ನ.22ರಂದು ಬಿಜೆಪಿಯೇತರ ಪಕ್ಷಗಳ ಸಭೆ ಕರೆದ ಚಂದ್ರಬಾಬು ನಾಯ್ಡು
ಹೈದರಾಬಾದ್, ನ.10: ವಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನವನ್ನು ಮುಂದುವರಿಸಿರುವ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ನವೆಂಬರ್ 22ರಂದು ಬಿಜೆಪಿಯೇತರ ಪಕ್ಷಗಳ ಸಭೆ ಕರೆದಿದ್ದಾರೆ. ದಿಲ್ಲಿಯಲ್ಲಿರುವ ಆಂಧ್ರ ಪ್ರದೇಶ ಭವನದಲ್ಲಿ ಸಭೆ ನಡೆಯಲಿದೆ.
ಕಳೆದ ಕೆಲ ದಿನಗಳಿಂದ ಚಂದ್ರಬಾಬು ನಾಯ್ಡು ವಿಪಕ್ಷಗಳ ನಾಯಕರನ್ನು ಭೇಟಿಯಾಗುತ್ತಿದ್ದಾರೆ. ಇಂದು ಬೆಳಗ್ಗೆ ನಾಯ್ಡು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.
Next Story