Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಂಸತ್ತನ್ನೇ ವಿಸರ್ಜಿಸಿದ ಲಂಕಾ ಅಧ್ಯಕ್ಷ:...

ಸಂಸತ್ತನ್ನೇ ವಿಸರ್ಜಿಸಿದ ಲಂಕಾ ಅಧ್ಯಕ್ಷ: ಜನವರಿ 5ರಂದು ಮಧ್ಯಂತರ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ10 Nov 2018 10:13 PM IST
share
ಸಂಸತ್ತನ್ನೇ ವಿಸರ್ಜಿಸಿದ ಲಂಕಾ ಅಧ್ಯಕ್ಷ: ಜನವರಿ 5ರಂದು ಮಧ್ಯಂತರ ಚುನಾವಣೆ

ಕೊಲಂಬೊ, ನ. 10: ಅತ್ಯಂತ ವಿವಾದಾಸ್ಪದ ಕ್ರಮವೊಂದರಲ್ಲಿ, ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಶುಕ್ರವಾರ ಸಂಸತ್ತನ್ನು ವಿಸರ್ಜಿಸಿದ್ದಾರೆ ಹಾಗೂ ಜನವರಿ 5ರಂದು ಮಧ್ಯಂತರ ಚುನಾವಣೆ ನಡೆಯುವುದಾಗಿ ಘೋಷಿಸಿದ್ದಾರೆ.

ಹೊಸದಾಗಿ ಚುನಾವಣೆ ನಡೆದರೆ, ತನ್ನ ಆಯ್ಕೆಯ ಪ್ರಧಾನಿ ಅಭ್ಯರ್ಥಿಗೆ ಬೆಂಬಲ ದೊರೆಯುವುದು ಎಂಬ ನಿರೀಕ್ಷೆಯಿಂದ ಅಧ್ಯಕ್ಷರು ಈ ಜೂಜಿಗೆ ಇಳಿದಿದ್ದಾರೆ ಎಂದು ಸಚಿವರೊಬ್ಬರು ಎಎಫ್‌ಪಿ ಸುದ್ದಿ ಸಂಸ್ಥೆಗೆ ತಿಳಿಸಿದರು.

ಅಧ್ಯಕ್ಷರು ಕಳೆದ ತಿಂಗಳು, ಪ್ರಧಾನಿಯಾಗಿದ್ದ ರನಿಲ್ ವಿಕ್ರಮೆಸಿಂಘೆಯನ್ನು ವಜಾಗೊಳಿಸಿ ಮಾಜಿ ಅಧ್ಯಕ್ಷ ಮಹಿಂದ ರಾಜಪಕ್ಸ ಅವರನ್ನು ಪ್ರಧಾನಿಯಾಗಿ ನೇಮಿಸಿದ್ದರು. ಆದರೆ, ಅಧ್ಯಕ್ಷರ ಈ ಕ್ಷಿಪ್ರಕ್ರಾಂತಿಯ ವಿರುದ್ಧ ಬಂಡೆದ್ದ ವಿಕ್ರಮೆಸಿಂಘೆ, ಅಧಿಕಾರದಿಂದ ಕೆಳಗಿಳಿಯಲು ಒಪ್ಪಲಿಲ್ಲ. ಈ ಹಿನ್ನೆಲೆಯಲ್ಲಿ ಹಿಂದೂಮಹಾ ಸಾಗರದ ದ್ವೀಪ ರಾಷ್ಟ್ರದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಉಂಟಾಗಿತ್ತು.

ಅಧ್ಯಕ್ಷರು ಸಂಸತ್ತನ್ನೂ ನವೆಂಬರ್ 14ರವರೆಗೆ ಅಮಾನತಿನಲ್ಲಿಟ್ಟಿದ್ದರು. ಮುಂದೆ ಸಂಸತ್ತಿನ ಅಧಿವೇಶನ ನಡೆದಾಗ ತನ್ನ ಸರಕಾರ ಬಹುಮತ ಪರೀಕ್ಷೆಯಲ್ಲಿ ತೇರ್ಗಡೆಯಾಗುವುದು ಕಷ್ಟ ಎಂಬುದನ್ನು ಅರಿತ ಸಿರಿಸೇನ 225 ಸದಸ್ಯ ಬಲದ ಸಂಸತ್ತನ್ನೇ ವಿಸರ್ಜಿಸಿದ್ದಾರೆ.

ಸಾಮಾನ್ಯ ಪರಿಸ್ಥಿತಿಯಲ್ಲಿ ಶ್ರೀಲಂಕಾದಲ್ಲಿ 2020ಕ್ಕಿಂತ ಮೊದಲು ಚುನಾವಣೆ ನಡೆಯುವಂತಿಲ್ಲ.

ಪಕ್ಷಾಂತರಕ್ಕೆ ಕೋಟ್ಯಂತರ ರೂಪಾಯಿ ಆಮಿಷ: ಪ್ರತಿಪಕ್ಷ ಸಂಸದರ ಆರೋಪ

ಪ್ರಧಾನಿ ರನಿಲ್ ವಿಕ್ರಮೆಸಿಂಘೆಯನ್ನು ವಜಾಗೊಳಿಸಿದ ಬಳಿಕ, ಪ್ರತಿಪಕ್ಷದ ಸಂಸದರನ್ನು ಖರೀದಿಸುವುದಕ್ಕೆ ಹೆಚ್ಚಿನ ಸಮಯಾವಕಾಶವನ್ನು ಪಡೆಯಲು ಸಿರಿಸೇನ ಸಂಸತ್ತನ್ನು ಅಮಾನತಿನಲ್ಲಿಟ್ಟರು ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಅದು ಸಾಧ್ಯವಿಲ್ಲ ಎನ್ನುವುದು ಮನವರಿಕೆಯಾದ ಬಳಿಕ, ಅಧಿಕಾರವನ್ನು ತನ್ನಲ್ಲೇ ಉಳಿಸಿಕೊಳ್ಳುವ ಪ್ರಯತ್ನವಾಗಿ ಸಂಸತ್ತನ್ನೇ ವಿಸರ್ಜಿಸಿದ್ದಾರೆ ಎಂದು ಅವು ಹೇಳಿವೆ.

ಸಿರಿಸೇನರ ಬಣಕ್ಕೆ ಹಾರಲು ತಮಗೆ ಕೋಟ್ಯಂತರ ರೂಪಾಯಿ ಮೊತ್ತದ ಆಮಿಷಗಳನ್ನು ಒಡ್ಡಲಾಗಿತ್ತು ಎಂಬುದಾಗಿ ಹಲವಾರು ಪ್ರತಿಪಕ್ಷ ಸಂಸದರು ಆರೋಪಿಸಿದ್ದಾರೆ.

ಕನಿಷ್ಠ 8 ಸಂಸದರು ಈಗಾಗಲೇ ಅಧ್ಯಕ್ಷರ ಬಣಕ್ಕೆ ಹಾರಿದ್ದಾರೆ.

ಅಮೆರಿಕ, ಪಾಶ್ಚಾತ್ಯ ದೇಶಗಳ ಖಂಡನೆ

ಶ್ರೀಲಂಕಾ ಸಂಸತ್ತನ್ನು ವಿಸರ್ಜಿಸುವ ಅಧ್ಯಕ್ಷ ಮೈತ್ರಿಪಾಲ ಸಿರಿಸೇನರ ಕ್ರಮವನ್ನು ಅಮೆರಿಕ, ಬ್ರಿಟನ್ ಸೇರಿದಂತೆ ಪಾಶ್ಚಾತ್ಯ ದೇಶಗಳು ಟೀಕಿಸಿವೆ.

‘‘ಶ್ರೀಲಂಕಾ ಸಂಸತ್ತನ್ನು ವಿಸರ್ಜಿಸಲಾಗುವುದು ಎಂಬ ಸುದ್ದಿಯಿಂದ ಅಮೆರಿಕ ಕಳವಳಗೊಂಡಿದೆ. ಇದು ದೇಶದ ಸಾಂವಿಧಾನಿಕ ಬಿಕ್ಕಟ್ಟನ್ನು ಮತ್ತಷ್ಟು ಬಿಗಡಾಯಿಸಿದೆ’’ ಎಂಬುದಾಗಿ ಅಮೆರಿಕದ ದಕ್ಷಿಣ ಮತ್ತು ಮಧ್ಯ ಏಶ್ಯ ವ್ಯವಹಾರಗಳ ಬ್ಯೂರೋ ಟ್ವೀಟ್ ಮಾಡಿದೆ.

ಬ್ರಿಟನ್, ಕೆನಡ ಮತ್ತು ಆಸ್ಟ್ರೇಲಿಯಗಳೂ ಅಧ್ಯಕ್ಷ ಸಿರಿಸೇನರ ಕ್ರಮವನ್ನು ಟೀಕಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X