Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜಕೀಯವಾಗಿ ಬೆಳೆಯಲು ಅನಂತ್ ಕುಮಾರ್...

ರಾಜಕೀಯವಾಗಿ ಬೆಳೆಯಲು ಅನಂತ್ ಕುಮಾರ್ ಕಾರಣ: ಶಾಸಕ ಸಿ.ಟಿ.ರವಿ

ವಾರ್ತಾಭಾರತಿವಾರ್ತಾಭಾರತಿ12 Nov 2018 10:46 PM IST
share
ರಾಜಕೀಯವಾಗಿ ಬೆಳೆಯಲು ಅನಂತ್ ಕುಮಾರ್ ಕಾರಣ: ಶಾಸಕ ಸಿ.ಟಿ.ರವಿ

ಚಿಕ್ಕಮಗಳೂರು, ನ.12: ಕೇಂದ್ರ ಸಚಿವ ಅನಂತ್‍ ಕುಮಾರ್ ಅಕಾಲಿಕ ಸಾವು ರಾಷ್ಟ್ರ ಹಾಗೂ ರಾಜ್ಯದ ರಾಜಕಾರಣಕ್ಕೆ ತುಂಬಲಾರದ ನಷ್ಟ. ಅವರು ಪ್ರಧಾನಿ ಹಾಗೂ ಕೇಂದ್ರದ ಎಲ್ಲ ಸಚಿವರೊಂದಿಗೆ ನೇರವಾಗಿ ಮಾತನಾಡುವಷ್ಟರ ಮಟ್ಟಿಗೆ ಪ್ರಭಾವಿಯಾಗಿದ್ದರು. ರಾಜ್ಯದ ಯೋಜನೆಗಳಿಗೆ ಸಂಬಂಧಿಸಿದಂತೆ ಕೇಂದ್ರದೊಂದಿಗೆ ಸಂಪರ್ಕ ಕೊಂಡಿಯಾಗಿ ಕೆಲಸ ಮಾಡುತ್ತಿದ್ದ ಅವರ ಸಾವು ಪಕ್ಷಕ್ಕೆ ಭಾರೀ ನಷ್ಟ ಎಂದು ಶಾಸಕ ಸಿ.ಟಿ.ರವಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಲಿಲ್ಲದ ಸರದಾರನಾಗಿ ವಿರೋಧಿ ಪಕ್ಷಗಳ ನಿದ್ದೆಗೆಡಿಸಿದ್ದ ಅವರು 39ನೇ ವಯಸ್ಸಿಗೆ ಕೇಂದ್ರದ ಸಂಸದರಾಗಿ ಸಚಿವರಾಗಿದ್ದ ರಾಜಕೀಯ ಪ್ರತಿಭೆಯಾಗಿದ್ದರು. ವಿದ್ಯಾರ್ಥಿ ದೆಸೆಯಿಂದಲೂ ಹೋರಾಟಗಾರರಾಗಿದ್ದ ಅವರು, ಸೆರೆಮನೆ ವಾಸದ ರುಚಿಯನ್ನೂ ಕಂಡವರು. ತಮ್ಮ ಪ್ರಾಮಾಣಿಕತೆ, ಪ್ರತಿಭೆಯಿಂದ ಬಹುಬೇಗನೆ ಪಕ್ಷದ ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದ ಅನಂತ್‍ ಕುಮಾರ್, ತಳಮಟ್ಟದ ಕಾರ್ಯಕರ್ತರನ್ನು ಬೆಳೆಸಿದ ರೀತಿ ಬೆರಗು ಹುಟ್ಟಿಸುವಂತದ್ದು. ತಾನೂ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಅವರ ಗರಡಿಯಲ್ಲಿ ಪಳಗಿದ್ದು, ತಾನು ರಾಜಕೀಯವಾಗಿ ಬೆಳೆಯಲೂ ಅವರೇ ಕಾರಣ ಎಂದರು.

ವಾಜಪೇಯಿ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಅವರು, ನರೇಂದ್ರ ಮೋದಿಗೂ ಆಪ್ತರಾಗಿದ್ದರು. ರಾಷ್ಟ್ರ ರಾಜಕಾರಣದಲ್ಲಿದ್ದರೂ ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಪಕ್ಷಪಾತ ರಾಜಕೀಯ ಮಾಡಿದವರಲ್ಲ. ಮಹದಾಯಿ, ಕಾವೇರಿ ನೀರಿನ ಹೋರಾಟದ ವಿಚಾರದಲ್ಲೂ ಅವರು ರಾಜ್ಯದ ಪರವಾಗಿ ಕೇಂದ್ರದೊಂದಿಗೆ ವ್ಯವಹರಿಸಿದ್ದಾರೆ ಎಂದ ಅವರು, ರಾಜ್ಯದಲ್ಲಿ ಪಕ್ಷ ಸಂಘಟನೆಯಲ್ಲಿ ಅವರ ಪಾತ್ರ ಸ್ಮರಣೀಯ. ತಂತ್ರಗಾರಿಕೆಗೆ ಹೆಸರಾಗಿದ್ದ ಅವರು, ಪಕ್ಷದ ಬಲವರ್ಧನೆಯ ಹಿನ್ನೆಲೆಯಲ್ಲಿ ಹಿಂದುಳಿದ, ದಲಿತ ವರ್ಗಗಳ ನಾಯಕರನ್ನು ಗುರುತಿಸಿ ಬೆಳಸಿದರು. ಈ ತಂತ್ರಗಾರಿಕೆ ಫಲವಾಗಿ ಬಿಜೆಪಿ ಪಕ್ಷದ ಮೊದಲ ಬಾರಿಗೆ ಕರ್ನಾಟಕದಲ್ಲಿ 70-80 ಸ್ಥಾನ ಪಡೆಯಲು ಸಾಧ್ಯವಾಯಿತು. ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಬ್ರಾಂಡ್ ಮಾಡಿದವರು ಅನಂತ್ ಕುಮಾರ್ ಎಂದರು.

ಬಿಜೆಪಿ ಕಟ್ಟಾಳು ಆಗಿದ್ದ ಅನಂತ್‍ ಕುಮಾರ್ ಎಲ್ಲ ಪಕ್ಷದ ಮುಖಂಡರೊಂದಿಗೂ ಸಲುಗೆ ಹೊಂದಿದ್ದ ವಿಶಿಷ್ಟ ವ್ಯಕ್ತಿತ್ವದವರು. ಈ ಕಾರಣಕ್ಕೆ ಪಾರ್ಲಿಮೆಂಟ್‍ನಲ್ಲೂ ಅವರ ವಾದಗಳಿಗೆ ವಿರೋಧ ಪಕ್ಷದವರೂ ತಲೆದೂಗುತ್ತಿದ್ದರು ಎಂದ ಅವರು, ಸಚಿವರಾಗಿ ಅವರು ಆರೋಗ್ಯ ಕ್ಷೇತ್ರದಲ್ಲಿ ಜಾರಿಗೆ ತಂದ ಸುಧಾರಣೆಗಳು ಮಾದರಿಯಾಗಿದೆ. ರಸಗೊಬ್ಬರ ಖಾತೆ ಸಚಿವರಾಗಿ ರೈತರ ಪರವಾಗಿ ಸಾಕಷ್ಟು ಸುಧಾರಣೆಗಳನ್ನು ಜಾರಿ ಮಾಡಿದ್ದರ ಫಲವಾಗಿ ಪ್ರಕಸ್ತ ರಸಗೊಬ್ಬರ ಸಂಬಂಧಿ ಸಮಸ್ಯೆಗಳು ಇಲ್ಲದಂತಾಗಿವೆ. ಇಂತಹ ರಾಜಕಾರಣಿ ಅಪರೂಪ. ಅವರ ಅಗಲಿಕೆ ಪಕ್ಷ ಹಾಗೂ ರಾಷ್ಟ್ರ ರಾಜಕಾರಣಕ್ಕೆ ಭಾರೀ ನಷ್ಟ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X