Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಾಡಗೀತೆ ಎರಡೂವರೆ ನಿಮಿಷಗಳಿಗೆ...

ನಾಡಗೀತೆ ಎರಡೂವರೆ ನಿಮಿಷಗಳಿಗೆ ಸೀಮಿತಗೊಳಿಸಲು ನಿರ್ಧಾರ

ಎರಡು ದಿನಗಳಲ್ಲಿ ಸರಕಾರಕ್ಕೆ ಶಿಫಾರಸ್ಸು

ವಾರ್ತಾಭಾರತಿವಾರ್ತಾಭಾರತಿ14 Nov 2018 9:26 PM IST
share
ನಾಡಗೀತೆ ಎರಡೂವರೆ ನಿಮಿಷಗಳಿಗೆ ಸೀಮಿತಗೊಳಿಸಲು ನಿರ್ಧಾರ

ಬೆಂಗಳೂರು, ನ.14: ಪುನರಾವರ್ತನೆ ಮಾಡದೆ ನಾಡಗೀತೆಯನ್ನು ಎರಡೂವರೆ ನಿಮಿಷಗಳಲ್ಲಿ ಹಾಡಿ ಮುಗಿಸುವಂತೆ ಕನ್ನಡ ಸಾಹಿತ್ಯ ಪರಿಷತ್ತು ನಿರ್ಧರಿಸಿದ್ದು, ಈ ಸಂಬಂಧ ಎರಡು ದಿನಗಳಲ್ಲಿ ಸರಕಾರಕ್ಕೆ ಶಿಫಾರಸ್ಸು ಸಲ್ಲಿಸಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಹೇಳಿದ್ದಾರೆ.

ಬುಧವಾರ ನಗರದ ಕಸಾಪದಲ್ಲಿ ನಡೆದ ಸಾಹಿತಿ, ಗಾಯಕರ ಹಾಗೂ ಹೋರಾಟಗಾರರ ಸಭೆಯಲ್ಲಿ ಈ ಸಂಬಂಧ ನಿರ್ಣಯ ಕೈಗೊಂಡಿದ್ದು, ನಾಡಗೀತೆ ‘ಜಯ ಭಾರತ ಜನನಿಯ ತನುಜಾತೆ’ ನಾಡಗೀತೆಯನ್ನು ಅಪಭ್ರಂಶವಿಲ್ಲದೆ, ಯಾವುದೇ ಪದಗಳನ್ನು ತೆಗೆಯದೆ ಎರಡೂವರೆ ನಿಮಿಷದಲ್ಲಿ ಹಾಡಬಹುದು ಎಂದು ಅಭಿಪ್ರಾಯ ಬಂದಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಸಾಪ ಅಧ್ಯಕ್ಷ ಡಾ.ಮನುಬಳಿಗಾರ್, ರಾಷ್ಟ್ರಕವಿ ಕುವೆಂಪು ಅವರು ರಚಿಸಿರುವ ನಾಡಗೀತೆಯನ್ನು ಇದೀಗ ಸಭೆ, ಸಮಾರಂಭಗಳಲ್ಲಿ 8-9 ನಿಮಿಷಗಳ ಕಾಲ ಹಾಡಲಾಗುತ್ತಿದೆ. ಇದರಿಂದ ವಯಸ್ಸಾದವರು, ಅನಾರೋಗ್ಯಪೀಡಿತರು ಹಾಗೂ ಅಸಹಾಯಕರಿಗೆ ಹೆಚ್ಚು ಸಮಯ ನಿಲ್ಲಲು ಹಾಗೂ ಕೇಳಿಸಿಕೊಳ್ಳಲು ಕಷ್ಟ. ಹೀಗಾಗಿ, ನಾಡಗೀತೆಯನ್ನು ಕಡಿತ ಮಾಡಬೇಕು ಎಂಬ ಅಭಿಪ್ರಾಯ ಬಂದಿದ್ದರಿಂದ ಸಭೆ ನಡೆಸಲಾಗಿದೆ. ಅದರಲ್ಲಿ ಹಾಡನ್ನು ಪುನರಾವರ್ತನೆಯಾಗದಂತೆ ಯಾವುದೇ ಧಾಟಿಯಲ್ಲಿ ಹಾಡಿದರೂ ಎರಡೂವರೆ ನಿಮಿಷದೊಳಗೆ ಹಾಡಬಹುದು ಎಂಬುದನ್ನು ದಾಖಲಿಸಿದ್ದೇವೆ ಎಂದು ಹೇಳಿದರು.

ನಾಡಗೀತೆ ಹಾಡುವ ಧಾಟಿಗೆ ಸಂಬಂಧಿಸಿದಂತೆ ಈಗಾಗಲೇ ಸಾಹಿತಿಗಳಾದ ಜಿ.ಎಸ್. ಶಿವರುದ್ರಪ್ಪ ಮತ್ತು ವಸಂತ ಕನಕಾಪುರ ಅವರ ಸಮಿತಿಗಳು ನೀಡಿರುವ ವರದಿಗಳು ಸರಕಾರದ ಮಟ್ಟದಲ್ಲಿವೆ. ಅವು ಇನ್ನೂ ಇತ್ಯರ್ಥಗೊಂಡಿಲ್ಲ. ಆದರೆ, ಕಸಾಪದಿಂದ ನಮಗೆ ಧಾಟಿಯ ಕುರಿತಾದ ಯಾವುದೇ ಆಕ್ಷೇಪಗಳಿಲ್ಲ. ನಾವು ಕೇವಲ ಅವಧಿಯ ಬಗ್ಗೆ ಚರ್ಚಿಸಿ, ನಿರ್ಧರಿಸಿದೆವು. ಆದರೆ ಸರಕಾರದ ಮಟ್ಟದಲ್ಲಿರುವ ಹಳೆಯ ವರದಿಗಳನ್ನು ಸರಕಾರ ಪರಿಶೀಲಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಹಿರಿಯ ಸಾಹಿತಿಗಳಾದ ಡಾ. ಚಂದ್ರಶೇಖರ ಕಂಬಾರ, ಡಾ. ಚಂದ್ರಶೇಖರ ಪಾಟೀಲ, ನಾಡೋಜ ಕಮಲಾ ಹಂಪನಾ, ಡಾ. ದೊಡ್ಡರಂಗೇಗೌಡ, ಬಿ.ಟಿ. ಲಲಿತಾ ನಾಯಕ್ ಮತ್ತಿತರ ಸಾಹಿತಿಗಳು, ವೈ.ಕೆ. ಮುದ್ದುಕೃಷ್ಣ, ಮುದ್ದುಮೋಹನ್, ಆನಂದ ಮಾದಲಗೆರೆ, ಕಿಕ್ಕೇರಿ ಕೃಷ್ಣಮೂರ್ತಿ ಮತ್ತಿತರ ಗಾಯಕರು, ರಾ.ನಂ. ಚಂದ್ರಶೇಖರ್, ಸತೀಶ್‌ಗೌಡ, ತಿಮ್ಮಯ್ಯ ಮತ್ತಿತರ ಕನ್ನಡಪರ ಹೋರಾಟಗಾರರು ಸೇರಿದಂತೆ ಒಟ್ಟಾರೆ 33 ಮಂದಿ ಭಾಗವಹಿಸಿದ್ದರು.

ಇವರೆಲ್ಲರ ಸಮ್ಮುಖದಲ್ಲಿ ನಾಡಗೀತೆಯ ಅವಧಿಯ ಬಗ್ಗೆ ಚರ್ಚೆಯಾಯಿತು. ಈ ವೇಳೆ ಆನಂದ ಮಾದಲಗೆರೆ, ಮೃತ್ಯುಂಜಯ ದೊಡ್ಡವಾಡ ಅವರು ಸಭೆಯಲ್ಲಿ ನಾಡಗೀತೆಯನ್ನು ಹಾಡಿದರು. ಯಾವುದೇ ಅಪಭ್ರಂಶವಿಲ್ಲದೆ, ಅವಸರವೂ ಇಲ್ಲದೆ ಅತ್ಯಂತ ಸೊಗಸಾಗಿ 2.18 ನಿಮಿಷದಲ್ಲಿ ಹಾಡಿ ಮುಗಿಸಿದರು. ಹೀಗಾಗಿ ಎರಡರಿಂದ ಎರಡೂವರೆ ನಿಮಿಷದಲ್ಲಿ ನಾಡಗೀತೆಯ ಅವಧಿಯನ್ನು ನಿಗದಿಗೊಳಿಸಬಹುದು ಎಂಬುದನ್ನು ಸಭೆಯಲ್ಲಿ ನಿರ್ಧರಿಸಲಾಯಿತು. ಇದಕ್ಕೆ ಕವಿ ನಿಸಾರ್ ಅಹಮದ್ ಪತ್ರ ಬರೆದು ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಮನು ಬಳಿಗಾರ್ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X