Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಮಾಜದಲ್ಲಿ ಕೋಮುದ್ವೇಷ ಬಿತ್ತುವ...

ಸಮಾಜದಲ್ಲಿ ಕೋಮುದ್ವೇಷ ಬಿತ್ತುವ ಬಿಜೆಪಿಯವರಿಗೆ ಉಳಿಗಾಲವಿಲ್ಲ: ಸಚಿವ ಜಿ.ಟಿ.ದೇವೇಗೌಡ

ಮೈಸೂರು ಜಿಲ್ಲಾಡಳಿತದಿಂದ ಟಿಪ್ಪು ಜಯಂತಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ10 Nov 2018 11:12 PM IST
share
ಸಮಾಜದಲ್ಲಿ ಕೋಮುದ್ವೇಷ ಬಿತ್ತುವ ಬಿಜೆಪಿಯವರಿಗೆ ಉಳಿಗಾಲವಿಲ್ಲ: ಸಚಿವ ಜಿ.ಟಿ.ದೇವೇಗೌಡ

ಮೈಸೂರು,ನ.10: ಸಮಾಜದಲ್ಲಿ ಕೋಮು ದ್ವೇಷವನ್ನು ಬಿತ್ತುತ್ತಿರುವ ಬಿಜೆಪಿಯವರಿಗೆ ಉಳಿಗಾಲವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ವಾಗ್ದಾಳಿ ನಡೆಸಿದರು.

ನಗರದ ಕಲಾಮಂದಿರಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಾಗೂ ಹಜರತ್ ಟಿಪ್ಪು ಸುಲ್ತಾನ್ ಜಯಂತೋತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಶನಿವಾರ ನಡೆದ ಟಿಪ್ಪು ಜಯಂತಿ ಮಹೋತ್ಸವದಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಂತರ ಅವರು ಮಾತನಾಡಿದರು.

ಬಿಜೆಪಿಯವರು ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಜಾತಿ ಧರ್ಮದ ಹೆಸರಿನಲ್ಲಿ ಮತ ಕೇಳುವವರಿಗೆ ಹೆಚ್ಚು ದಿನ ಉಳಿಗಾಲವಿಲ್ಲ, ಅವರ ಆಟ ನಡೆಯುವುದಿಲ್ಲ. ಒಂದಲ್ಲ ಒಂದು ದಿನ ಅವರ ಬಣ್ಣ ಬಯಲಾಗಲಿದೆ ಎಂದು ಹೇಳಿದರು.

ಅಂಬೇಡ್ಕರ್, ಬಸವಣ್ಣ, ವಾಲ್ಮೀಕಿ, ಕನಕದಾಸ, ವಿಶ್ವಕರ್ಮ, ಭಗೀರಥ ಜಯಂತಿ ಆಚರಣೆ ಮಾಡುವ ರೀತಿಯಲ್ಲಿ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸಲಾಗುತ್ತಿದೆ. ಆದರೆ ಇದನ್ನು ಕೆಲವರು ಓಟ್ ಬ್ಯಾಂಕ್‍ಗಾಗಿ ವಿರೋಧಿಸುತ್ತಿದ್ದಾರೆ. ಸಂವಿಧಾನದ ಅಡಿಯಲ್ಲಿ ಎಲ್ಲಾ ಆಚರಣೆಗಳನ್ನು ಮಾಡಲಾಗುತ್ತಿದೆ. ಅಂಬೇಡ್ಕರ್ ಅವರು ನೀಡಿದ ಸಂವಿಧಾನವನ್ನು ಎಲ್ಲರೂ ಗೌರವಿಸಬೇಕು, ಸಂವಿಧಾನಕ್ಕೆ ವಿರೋಧವಾಗಿ ನಡೆದುಕೊಂಡರೆ ಸಮಾಜ ಪ್ರತಿಯೊಂದನ್ನು ಗಮನಿಸುತ್ತಿರುತ್ತದೆ ಎಚ್ಚರಿಕೆಯಿಂದ ಇರಿ ಎಂದು ಬಿಜೆಪಿಯವರಿಗೆ ಎಚ್ಚರಿಸಿದರು.

ಟಿಪ್ಪು ಸುಲ್ತಾನ್ ಒಬ್ಬ ಸ್ವತಂತ್ರ ಸೇನಾನಿ. ಬ್ರಿಟಿಷರ ವಿರುದ್ಧ ಸಾಕಷ್ಟು ಹೋರಾಟಗಳನ್ನು ಮಾಡಿದ್ದಾನೆ. ಆ ಕಾಲದಲ್ಲೇ ಟಿಪ್ಪು ಭೂ ಸುಧಾರಣೆ ತಂದು ಉಳುವವರಿಗೆ ಭೂಮಿ ಎಂಬ ಘೋಷಣೆ ಮಾಡಿದ್ದರು. ಪಟೇಲರು, ಶಾನುಭೋಗರ ಆಡಳಿತಕ್ಕೆ ಕೊನೆಗಾಣಿಸಿದ್ದರು. ಹಾಗೆ ಮೈಸೂರು ಪ್ರಾಂತ್ಯದಲ್ಲಿ 36 ಸಾವಿರ ಕೆರೆ ಕಟ್ಟೆಗಳನ್ನು ನಿರ್ಮಾಣ ಮಾಡಿದ್ದರು. 16 ಸಾವಿರ ಬಾವಿ ತೆಗೆಸಿ ಕೃಷಿ ಚಟುವಟಿಕೆಗೆ ಸಹಕಾರಿಯಾಗಿದ್ದರು ಎಂದು ಟಿಪ್ಪು ಅವರನ್ನು ಸ್ಮರಿಸಿದರು.

ಸಿಎಂ ಗೈರು ಅಸಮಧಾನ ಉಂಟುಮಾಡಿದೆ: 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ತನ್ವೀರ್ ಸೇಠ್ ಅವರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ವೈದ್ಯರು ವಿಶ್ರಾಂತಿ ಪಡೆಯಿರಿ ಎಂದು ಹೇಳಿರುವುದು ಸರಿ. ಆದರೆ ಅವರು ಎಲ್ಲಿ ಇದ್ದಾರೋ ಅಲ್ಲೇ ಟಿಪ್ಪು ಜಯಂತಿಯಲ್ಲಿ ಭಾಗವಹಿಸಬೇಕಿತ್ತು. ಅವರು ಭಾಗವಹಿದೆ ಇರುವುದಕ್ಕೆ ನಮ್ಮ ಸಮುದಾಯದಲ್ಲಿ ಅಸಮಧಾನವಿದೆ ಎಂದು ಹೇಳಿದರು.

ಸಿದ್ದರಾಮಯ್ಯ ಅವರು ಟಿಪ್ಪು ಜಯಂತಿ ಆಚರಣೆ ಮಾಡಿದರು. ಈ ಸಂದರ್ಭದಲ್ಲಿ ನಾವು ಅವರನ್ನು ನೆನಪಿಸಿಕೊಳ್ಳಬೇಕು. ಆದರೆ ಸಮ್ಮಿಶ್ರ ಸರ್ಕಾರದಲ್ಲಿ ಇದೇ ಮೊದಲ ಬಾರಿಗೆ ಈಜಯಂತಿ ಆಚರಣೆ ಮಾಡುತ್ತಿರುವುದು. ಇಂತಹ ವೇಳೆ ಮುಖ್ಯಮಂತ್ರಿಗಳು ಗೈರಾಗಿರುವುದು ಬೇಸರವುಂಟು ಮಾಡಿದೆ. ಇದು ಸಮಾಜದಲ್ಲಿ ತಪ್ಪು ಸಂದೇಶವನ್ನು ಉಂಟುಮಾಡಲಿದೆ ಎಂದು ಹೇಳಿದರು.

ಗಾಂಧೀಜಿ ಕೊಂದವರಿಂದ ನೈತಿಕತೆ ಕಲಿಯಬೇಕಿಲ್ಲ: ಹಿಂದೂವಾದಿಗಳು ಎಂದು ಹೇಳುವವರು ಮಹಾತ್ಮ ಗಾಂಧೀಜಿಯನ್ನು ಏನು ಮಾಡಿದರು ಎಂದು ಪ್ರಶ್ನಿಸಿದ ತನ್ವೀರ್ ಸೇಠ್, ಮಹಾತ್ಮ ಗಾಂಧೀಜಿಯನ್ನು ಕೊಂದ ಜನರಿಂದ ನಾವು ನೈತಿಕತೆ ಕಲಿಯಬೇಕಿಲ್ಲ ಎಂದು ಸಂಘಪರಿವಾರ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದರು.

ಬಿಜೆಪಿಯವರು ಬಹಿರಂಗ ಚೆರ್ಚೆಗೆ ಬರಲಿ: ಟಿಪ್ಪು ಸುಲ್ತಾನ್ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರು ಬಹಿರಂಗ ಚರ್ಚೆಗೆ ಬರಲಿ ಎಂದು ಶಾಸಕ ತನ್ವೀರ್ ಸೇಠ್ ಸವಾಲು ಹಾಕಿದರು. ಟಿಪ್ಪು ಬಗ್ಗೆ ಅಪಪ್ರಚಾರ ಮಾಡುತ್ತಿರುವ ಮಂದಿ ಟಿಪ್ಪು ಇತಿಹಾಸ ತಿಳಿದುಕೊಳ್ಳದೆ ಕೋಮು ಸಂಘರ್ಷಕ್ಕೆ ಕಾರಣರಾಗುತ್ತಿದ್ದಾರೆ. ಅವರಿಗೆ ನಿಜವಾಗಲು ನೈತಿಕತೆ ಇದ್ದರೆ ಬಹಿರಂಗ ಚೆರ್ಚೆಗೆ ಬರಲಿ ಎಂದು ಹೇಳಿದರು.

ಮೈಸೂರಿನಲ್ಲಿ ಟಿಪ್ಪು ಅಧ್ಯಯನ ಪೀಠ ಸ್ಥಾಪಿಸಿ: ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಮಕೂರು ವಿ.ವಿ.ಯಲ್ಲಿ ಟಿಪ್ಪು ಅಧ್ಯಯನ ಪೀಠ ಸ್ಥಾಪನೆ ಮಾಡುವುದಾಗಿ ಬಜೆಟ್‍ನಲ್ಲಿ ಘೊಷಿಸಿದ್ದರು. ಆದರೆ ಮೈಸೂರು ಪ್ರಾಂತ್ಯದಲ್ಲಿ ಟಿಪ್ಪು ವಾಸವಾಗಿದ್ದರಿಂದ ಮೈಸೂರು ವಿ.ವಿ.ಯಲ್ಲೇ ಟಿಪ್ಪು ಅಧ್ಯಯನ ಪೀಠ ಸ್ಥಾಪಿಸಿ ಎಂದು ಉನ್ನತ ಶಿಕ್ಷಣ ಹಾಗೂ ಮೈಸೂರು ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರಲ್ಲಿ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಕೆ.ಆರ್.ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ.ಎಚ್.ಡಿ.ಉಮಾಶಂಕರ್ ಮುಖ್ಯ ಭಾಷಣ ಮಾಡಿದರು. ಜಿ.ಪಂ. ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಸಿಇಓ ಕೆ.ಜ್ಯೋತಿ, ಇತಿಹಾಸ ತಜ್ಞ ಪ್ರೊ.ಪಿ.ವಿ.ನಂಜರಾಜೇ ಅರಸ್, ಡಾ.ರಘುರಾಮ್ ವಾಜಪೇಯಿ, ಮಾಜಿ ಮೇಯರ್ ಗಳಾದ ಆರೀಫ್ ಹುಸೇನ್, ಅಯೂಬ್ ಖಾನ್, ಶ್ರೀಕಂಠಯ್ಯ, ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ್ ಸೇರಿದಂತೆ ಹಲವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X