ಅನಂತ್ ಕುಮಾರ್ ನಿಧನ: ಕೇಂದ್ರದ ಪ್ರತಿನಿಧಿಯಾಗಿ ರಾಜನಾಥ್ ಸಿಂಗ್ ಭಾಗಿ
ಬೆಂಗಳೂರು, ನ.12: ಚಾಮರಾಜಪೇಟೆಯ ಚಿತಾಗಾರದಲ್ಲಿ ನ.13ರಂದು ನಡೆಯಲಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಎಚ್.ಎನ್. ಅನಂತ್ ಕುಮಾರ್ ಅಂತ್ಯಕ್ರಿಯೆಯಲ್ಲಿ ಕೇಂದ್ರ ಸರಕಾರದ ಪ್ರತಿನಿಧಿಯಾಗಿ ಗೃಹ ಸಚಿವ ರಾಜನಾಥ್ ಸಿಂಗ್ ಭಾಗಿಯಾಗಲಿದ್ದಾರೆ.
ಅಲ್ಲದೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಅನಂತ್ ಕುಮಾರ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಮಂಗಳವಾರ ಮಧ್ಯಾಹ್ನ 12.15ಕ್ಕೆ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.
Next Story