Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕನ್ನಡ ಹೋರಾಟಕ್ಕೆ ರಹಮಾನ್‌ ಖಾನ್...

ಕನ್ನಡ ಹೋರಾಟಕ್ಕೆ ರಹಮಾನ್‌ ಖಾನ್ ಸ್ಫೂರ್ತಿ: ಕನ್ನಡ ಹೋರಾಟಗಾರ ಪಾರ್ಶ್ವನಾಥ್

ವಾರ್ತಾಭಾರತಿವಾರ್ತಾಭಾರತಿ13 Nov 2018 8:02 PM IST
share
ಕನ್ನಡ ಹೋರಾಟಕ್ಕೆ ರಹಮಾನ್‌ ಖಾನ್ ಸ್ಫೂರ್ತಿ: ಕನ್ನಡ ಹೋರಾಟಗಾರ ಪಾರ್ಶ್ವನಾಥ್

ಬೆಂಗಳೂರು, ನ.13: ಐತಿಹಾಸಿಕ ಗೋಕಾಕ್ ಚಳವಳಿಯನ್ನು ಮೊದಲು ಆರಂಭ ಮಾಡಿದ ಶ್ರೇಯಸ್ಸು ರಹಮಾನ್‌ ಖಾನರಿಗೆ ಸಲ್ಲಬೇಕು. ಸಮಾನ ಮನಸ್ಕರೊಂದಿಗೆ ಗೋಕಾಕ್ ವರದಿ ಜಾರಿಗೆ ಹೋರಾಟ ಮಾಡಿದ ರಹಮಾನ್‌ ಖಾನ್ ಅಂದಿನ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಬೆಂಗಳೂರಿನ ಪೊಲೀಸ್ ಆಯುಕ್ತರ ಕೈಯಲ್ಲಿ ಏಟು ತಿಂದದ್ದು ಇನ್ನೂ ನೆನಪಿದೆ ಎಂದು ಕನ್ನಡ ಹೋರಾಟಗಾರ ಶ್ರ.ದೇ.ಪಾರ್ಶ್ವನಾಥ್ ಹೇಳಿದರು.

ನಗರದಲ್ಲಿ ಅಖಿಲ ಕರ್ನಾಟಕ ಮಹಮದೀಯರ ಕನ್ನಡ ವೇದಿಕೆ ಏರ್ಪಡಿಸಿದ್ದ ಕೆಂಪೇಗೌಡ ಪ್ರಶಸ್ತಿ ಪುರಸ್ಕೃತರ ಅಭಿನಂದನೆಯ ಗೌರವವನ್ನು ಸ್ವೀಕರಿಸಿ ಮಾತನಾಡಿದ ಅವರು, ತಮಗೆ ಸಂದ ಈ ಪ್ರಶಸ್ತಿ ನನ್ನದಲ್ಲ, ಅದು ರಹಮಾನ್‌ ಖಾನರದ್ದು ಎಂದು ಭಾವುಕರಾಗಿ ನುಡಿದರು.

ಖಜಾನೆಯಲ್ಲಿ ಕೆಲಸ ಮಾಡುತ್ತಿದ್ದ ನಮ್ಮನ್ನು ಕನ್ನಡ ಸಾಹಿತ್ಯ ಪರಿಷತ್ತಿಗೆ ಕರೆದೊಯ್ದ ಪ್ರಿಯಬಂಧು ರಹಮಾನ್‌ ಖಾನರೇ ಮುಂದಿನ ದಿನಗಳಲ್ಲಿ ಕಸಾಪದ ಯಾವುದೇ ಪದಾಧಿಕಾರಿಯಾಗಲು ಸಾಧ್ಯವಾಗಲಿಲ್ಲ. ಅಂತಹ ವಿಷಮ ವ್ಯವಸ್ಥೆ ನಮ್ಮದು ಎಂದು ತೀವ್ರ ಖೇದ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಬಿಬಿಎಂಪಿ ಸದಸ್ಯ ಮಂದಾರ ಸಂಪತ್‌ ಕುಮಾರ್, ಭಾಷೆ ಮತ್ತು ಸಾಮಾಜಿಕ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪಾರ್ಶ್ವನಾಥ್ ಮತ್ತು ಅಭಿಮನ್ಯು ರಮೇಶ್ ಅವರುಗಳನ್ನು ಸನ್ಮಾನಿಸುತ್ತಿರುವುದು ಮಹಮದೀಯರ ವೇದಿಕೆಯ ಕನ್ನಡತನಕ್ಕೆ ಸಾಕ್ಷಿಯಾಗಿದೆ ಎಂದರು.

ಅಭಿಮನ್ಯು ಪತ್ರಿಕೆಯ ಮೂಲಕ ನೂರಾರು ಯುವ ಮನಸ್ಸುಗಳಿಗೆ ವೇದಿಕೆ ಕಲ್ಪಿಸುವುದರ ಜೊತೆಗೆ ಸಾಮಾಜಿಕ ಹೋರಾಟದಲ್ಲಿಯೂ ತೊಡಗಿಸಿಕೊಂಡಿರುವ ಅತಿಹಿಂದುಳಿದ ವರ್ಗದ ಪ್ರತಿಭೆ ರಮೇಶ್ ಮತ್ತು ಆದಿಕವಿ ಪಂಪನ ‘ಮನುಷ್ಯ ಜಾತಿ ತಾನೊಂದೆ ವಲಂ’ ಎಂಬುದಕ್ಕೆ ನಿದರ್ಶನವಾಗಿರುವ ಪಾರ್ಶ್ವನಾಥ್ ಈ ಬಾರಿಯ ಕೆಂಪೇಗೌಡ ಪ್ರಶಸ್ತಿ ಸಂದ ಪುರಸ್ಕೃತರಲ್ಲಿ ಅರ್ಹರಿಗೂ ಸ್ಥಾನವಿದೆ ಎಂಬುದಕ್ಕೆ ಸಾಕ್ಷಿಯಾಗಿದ್ದಾರೆ ಎಂದು ಅವರು ನುಡಿದರು.

ಆಶಯ ನುಡಿಗಳನ್ನಾಡಿದ ಮಹಮದೀಯರ ಕನ್ನಡ ವೇದಿಕೆಯ ಅಧ್ಯಕ್ಷ ಸಮೀವುಲ್ಲಾ ಖಾನ್, ಇವರಿಬ್ಬರೂ ಸಾರ್ವಜನಿಕ ಬದುಕಿನಲ್ಲಿ ಪಾರದರ್ಶಕತೆಯನ್ನು ಕಾಪಾಡಿಕೊಂಡು ನೈತಿಕ ಮೌಲ್ಯಗಳನ್ನು ಬೆಳೆಸುವಲ್ಲಿ ಶ್ರಮಿಸುತ್ತಿದ್ದಾರೆ. ಒಬ್ಬರು ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿಯೂ ರಾಜಧಾನಿಯಲ್ಲಿ ಕನ್ನಡವನ್ನು ಕಟ್ಟುವಲ್ಲಿ ಶ್ರಮಿಸುತ್ತಿದ್ದಾರೆ. ಮತ್ತೊಬ್ಬರು ನೂರಾರು ಯುವಕರಿಗೆ ಮಾದರಿಯಾಗಿ ಸಂಘಟನಶೀಲರಾಗಿ, ಪತ್ರಕರ್ತರಾಗಿ ಸುಶೀಲತೆಯನ್ನು ಕಾಪಾಡಿಕೊಂಡಿದ್ದಾರೆ ಎಂದು ಬಣ್ಣಿಸಿದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ವಚನಜ್ಯೋತಿ ಬಳಗದ ಅಧ್ಯಕ್ಷ ಎಸ್.ಪಿನಾಕಪಾಣಿ, ಜಾತ್ಯತೀತತೆ ಎನ್ನುವುದು ಸವಕಲು ನಾಣ್ಯವಾಗಿ, ಜಾತೀಯತೆಯೇ ವಿಜೃಂಭಿಸುತ್ತಿರುವಾಗ ಮಹಮದೀಯರ ಕನ್ನಡ ವೇದಿಕೆ ಎಲ್ಲ ಸಂಘಟನೆಗಳಿಗೆ ಮಾದರಿಯಾಗಿದೆ. ಮಸೀದಿಯಲ್ಲಿ ರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆಗಳಿಂದ ಮೊದಲುಗೊಂಡು ಮದ್ರಸಾಗಳಲ್ಲಿ ಕನ್ನಡ ಕಲಿಕಾ ಶಿಬಿರಗಳನ್ನು ನಡೆಸುತ್ತಾ ಸೌಹಾರ್ದ ಸಮಾವೇಶಗಳನ್ನು ಯಶಸ್ವಿಯಾಗಿ ಆಯೋಜಿಸಿರುವ ವೇದಿಕೆಯ ಹೆಗ್ಗಳಿಕೆಗೆ ಈ ಸಮಾರಂಭ ಸಾಕ್ಷಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸರಕಾರಿ ನೌಕರರ ಒಕ್ಕೂಟದ ಮಾಜಿ ಅಧ್ಯಕ್ಷ ಯು.ಡಿ. ನರಸಿಂಹಯ್ಯ, ಸಾಹಿತಿ ಡಾ.ಜಿ.ಕೃಷ್ಣಪ್ಪ, ಕನ್ನಡಪರ ಹೋರಾಟಗಾರ ಶೇ.ಬೋ. ರಾಧಾಕೃಷ್ಣ, ರಂಗಭೂಮಿ ಕಲಾವಿದ ಎ.ಬಿ.ಬಸವರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X