Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಚೀನಾದಲ್ಲಿ 150 ಕೋ. ರೂ. ಬಾಚಿದ ಹಿಚ್ ಕಿ

ಚೀನಾದಲ್ಲಿ 150 ಕೋ. ರೂ. ಬಾಚಿದ ಹಿಚ್ ಕಿ

ವಾರ್ತಾಭಾರತಿವಾರ್ತಾಭಾರತಿ11 Nov 2018 8:17 AM IST
share
ಚೀನಾದಲ್ಲಿ 150 ಕೋ. ರೂ. ಬಾಚಿದ ಹಿಚ್ ಕಿ

ಚೀನಾದಲ್ಲಿ ಭಾರತೀಯ ಚಿತ್ರಗಳು ಜನಪ್ರಿಯ ಎಂಬುದು ನನಗೆ ತಿಳಿದಿತ್ತು. ಆದರೆ, ‘ಹಿಚ್‌ಕಿ’ ಚಿತ್ರದ ಪ್ರಚಾರ ಕ್ಕಾಗಿ ಚೀನಾಕ್ಕೆ ತೆರಳಿದ್ದಾಗ ಬಾಲಿವುಡ್ ನಟ- ನಟಿಯರ ಬಗ್ಗೆ ಅವರು ತೋರಿಸುತ್ತಿದ್ದ ಗೌರವ, ಪ್ರೀತಿ ನೋಡಿ ಅಚ್ಚರಿ ಆಯಿತು ಎಂದು ರಾಣಿ ಮುಖರ್ಜಿ ಹೇಳಿದ್ದಾರೆ. ಈ ಚಿತ್ರದಲ್ಲಿ ನರಗಳಿಗೆ ಸಂಬಂಧಿಸಿದ ಉಗ್ಗುವಿಕೆಯ ಕಾಯಿಲೆಯಿಂದ ನರಳುತ್ತಿರುವ ಅಧ್ಯಾಪಕಿಯ ಪಾತ್ರವನ್ನು ರಾಣಿ ಮುಖರ್ಜಿ ನಿರ್ವಹಿಸಿದ್ದಾರೆ. ಚಿತ್ರ ಈ ವರ್ಷ ಮಾರ್ಚ್‌ನಲ್ಲಿ ಬಿಡುಗಡೆಯಾಗಿತ್ತು. ಪ್ರಸ್ತುತ ಚೀನಾದಲ್ಲಿ ಈ ಚಿತ್ರ ಯಶಸ್ವಿಯಾಗಿ ಪ್ರದರ್ಶಿತವಾಗುತ್ತಿದೆ. ಚಿತ್ರದ ಬಗ್ಗೆ ಪ್ರಚಾರ ಮಾಡಲು ರಾಣಿ ಮುಖರ್ಜಿ ಈಗ ಚೀನಾದ ಹಲವು ನಗರಗಳಿಗೆ ಪ್ರವಾಸ ಕೈಗೊಂಡಿದ್ದಾರೆ. ಚಿತ್ರ ಚೀನಾ ಬಾಕ್ಸ್ ಆಫೀಸಿನಲ್ಲಿ 150 ಕೋ. ರೂ. ಬಾಚಿಕೊಂಡಿದೆ. ‘‘ಈ ಚಿತ್ರದ ಪ್ರತಿಯೊಂದು ಭಾವನೆಯೂ ಅವರಿಗೆ ಅರ್ಥ ಆಗಿದೆ. ಅವರು ಚಿತ್ರ ನೋಡಿದ್ದರು. ಆದುದರಿಂದ ನಾನು ಹೋದಲ್ಲೆಲ್ಲ ಚಿತ್ರದ ಬಗ್ಗೆ ಸಕಾರಾತ್ಮಕತೆ ಕಂಡು ಬಂತು. ಭಾರತೀಯ ಚಿತ್ರಗಳು ಚೀನಾದಲ್ಲಿ ಜನಪ್ರಿಯ ಎಂದು ನನಗೆ ಗೊತ್ತು. ಆದರೆ, ಇಷ್ಟೊಂದು ಜನಪ್ರಿಯವಾಗಿವೆ ಎಂಬುದು ನನಗೆ ಅಲ್ಲಿಗೆ ಹೋದ ಮೇಲೆ ಗೊತ್ತಾಯಿತು’’ ಎಂದು ರಾಣಿ ಮುಖರ್ಜಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಸಂಪೂರ್ಣ ಪ್ರಯಾಣದಲ್ಲಿ ಪ್ರೇಕ್ಷಕರು ಹಾಗೂ ಚೀನಾ ಜನರೊಂದಿಗೆ ನಡೆಸಿದ ಸಂವಾದ ನನ್ನನ್ನು ಇನ್ನಷ್ಟು ಉತ್ತೇಜಿಸಿತು. ಇದೇ ಸಂದರ್ಭ ಭಾರತೀಯ ನಟ-ನಟಿಯರಿಗೆ ಅವರು ನೀಡುತ್ತಿರುವ ಗೌರವ, ಪ್ರೀತಿ ನನಗೆ ಅಚ್ಚರಿ ಉಂಟು ಮಾಡಿತು ಎಂದು ಅವರು ಹೇಳಿದ್ದಾರೆ. ‘‘ಹಿಚ್‌ಕಿ ವಿಶೇಷ ಚಿತ್ರ. ಯಾಕೆಂದರೆ, ನಾನು ಮಗುವಿಗೆ ಜನ್ಮ ನೀಡಿದ ಬಳಿಕ ನಟಿಸುತ್ತಿರುವ ಮೊದಲ ಚಿತ್ರ. ತಾಯಿಯಾದ ಬಳಿಕ ನಟಿಸುತ್ತಿರುವ ಮೊದಲ ಚಿತ್ರವಾದುದರಿಂದ ತುಂಬಾ ಸಂಕಷ್ಟ ಎದುರಿಸಬೇಕಾಯಿತು. ನಾನು ನನ್ನ ಮಗಳನ್ನು ಬಿಟ್ಟು ಶೂಟಿಂಗ್‌ಗೆ ತೆರಳಲು ತುಂಬಾ ಕಷ್ಟಪಟ್ಟೆ. ಆದರೆ, ಎಲ್ಲವೂ ಸುಸೂತ್ರವಾಗಿ ನೆರವೇರಿತು.’’ ಎಂದು ರಾಣಿ ಮುಖರ್ಜಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X