Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಹುಜನರು ಆಡಳಿತ ನಡೆಸುವ ವರ್ಗವಾಗಬೇಕು:...

ಬಹುಜನರು ಆಡಳಿತ ನಡೆಸುವ ವರ್ಗವಾಗಬೇಕು: ಬಿಎಸ್ಪಿ ರಾಜ್ಯ ಸಂಯೋಜಕ ತೋಮರ್

ಬಿಎಸ್ಪಿ ವಿಭಾಗ ಮಟ್ಟದ ಪದಾಧಿಕಾರಿಗಳ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ13 Nov 2018 11:46 PM IST
share
ಬಹುಜನರು ಆಡಳಿತ ನಡೆಸುವ ವರ್ಗವಾಗಬೇಕು: ಬಿಎಸ್ಪಿ ರಾಜ್ಯ ಸಂಯೋಜಕ ತೋಮರ್

ಮಂಡ್ಯ, ನ.13: ಬಹುಜನರು ದೇಶದ ಆಡಳಿತ ನಡೆಸುವ ವರ್ಗವಾಗಬೇಕಿದೆ ಎಂದು ಬಹುಜನ ಸಮಾಜ ಪಕ್ಷದ ಕರ್ನಾಟಕ ರಾಜ್ಯ ಸಂಯೋಜಕ ಎಂ.ಎಲ್. ತೋಮರ್ ಹೇಳಿದ್ದಾರೆ.

ನಗರದ ವಿಠಲ ಸಮುದಾಯಭವನದಲ್ಲಿ ಬಹುಜನ ಸಮಾಜ ಪಕ್ಷದ ಮೈಸೂರು ವಲಯದ ಮಂಡ್ಯ ವಿಭಾಗ ಮಂಗಳವಾರ ಆಯೋಜಿಸಿದ್ದ ವಿಭಾಗಮಟ್ಟದ ಪದಾಧಿಕಾರಿಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತ ದೇಶದಲ್ಲಿ ಬಹುಜನರೇ ದೊಡ್ಡ ಸಮುದಾಯವಾಗಿದ್ದು, ಒಗ್ಗೂಡಿ ದೇಶದ ಆಡಳಿತ ನಡೆಸುವ ರಾಜಕೀಯ ಪ್ರಜ್ಞಾವಂತಿಕೆಯನ್ನು ಬೆಳೆಸಿಕೊಳ್ಳಬೇಕಿದೆ. ಬಹುಜನರು ಈ ದೇಶದ ಆಸ್ತಿ. ಕೇವಲ ಶೇ.4ರಷ್ಟಿರುವ ಮನುವಾದಿಗಳು ದೇಶವನ್ನು ಆಳಿ ಬಹುಜನರನ್ನು ತುಳಿಯುತ್ತಿದ್ದಾರೆ ಎಂದು ತಿಳಿಸಿದರು.

ಪ್ರಸ್ತುತ ದಿನಗಳಲ್ಲಿ ಬಿಎಸ್ಪಿಯೊಂದಿಗೆ ಮೈತ್ರಿ ಮಾಡಿಕೊಂಡು ದೇಶ, ರಾಜ್ಯಗಳಲ್ಲಿನ ಪ್ರಮುಖ ಪಕ್ಷಗಳ ನಾಯಕರು ಅಧಿಕಾರ ನಡೆಸಲು ಮುಂದಾಗುತ್ತಿದ್ದಾರೆ. ಯಾರು ಬಿಎಸ್ಪಿಯನ್ನು ವಿರೋಧಿಸುತ್ತಿದ್ದರೋ ಅಂತಹವರೇ ಇಂದು ಮಾಯಾವತಿ ಅವರನ್ನು ಭೇಟಿ ಮಾಡಿ ಬೆಂಬಲಕ್ಕಾಗಿ ಬೇಡುತ್ತಿದ್ದಾರೆ ಎಂದರು. ಡಾ. ಬಿ.ಆರ್.ಅಂಬೇಡ್ಕರ್ ಅವರ ಕನಸನ್ನು ನನಸು ಮಾಡಲು ದಾದಾಸಾಹೇಬ್ ಕಾನ್ಶೀರಾಂ ಮುಂದಾಗಿ ಯಶಸ್ವಿಯಾದರು. ಕಾನ್ಶೀರಾಂ ಅವರ ಕನಸನ್ನು ನನಸು ಮಾಡಲು ಮಾಯಾವತಿ ಅವರನ್ನು ಪ್ರಧಾನಮಂತ್ರಿ ಮಾಡುವ ಮೂಲಕ ಸಾಧಕರಾಗೋಣ ಎಂದು ಅವರು ಕರೆ ನೀಡಿದರು.

ಶಾಸಕ ಎನ್. ಮಹೇಶ್ ಮಾತನಾಡಿ, ರಾಜಕೀಯ ಎನ್ನುವುದು ವಿಜ್ಞಾನ. ವಿಜ್ಞಾನ ಯಾವಾಗಲೂ ಪ್ರಾಯೋಗಿಕವಾಗೇ ಸಾಬೀತು ಆಗಬೇಕಿದೆ. ರಾಜಕೀಯ ಪ್ರಜ್ಞೆ ಎಲ್ಲರಲ್ಲೂ ಬೆಳೆಯಬೇಕಿದೆ ಎಂದರು.

ಬಹುಜನರು ಆಳುವ ಶಕ್ತಿಯಾಗಬೇಕಾದರೆ ಸಂಘಟನಾ ಚಳುವಳಿ ಅಗತ್ಯ. ಅಂಬೇಡ್ಕರ್ ಅವರ ತತ್ವ, ಸಿದ್ಧಾಂತ, ಕನಸುಗಳನ್ನೇ ಕಾನ್ಶೀರಾಮ್ ಕಟ್ಟಿ ಬೆಳೆಸಿರುವುದು. ಇಂದು ದೇಶ ಮತ್ತು ರಾಜ್ಯಗಳಲ್ಲಿ ಬಿಎಸ್ಪಿ ವರಿಷ್ಠೆ ಮಾಯಾವತಿ ಮೂಲಕ ನಸಾಗುತ್ತಿದೆ. ಬಹುಜನರನ್ನು ಆಳುವ ವರ್ಗವಾಗಿ ಬೆಳೆಸುತ್ತಿದ್ದಾರೆ ಎಂದು ಅವರು ವಿವರಿಸಿದರು.

ಇದೇ ಸಂದರ್ಭದಲ್ಲಿ ಬಿಎಸ್ಪಿ ಸಂಸ್ಥಾಪಕ ಅಧ್ಯಕ್ಷ ಕಾನ್ಶೀರಾಂ ಅವರ "ಆನೆ ಗುರುತಿಗೆ ಒಂದು ಓಟು, ಬಿಎಸ್ಪಿಗೆ ಒಂದು ರೂ. ನೋಟು" ಎಂದು ಘೋಷವಾಕ್ಯಕ್ಕೆ ಮನ್ನಣೆ ನೀಡಿದ ಪದಾಧಿಕಾರಿಗಳು ಸುಮಾರು 15 ಸಾವಿರ ರೂ.ಗಳನ್ನು ಕಾಣಿಕೆಯಾಗಿ ನೀಡಿದರು. 

ಈ ವಿಭಾಗೀಯ ಸಮಾವೇಶದಲ್ಲಿ  ಮಂಡ್ಯ, ರಾಮನಗರ, ಹಾಸನ ವಿಭಾಗಮಟ್ಟದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X