Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕನ್ನಡಿಗರು ತಬ್ಬಲಿಗಳಾಗುವ ಮುಂಚೆ ನಮ್ಮ...

ಕನ್ನಡಿಗರು ತಬ್ಬಲಿಗಳಾಗುವ ಮುಂಚೆ ನಮ್ಮ ಭಾಷೆಯನ್ನು ಉಳಿಸಬೇಕಾಗಿದೆ: ಸಿ.ಟಿ.ರವಿ

ವಾರ್ತಾಭಾರತಿವಾರ್ತಾಭಾರತಿ12 Nov 2018 10:25 PM IST
share
ಕನ್ನಡಿಗರು ತಬ್ಬಲಿಗಳಾಗುವ ಮುಂಚೆ ನಮ್ಮ ಭಾಷೆಯನ್ನು ಉಳಿಸಬೇಕಾಗಿದೆ: ಸಿ.ಟಿ.ರವಿ

ಚಿಕ್ಕಮಗಳೂರು, ನ.12: ಕನ್ನಡ ಭಾಷೆಗೆ ಕುತ್ತುಂಟಾದರೆ ಬೇರೆಯವರಿಗೂ ನಾವು ಪರಕೀಯರಂತೆ ಕಾಣುತ್ತೇವೆ. ಕನ್ನಡಿಗರು ತಬ್ಬಲಿಗಳಾಗುವ ಮುಂಚೆ ನಮ್ಮ ಭಾಷೆಯನ್ನು ಉಳಿಸಿ ಬೆಳೆಸಬೇಕಾದ ಅಗತ್ಯವಿದೆ ಎಂದು ಶಾಸಕ ಸಿ.ಟಿ.ರವಿ ತಿಳಿಸಿದರು.

ನಗರದ ಗಾಂಧೀನಗರ ಬಡಾವಣೆಯಲ್ಲಿ ಮಹಾತ್ಮಗಾಂಧಿ ಆಟೋ ನಿಲ್ದಾಣ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಭಾಷೆ ಹಲವು ಆಕ್ರಮಣಗಳನ್ನು ಸಹಿಸಿಕೊಂಡು ಬೆಳೆಯಿತು. ಎಂದಿಗೂ ತನ್ನತನವನ್ನು ಕಳೆದುಕೊಂಡಿರಲಿಲ್ಲ. ಆದರೆ ಇಂದು ಬಹುತೇಕ ಕಡೆ ಕನ್ನಡ ಭಾಷೆ ಇಂಗ್ಲೀಷ್‍ನೊಂದಿಗೆ ಮಿಶ್ರಣಗೊಂಡು ಕಂಗ್ಲೀಷ್ ಭಾಷೆಯಾಗಿ ಪರಿವರ್ತನೆ ಆಗುತ್ತಿದೆ. ಇದು ವಿಷಾಧನೀಯ ಎಂದರು.

ಕನ್ನಡದ ಉಳಿವು ಹೇಗೆ ಎನ್ನುವ ಚಿಂತನೆ ಕಾಡುತ್ತಿದೆ. ಇಂಗ್ಲೀಷ್ ಭಾಷೆ ನೀಲಗಿರಿ ಮತ್ತು ಅಕೇಶಿಯಾ ರೀತಿಯಲ್ಲಿ ವ್ಯಾಪಿಸುತ್ತಿದೆ. ಇತರೆ ಭಾಷೆಗಳ ಸಾರವನ್ನೆಲ್ಲ ಹೀರಿಕೊಂಡು ನಾಶಪಡಿಸುತ್ತಿದೆ. ಹತ್ತಾರು ಭಾಷೆಗಳನ್ನು ಕಲಿತರೆ ತಪ್ಪಲ್ಲ. ಆದರೆ ನಮ್ಮ ಭಾಷೆ ಮತ್ತು ನಮ್ಮತನವನ್ನು ಕಳೆದುಕೊಳ್ಳಬಾರದು ಎಂದರು.

ಭಾಷೆ ಬರೇಸಂವಹನ ಮಾಧ್ಯಮವಲ್ಲ. ಅದು ಸಂಸ್ಕೃತಿಯ ಕೀಲಿಕೈ. ಭಾಷೆಯನ್ನು ಕಳೆದುಕೊಂಡರೆ ಸಂಸ್ಕೃತಿಯನ್ನೂ ಕಳೆದುಕೊಂಡಂತೆ. ಈ ಹಿನ್ನೆಲೆಯಲ್ಲಿ ಕನಿಷ್ಟ ನಮ್ಮ ಮನೆಗಳಲ್ಲಾದರೂ ಕನ್ನಡ ಭಾಷೆಯನ್ನು ಮಾತನಾಡಬೇಕು. ನಮ್ಮ ಸಹಿಯನ್ನಾದರೂ ಕನ್ನಡದಲ್ಲೇ ಮಾಡುವುದನ್ನು ರೂಢಿಸಿಕೊಳ್ಳಬೇಕು. ಕಳೆದ 20 ವರ್ಷಗಳಿಂದ ನಾನು ಕನ್ನಡದಲ್ಲೇ ಸಹಿ ಮಾಡುತ್ತಿದ್ದೇನೆ ಎಂದರು.

ಕಳಸಾಪುರ ಕಾಲೇಜು ಪ್ರಾಂಶುಪಾಲ ನಾಗರಾಜರಾವ್ ಕಲ್ಕಟ್ಟೆ ಮುಖ್ಯ ಅತಿಥಿಗಳಾಗಿ ಮಾತನಾಡಿ, ಭಾಷೆ ಎನ್ನುವುದು ಕೇವಲ ಜ್ಞಾನದ ವಾಹಿನಿಯೇ ಹೊರತು ಭಾಷೆಯೇ ಜ್ಞಾನವಲ್ಲ. ಆದರೆ ಭಾಷೆಯೇ ಜ್ಞಾನ ಎನ್ನುವ ಭ್ರಮೆಯನ್ನು ಇಂಗ್ಲೀಷ್ ಮೂಡಿಸಿದೆ. ಇದನ್ನು ಹೋಗಲಾಡಿಸಬೇಕಾದ ಅಗತ್ಯವಿದೆ. ನಮ್ಮ ಹಬ್ಬ ಹರಿದಿನ, ಆಚಾರ ವಿಚಾರ, ಗುರು ಹಿರಿಯರಿಗೆ ಗೌರವ ನೀಡುವುದನ್ನು ಮಕ್ಕಳಿಗೆ ಕನ್ನಡ ಭಾಷೆಯ ಜೊತೆಯಲ್ಲೇ ಕಲಿಸಿಕೊಡಬೇಕು ಎಂದರು.

ಗಾಂಧೀನಗರ ನಿವಾಸಿ ಗೋಪಾಲಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಸದಸ್ಯರುಗಳಾದ ಅಪ್ಸರ್ ಅಹಮದ್, ಮುತ್ತಯ್ಯ ಮತ್ತು ಜಯಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಕೆ.ಆರ್.ಅನಿಲ್ ಕುಮಾರ್ ಮಹರ್ಷಿ ವಾಲ್ಮಿಕಿ ಸಂಘದ ಅಧ್ಯಕ್ಷರಾದ ಕೋಟೆ ಜಗದೀಶ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಮಲ್ಲಿಗೆ ಸುಗಮ ಸಂಗೀತ ಟ್ರಸ್ಟ್ ನ ಗಾಯಕ ಮಲ್ಲಿಗೆ ಸುಧೀರ್ ಸ್ವಾಗತಿಸಿ ನಿರೂಪಿಸಿದರು, ಸ್ಥಳೀಯ ಯುವಕರುಗಳಾದ ಚಂದ್ರಯ್ಯ, ಹೊನ್ನೇಗೌಡ, ಕೃಷ್ಣಪ್ಪ, ದಯಾನಂದ್, ಶಾಂತ, ಜಾರ್ಜ್, ಕಿರಣ್ ಮತ್ತು ಶುಕ್ಕೂರ್ ಇತರರು ಭಾಗಹಿಸಿದ್ದರು. ಚಂದನ್ ಮೆಲೋಡಿಯಸ್ ತಂಡದಿಂದ ರಸಮಂಜರಿ ಕಾರ್ಯಕ್ರಮ ನಡೆಯಿತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X