ಈ ತಿಂಗಳೊಳಗೆ ಸಚಿವ ಸಂಪುಟ ವಿಸ್ತರಣೆ: ದಿನೇಶ್ ಗುಂಡೂರಾವ್
ಬೆಂಗಳೂರು, ನ.14: ಸಚಿವ ಸಂಪುಟವನ್ನು ಈ ತಿಂಗಳ ಅಂತ್ಯದ ವೇಳೆಗೆ ವಿಸ್ತರಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಸಂಬಂಧ ಕಾಂಗ್ರೆಸ್ ಹಾಗೂ ಜೆಡಿಎಸ್ ವರಿಷ್ಠರು ಒಟ್ಟಿಗೆ ಕೂತು ಚರ್ಚೆ ನಡೆಸಿ, ಈ ತಿಂಗಳ ಅಂತ್ಯದೊಳಗೆ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.
ದುರುದ್ದೇಶ ಪೂರ್ವಕವಾಗಿ ಅನ್ಯ ಧರ್ಮ ಹಾಗೂ ಜಾತಿ ಸಮುದಾಯವನ್ನು ಟೀಕಿಸುವವರ ವಿರುದ್ಧ ಪೊಲೀಸ್ ಇಲಾಖೆ ಕಾನೂನು ಕ್ರಮ ಕೈಗೊಳ್ಳಲಿದೆ. ಅದರ ಭಾಗವಾಗಿ ಪತ್ರಕರ್ತ ಸಂತೋಷ್ ತಮ್ಮಯ್ಯ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಯಾರು ಕೂಡ ಸಮಾಜದ ಶಾಂತಿ, ಸೌಹಾರ್ದತೆಯನ್ನು ಕದಡುವಂತಹ ಕೆಲಸ ಮಾಡಬಾರದು ಎಂದು ತಿಳಿಸಿದರು.
Next Story