಿಕೆ, ಅಭಿಪ್ರಾಯ ಮತ್ತು ಸಲಹೆಗಳನ್ನು ನಮ್ಮ ಇಮೇಲ್ ವಿಳಾಸ ನಮ್ಮ ವಾಟ್ಸಪ್ ನಂಬರ್ 72920 88245 ಗೆ ಕಳುಹಿಸಬಹುದು. ಅಲ್ಲದೇ, ನಮ್ಮ ಚುನಾವಣಾ ಪ್ರಣಾಳಿಕೆಗೆ ಸಂಬಂಧಿಸಿದ ವೆಬ್‌ಸೈಟ್ manifesto@inc.in, manifesto.nic.in  ಗೆ ಭೇಟಿ ನೀಡಬಹುದಾಗಿದೆ ಎಂದು ರಾಜೀವ್‌ಗೌಡ ಹೇಳಿದರು.

‘ಜನ ಧ್ವನಿ-ನಿಮ್ಮ ಧ್ವನಿ-ಜನ್ ಆವಾಝ್’ ಮೂಲಕ, ಸಮಾಜದ ಎಲ್ಲ ವಿಭಾಗಗಳ ಜನರಿಂದ ಅನಿಸಿಕೆ, ಅಭಿಪ್ರಾಯ ಮತ್ತು ಸಲಹೆಗಳನ್ನು ಪಡೆಯಲು ಕಾಂಗ್ರೆಸ್ ಕಾರ್ಯಪ್ರವೃತ್ತವಾಗಿದೆ. ಯಾವುದೇ ರಾಜಕೀಯ ಪಕ್ಷ ದೇಶದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಭದ್ರತಾ ವ್ಯವಸ್ಥೆ, ಅಖಂಡತೆಯನ್ನು ಎಚ್ಚರಿಕೆಯಿಂದ ಮತ್ತು ಸೂಕ್ಷ್ಮವಾಗಿ ಗ್ರಹಿಸಬೇಕೆಂದು ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ದೃಢವಾಗಿ ನಂಬಿದ್ದಾರೆ ಎಂದು ರಾಜೀವ್‌ ಗೌಡ ತಿಳಿಸಿದರು.

ಆದರೆ, ಇದಕ್ಕೆ ವ್ಯತಿರಿಕ್ತವಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರವು ಜನರ ಧ್ವನಿಯನ್ನು ನಿರ್ಲಕ್ಷಿಸುವುದು ಮಾತ್ರವಲ್ಲದೆ, ಅವುಗಳನ್ನು ನಿಗ್ರಹಿಸುತ್ತಿದೆ. ಬಿಜೆಪಿಯು ಸೈದ್ಧಾಂತಿಕ ಪ್ರವೃತ್ತಿಗಳ ಮೂಲಕ ನಡೆಯುತ್ತಿರುವ ಜನ ವಿರೋಧಿ ನೀತಿಗಳನ್ನು ಪೋಷಿಸುತ್ತಿದೆ ಎಂದು ರಾಜೀವ್‌ ಗೌಡ ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎಐಸಿಸಿ ಸಂಶೋಧನಾ ವಿಭಾಗದ ರಾಜ್ಯ ಘಟಕದ ಸಂಭಾವ್ಯ ಅಧ್ಯಕ್ಷ ಮನ್ಸೂರ್‌ ಖಾನ್, ಕೆಪಿಸಿಸಿ ಮಾಧ್ಯಮ ವಿಭಾಗದ ಸಂಚಾಲಕ ನಟರಾಜ್‌ ಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X