Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಂಗಾಳದ ಹೆಸರನ್ನು ಬಾಂಗ್ಲಾ ಎಂದು...

ಬಂಗಾಳದ ಹೆಸರನ್ನು ಬಾಂಗ್ಲಾ ಎಂದು ಬದಲಿಸಿದ ಕೇಂದ್ರದ ವಿರುದ್ಧ ಮಮತಾ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ14 Nov 2018 9:24 PM IST
share
ಬಂಗಾಳದ ಹೆಸರನ್ನು ಬಾಂಗ್ಲಾ ಎಂದು ಬದಲಿಸಿದ ಕೇಂದ್ರದ ವಿರುದ್ಧ ಮಮತಾ ಆಕ್ರೋಶ

ಹೊಸದಿಲ್ಲಿ, ನ.14: ಐತಿಹಾಸಿಕ ನಗರಗಳ ಹೆಸರನ್ನು ಏಕಪಕ್ಷೀಯವಾಗಿ ಬದಲಿಸುತ್ತಿರುವ ಬಿಜೆಪಿ, ಪಶ್ಚಿಮ ಬಂಗಾಳವನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಟಿಎಂಸಿ ಮುಖಂಡೆ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಿಸಿದ್ದಾರೆ. ಬಿಜೆಪಿ ತನ್ನ ಸ್ವಹಿತಾಸಕ್ತಿಗಾಗಿ ಐತಿಹಾಸಿಕ ನಗರ ಹಾಗೂ ಸಂಸ್ಥೆಗಳ ಹೆಸರನ್ನು ಏಕಪಕ್ಷೀಯವಾಗಿ ಬದಲಿಸುತ್ತಿರುವುದನ್ನು ಇತ್ತೀಚಿಗೆ ಬಹುತೇಕ ಎಲ್ಲಾ ದಿನವೂ ಗಮನಿಸಿದ್ದೇನೆ. ಆದರೆ ಪಶ್ಚಿಮಬಂಗಾಳದ ಹೆಸರನ್ನು ಬಾಂಗ್ಲಾ ಎಂದು ಬದಲಾಯಿಸುವಂತೆ ರಾಜ್ಯದ ವಿಧಾನಸಭೆಯಲ್ಲಿ ಅವಿರೋಧ ನಿರ್ಣಯವನ್ನು ಅಂಗೀಕರಿಸಿದ್ದರೂ ಇದನ್ನು ಬಿಜೆಪಿ ಸರಕಾರ ಕಡೆಗಣಿಸಿದೆ ಎಂದು ತಮ್ಮ ಫೇಸ್‌ಬುಕ್ ಪೋಸ್ಟ್‌ ನಲ್ಲಿ ಮಮತಾ ಹೇಳಿದ್ದಾರೆ.

ಸ್ವಾತಂತ್ರ್ಯ ದೊರೆತ ಬಳಿಕ, ರಾಜ್ಯಗಳ ಜನರ ಭಾವನೆ ಹಾಗೂ ಸ್ಥಳೀಯ ಭಾಷೆಗಳನ್ನು ಗಮನದಲ್ಲಿರಿಸಿಕೊಂಡು ಕೆಲವು ರಾಜ್ಯಗಳ ಮತ್ತು ನಗರಗಳ ಹೆಸರನ್ನು ಬದಲಿಸಲಾಗಿದೆ. (ಒರಿಸ್ಸಾದ ಹೆಸರನ್ನು ಒಡಿಶಾ, ಪಾಂಡಿಚೇರಿಯ ಹೆಸರನ್ನು ಪುದುಚೇರಿ ಇತ್ಯಾದಿ). ಇದು ವಾಸ್ತವಿಕವಾಗಿದೆ. ಆದರೆ ಬಂಗಾಳದ ವಿಷಯದಲ್ಲಿ ಸರಕಾರದ ನಿಲುವು ಸಂಪೂರ್ಣ ಭಿನ್ನವಾಗಿದೆ ಎಂದವರು ಹೇಳಿದ್ದಾರೆ. ರಾಜ್ಯದ ಮಾತೃಭಾಷೆಯಾಗಿರುವ ಬಾಂಗ್ಲಾದ ಕುರಿತು ಸ್ಥಳೀಯರಲ್ಲಿ ಇರುವ ಭಾವನೆಯನ್ನು ಗಮನಿಸಿ ರಾಜ್ಯದ ಹೆಸರನ್ನು ಪಶ್ಚಿಮಬಂಗಾಳದ ಬದಲು ಇಂಗ್ಲಿಷ್‌ನಲ್ಲಿ ಬೆಂಗಾಲ್, ಬೆಂಗಾಲಿಯಲ್ಲಿ ಬಾಂಗ್ಲಾ, ಹಿಂದಿಯಲ್ಲಿ ಬಂಗಾಲ್ ಎಂದು ಬದಲಿಸುವಂತೆ ವಿಧಾನಸಭೆ ನಿರ್ಣಯ ಅಂಗೀಕರಿಸಿತು. ಆದರೆ ಕೇಂದ್ರ ಗೃಹ ಇಲಾಖೆ ಎಲ್ಲಾ ಮೂರು ಭಾಷೆಗಳಲ್ಲೂ ಬಾಂಗ್ಲಾ ಎಂಬ ಹೆಸರು ಇರುವಂತೆ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸುವಂತೆ ಸಲಹೆ ಮಾಡಿತು. ಅದರಂತೆ ನಿರ್ಣಯ ಅಂಗೀಕರಿಸಿ ಕೇಂದ್ರ ಗೃಹ ಇಲಾಖೆಗೆ ಕಳುಹಿಸಿದ್ದು ಇದನ್ನು ಸುದೀರ್ಘಾವಧಿಯಿಂದ ತನ್ನ ಬಳಿಯೇ ಇರಿಸಿಕೊಂಡಿದೆ ಎಂದವರು ಹೇಳಿದ್ದಾರೆ.

  ಅವಿಭಜಿತ ಬಂಗಾಳಕ್ಕೆ ಕೋಲ್ಕತಾ ರಾಜಧಾನಿಯಾಗಿತ್ತು. ಭಾರತ ಹಾಗೂ ಬಾಂಗ್ಲಾದೇಶಗಳ ರಾಷ್ಟ್ರಗೀತೆಯನ್ನು ರವೀಂದ್ರನಾಥ ಟಾಗೋರ್ ಬರೆದಿದ್ದಾರೆ. ನಾವು ಭಾರತವನ್ನು ಪ್ರೀತಿಸುವ ಜೊತೆಗೆ ಬಾಂಗ್ಲಾದೇಶ ಹಾಗೂ ಬಂಗಾಳವನ್ನೂ ಪ್ರೀತಿಸುತ್ತೇವೆ. ಹೆಸರುಗಳಲ್ಲಿ ಸಾಮ್ಯತೆ ಇದ್ದರೆ ಅದೊಂದು ತೊಡಕಾಗದು. ಪಂಜಾಬ್ ಎಂಬ ಹೆಸರು ಭಾರತ ಹಾಗೂ ಪಾಕಿಸ್ತಾನದ ನಗರಕ್ಕಿಲ್ಲವೇ ಎಂದವರು ಪ್ರಶ್ನಿಸಿದ್ದಾರೆ. ರಾಜ್ಯದ ಅಸೆಂಬ್ಲಿಯಲ್ಲಿ ಶೂನ್ಯಬಲವನ್ನು ಹೊಂದಿರುವ ಪಕ್ಷ(ಬಿಜೆಪಿ)ವು ಹೆಸರು ಬದಲಾವಣೆಯನ್ನು ನಿರ್ಧರಿಸುವುದೋ ಅಥವಾ ರಾಜ್ಯ ವಿಧಾನಸಭೆಯಲ್ಲಿ ಅವಿರೋಧವಾಗಿ ಅಂಗೀಕರಿಸಿದ ನಿರ್ಣಯದ ಆಧಾರದಲ್ಲಿ ಹೆಸರು ಬದಲಾಯಿಸುವುದೋ ಎಂಬ ಪ್ರಶ್ನೆ ಇಲ್ಲಿ ಮೂಡಿದೆ ಎಂದು ಮಮತಾ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X