Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಸಿಸಿ ಟ್ವೆಂಟಿ-20 ರ‌್ಯಾಂಕಿಂಗ್:...

ಐಸಿಸಿ ಟ್ವೆಂಟಿ-20 ರ‌್ಯಾಂಕಿಂಗ್: ಕುಲ್‌ದೀಪ್ ಜೀವನಶ್ರೇಷ್ಠ ಸಾಧನೆ

ವಾರ್ತಾಭಾರತಿವಾರ್ತಾಭಾರತಿ12 Nov 2018 11:58 PM IST
share
ಐಸಿಸಿ ಟ್ವೆಂಟಿ-20 ರ‌್ಯಾಂಕಿಂಗ್: ಕುಲ್‌ದೀಪ್ ಜೀವನಶ್ರೇಷ್ಠ ಸಾಧನೆ

ದುಬೈ, ನ.12: ವೆಸ್ಟ್‌ಇಂಡೀಸ್ ವಿರುದ್ಧ ಸರಣಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಭಾರತದ ಚೈನಾಮನ್ ಬೌಲರ್ ಕುಲ್‌ದೀಪ್ ಯಾದವ್ ಸೋಮವಾರ ಬಿಡುಗಡೆಯಾಗಿರುವ ಐಸಿಸಿ ಟ್ವೆಂಟಿ-20 ರ‌್ಯಾಂಕಿಂಗ್ನಲ್ಲಿ ಜೀವನಶ್ರೇಷ್ಠ ಸಾಧನೆ ಮಾಡಿದ್ದಾರೆ.

ರ‌್ಯಾಂಕಿಂಗ್ನಲ್ಲಿ 14 ಸ್ಥಾನ ಮೇಲಕ್ಕೇರಿರುವ ಕುಲ್‌ದೀಪ್ 23ನೇ ಸ್ಥಾನ ತಲುಪಿದ್ದಾರೆ.

ಹಾಲಿ ಟ್ವೆಂಟಿ-20 ಚಾಂಪಿಯನ್ ವಿಂಡೀಸ್ ವಿರುದ್ಧ ಭಾರತ ತಂಡ 3-0 ಅಂತರದಿಂದ ಸರಣಿ ಜಯಿಸಿ ಕ್ಲೀನ್‌ಸ್ವೀಪ್ ಸಾಧಿಸಿತ್ತು. ಯಾದವ್ ಎರಡು ಪಂದ್ಯಗಳಲ್ಲಿ 5.6 ಇಕಾನಮಿ ರೇಟ್‌ನಲ್ಲಿ ಒಟ್ಟು 5 ವಿಕೆಟ್‌ಗಳನ್ನು ಕಬಳಿಸಿದ್ದರು.

ವೇಗದ ಬೌಲರ್ ಭುವನೇಶ್ವರ ಕುಮಾರ್ 9 ಸ್ಥಾನ ಭಡ್ತಿ ಪಡೆದು ಅಗ್ರ-20ರಲ್ಲಿ ಸ್ಥಾನ ಪಡೆದರು. ಕುಮಾರ್ 19ನೇ ಸ್ಥಾನದಲ್ಲಿದ್ದರೆ, ಸಹ ವೇಗಿ ಜಸ್‌ಪ್ರಿತ್ ಬುಮ್ರಾ 5 ಸ್ಥಾನ ಮೇಲಕ್ಕೇರಿ 21ನೇ ಸ್ಥಾನ ತಲುಪಿದ್ದಾರೆ.

ಭಾರತದ ಬ್ಯಾಟ್ಸ್‌ಮನ್‌ಗಳ ಪೈಕಿ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ರ‌್ಯಾಂಕಿಂಗ್ನಲ್ಲಿ ಪ್ರಗತಿ ಸಾಧಿಸಿದ್ದಾರೆ. ರೋಹಿತ್(3 ಸ್ಥಾನ ಭಡ್ತಿ)7ನೇ ಸ್ಥಾನಕ್ಕೆ ಲಗ್ಗೆ ಇಟ್ಟರೆ, ಧವನ್(5 ಸ್ಥಾನ ಭಡ್ತಿ)16ನೇ ಸ್ಥಾನ ಪಡೆದಿದ್ದಾರೆ.

ಟೀಮ್ ರ‌್ಯಾಂಕಿಂಗ್ನಲ್ಲಿ ಪಾಕಿಸ್ತಾನ ಹಾಗೂ ಭಾರತ ಕ್ರಮವಾಗಿ ಮೊದಲ ಹಾಗೂ ಎರಡನೇ ಸ್ಥಾನವನ್ನು ಕಾಯ್ದುಕೊಂಡಿವೆ. ಪಾಕಿಸ್ತಾನ 138 ಅಂಕ ಗಳಿಸಿದ್ದರೆ, ಭಾರತ 127 ಅಂಕ ಗಳಿಸಿದೆ.

ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಅಗ್ರ-4ರಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆಸ್ಟೇಲಿಯದ ಗ್ಲೆನ್ ಮ್ಯಾಕ್ಸ್‌ವೆಲ್ ಅಗ್ರ ಸ್ಥಾನದಲ್ಲಿದ್ದರೆ, ಮುಹಮ್ಮದ್ ನಬಿ, ಶಾಕಿಬ್ ಅಲ್ ಹಸನ್ ಹಾಗೂ ಜೆಪಿ ಡುಮಿನಿ ಆಬಳಿಕದ ಸ್ಥಾನದಲ್ಲಿದ್ದಾರೆ.

ಇದೇ ವೇಳೆ ಆಸ್ಟ್ರೇಲಿಯ ತಂಡ ಈ ತಿಂಗಳಾಂತ್ಯದಲ್ಲಿ ನಾಲ್ಕು ಟ್ವೆಂಟಿ-20 ಪಂದ್ಯಗಳನ್ನು ಆಡಲಿದೆ. ದಕ್ಷಿಣ ಆಫ್ರಿಕ ವಿರುದ್ಧ ನ.17ಕ್ಕೆ ಏಕೈಕ ಪಂದ್ಯ ಹಾಗೂ ನ.21 ರಿಂದ 25ರ ತನಕ ಭಾರತ ವಿರುದ್ಧ 3 ಪಂದ್ಯಗಳ ಸರಣಿಯನ್ನು ಆಡಲಿದೆ. ಒಂದು ವೇಳೆ ಆಸ್ಟ್ರೇಲಿಯ ತಂಡ ಎಲ್ಲ 4 ಪಂದ್ಯಗಳನ್ನು ಗೆದ್ದುಕೊಂಡರೆ 126 ಅಂಕ ಗಳಿಸಿ 2ನೇ ಸ್ಥಾನಕ್ಕೇರಲಿದೆ. ಎಲ್ಲ 4 ಪಂದ್ಯಗಳಲ್ಲಿ ಸೋತರೆ 112 ಅಂಕದೊಂದಿಗೆ 6ನೇ ಸ್ಥಾನ ಪಡೆಯಲಿದೆ.

ನ.17ರ ಪಂದ್ಯದಲ್ಲಿ ದ.ಆಫ್ರಿಕ ಜಯ ಸಾಧಿಸಿದರೆ 3 ಅಂಕ ಗಳಿಸಲಿದೆ. ಭಾರತ ತಂಡ ಆಸೀಸ್ ವಿರುದ್ಧ ಎಲ್ಲ 3 ಪಂದ್ಯಗಳನ್ನು ಗೆದ್ದುಕೊಂಡರೆ 129 ಅಂಕ ಗಳಿಸುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X