Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಹಿಷಿ ವರದಿ ಮಂಡನೆಗೆ ಮುಖ್ಯ ಕಾರ್ಯದರ್ಶಿ...

ಮಹಿಷಿ ವರದಿ ಮಂಡನೆಗೆ ಮುಖ್ಯ ಕಾರ್ಯದರ್ಶಿ ಅಡ್ಡಗಾಲು: ಖಂಡನೆ

ವಾರ್ತಾಭಾರತಿವಾರ್ತಾಭಾರತಿ12 Nov 2018 9:18 PM IST
share

ಬೆಂಗಳೂರು, ನ.12: ಖಾಸಗಿ ವಲಯದಲ್ಲಿನ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವ ಉದ್ದೇಶದಿಂದ ಸರೋಜಿನಿ ಮಹಿಷಿ ವರದಿಯನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸಲು ಸಿದ್ದವಾಗಿರುವ ಸಂದರ್ಭದಲ್ಲಿ ‘ಕನ್ನಡಿಗರು ಯಾರು’ ಎಂಬ ಗೊಂದಲ ಸೃಷ್ಟಿಸಿ ಮಸೂದೆಗೆ ಅಡ್ಡಗಾಲು ಹಾಕುವುದು ಸರಿಯಲ್ಲ ಎಂದು ಕನ್ನಡ ಗೆಳೆಯರ ಬಳಗ ಆಕ್ಷೇಪಿಸಿದೆ.

ಖಾಸಗೀ ವಲಯದಲ್ಲಿ ಕನ್ನಡಗರಿಗೆ ಉದ್ಯೋಗವನ್ನು ಮೀಸಲಿಡುವ ಮಸೂದೆಯು ಮುಂದಿನ ಅಧಿವೇಶನದಲ್ಲಿ ಮಂಡನೆಯಾಗಲಿದೆ ಎಂದು ಹೇಳಲಾಗಿತ್ತು. ಕನ್ನಡ ಹೋರಾಟಗಾರರು ಇದನ್ನು ಸ್ವಾಗತಿಸಿದ್ದರು. ಆದರೆ, ಈಗ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಸಂಪುಟದಲ್ಲಿ ಮಂಡಿಸುವ ಮುನ್ನವೇ ಕನ್ನಡಿಗರು ಎಂದರೆ ಯಾರು ಎಂಬ ಸ್ಪಷ್ಟತೆ ಇರಬೇಕು ಎಂದಿದ್ದಾರೆ. ಅಲ್ಲದೆ, ಕಾರ್ಮಿಕ ಇಲಾಖೆ ಅದರಲ್ಲಿ ಬದಲಾವಣೆ ಮಾಡಲು ಮುಂದಾಗಿದೆ ಎನ್ನಲಾಗಿದೆ.

ಆದರೆ, ಮಹಿಷಿ ವರದಿಯಲ್ಲಿ ಕನ್ನಡಿಗರು ಯಾರು ಎಂಬುದರ ಬಗ್ಗೆ ಸ್ಪಷ್ಟವಾಗಿ ವಿವರಿಸಲಾಗಿದೆ. ಆದರೂ, ಮುಖ್ಯ ಕಾರ್ಯದರ್ಶಿ ಅನಗತ್ಯ ಗೊಂದಲ ಸೃಷ್ಟಿಸಿ ವಿಧೇಯಕ ಮಂಡನೆಯಾಗದಂತೆ ತಡೆಯಲು ಯತ್ನಿಸುತ್ತಿದ್ದಾರೆ ಎಂದು ಬಳಗ ಆರೋಪಿಸಿದೆ.

ವರದಿಯಲ್ಲಿ ಸ್ಥಳೀಯರು ಎಂದು ಪರಿಗಣಿಸಲು ರಾಜ್ಯದಲ್ಲಿ 15 ವರ್ಷಗಳ ಕಾಲ ವಾಸವಾಗಿರಬೇಕು ಹಾಗೂ ಕನ್ನಡ ಭಾಷಾ ಜ್ಞಾನವಿರಬೇಕು. ಎಸೆಸ್ಸೆಲ್ಸಿವರೆಗೂ ಕನ್ನಡ ಭಾಷೆಯನ್ನು ಒಂದು ವಿಷಯವಾಗಿ ಓದಿರಬೇಕು. ಪಡಿತರ ಚೀಟಿ, ಜನ್ಮ ದಾಖಲೆ, ಆಧಾರ್ ಕಾರ್ಡ್ ಹಾಗೂ ಮತ್ತಿತರೆ ದಾಖಲೆಗಳನ್ನು ಹೊಂದಿರಬೇಕು. ಹೊರರಾಜ್ಯಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಎಸೆಸ್ಸೆಲ್ಸಿವರೆಗೂ ಓದಿದ ವಿದ್ಯಾರ್ಥಿಗಳಿಗೂ ಎಲ್ಲ ಸೌಲಭ್ಯ ಸಿಗಬೇಕು ಎಂದು ಹೇಳಲಾಗಿದೆ.

ಕನ್ನಡಗರು ಎಂದರೆ ಯಾರು ಎಂಬದನ್ನು ಖಚಿತವಾಗಿ ಅರ್ಥೈಸಿದ್ದರೂ, ಕಾರ್ಮಿಕ ಇಲಾಖೆ ಉದ್ಯೋಗ ಬಯಸುವ ಅಭ್ಯರ್ಥಿ ಅಥವಾ ತಂದೆ-ತಾಯಿಯಲ್ಲಿ ಯಾರಾದರೂ ಒಬ್ಬರಾದರೂ ಕನ್ನಡಿಗರಾಗಿದ್ದು, 7 ವರ್ಷ ರಾಜ್ಯದ ಯಾವುದೇ ಭಾಗದಲ್ಲಿ ವಾಸವಾಗಿರುವವರನ್ನು ಕನ್ನಡಿಗರೆಂದು ಪರಿಗಣಿಸಬಹುದು ಎಂದು ತಿದ್ದಪಡಿ ಮಾಡಿರುವುದಾಗಿ ತಿಳಿದು ಬಂದಿದೆ.

ಮುಖ್ಯ ಕಾರ್ಯದರ್ಶಿಯು ಪಟ್ಟಭದ್ರರ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ ಅನಗತ್ಯ ಗೊಂದಲ ಸೃಷ್ಟಿಸಿ ವರದಿಯನ್ನು ವಿರೂಪಗೊಳಿಸಲು ಮುಂದಾಗಿದ್ದಾರೆ. ಹೀಗಾಗಿ, ಸರಕಾರ ವರದಿಯನ್ನು ಯಥಾವತ್ತಾಗಿ ಸದನದಲ್ಲಿ ಮಂಡಿಸಬೇಕು ಎಂದು ಬಳಗ ಪ್ರಕಟನೆಯಲ್ಲಿ ಒತ್ತಾಯಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X