Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಎಂಡೋಪೀಡಿತ ಪ್ರದೇಶದಲ್ಲಿ...

ಮಂಗಳೂರು: ಎಂಡೋಪೀಡಿತ ಪ್ರದೇಶದಲ್ಲಿ ನೀರಿನ ಮಾದರಿ ಸಂಗ್ರಹಕ್ಕೆ ಸಮಿತಿ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ14 Nov 2018 11:10 PM IST
share
ಮಂಗಳೂರು: ಎಂಡೋಪೀಡಿತ ಪ್ರದೇಶದಲ್ಲಿ ನೀರಿನ ಮಾದರಿ ಸಂಗ್ರಹಕ್ಕೆ ಸಮಿತಿ ನಿರ್ಧಾರ

ಮಂಗಳೂರು, ನ.14: ಎಂಡೋಸಲ್ಫಾನ್ ಪೀಡಿತ ಪ್ರದೇಶದಲ್ಲಿ ಜಿಲ್ಲಾಡಳಿತ ಹಾಗೂ ಎಂಡೋಸಲ್ಫಾನ್ ಪೀಡಿತ ರಕ್ಷಣಾ ಸಂಘಟನೆಗಳ ಜಂಟಿ ಸಮಿತಿಯೊಂದಿಗೆ ನೀರಿನ ಮಾದರಿ ಪರೀಕ್ಷೆ ಮಾಡಲು ಕರ್ನಾಟಕ ವಿಧಾನ ಪರಿಷತ್‌ನ ಸರಕಾರಿ ಭರವಸೆಗಳ ಸಮಿತಿ ನಿರ್ಧರಿಸಿತು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಎಂಡೋಸಲ್ಫಾನ್ ಸಂತ್ರಸ್ತರಿಗೆ ಹಾಗೂ ಮೃತಪಟ್ಟ ಎಂಡೋಸಲ್ಫಾನ್ ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ನೀಡುವ ಕುರಿತ ಕರ್ನಾಟಕ ವಿಧಾನ ಪರಿಷತ್‌ನ ಸರಕಾರಿ ಭರವಸೆಗಳ ಸಮಿತಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಧ್ಯಕ್ಷ ಕೆ.ಸಿ. ಕೊಂಡಯ್ಯ, ಎಂಡೋಸಲ್ಫಾನ್ ಪೀಡಿತ 92 ಗ್ರಾಮಗಳ ವ್ಯಾಪ್ತಿಯಲ್ಲಿನ ತೆರೆದ ನೀರು ಹಾಗೂ ಬೋರ್‌ವೆಲ್‌ಗಳಲ್ಲಿನ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೊಳಪಡಿಸಬೇಕು ಸೂಚಿಸಿದರು.

ಸರಕಾರಿ ಭರವಸೆಗಳ ಸಮಿತಿಯ ತಂಡ ಬುಧವಾರ ಎಂಡೋಸಲ್ಫಾನ್ ಪ್ರದೇಶಗಳಾದ ಪುತ್ತೂರು, ಬೆಳ್ತಂಗಡಿ, ಕೊಕ್ಕಡ ಡೇ ಕೇರ್ ಸೆಂಟರ್‌ಗಳು ಹಾಗೂ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಂಡೊಸಲ್ಫಾನ್ ಪೀಡಿತರನ್ನು ಭೇಟಿ ಮಾಡಿತು. ಎಂಡೋಪೀಡಿತ ಸಂತ್ರಸ್ತರು ನರಳಾಟ ತೀರಾ ಮನಸಿಗೆ ವಿಚಲಿತವಾಗಿದೆ ಎಂದರು.

ಡೇ ಕೇರ್‌ಗಳಲ್ಲಿ ಎಂಡೋಪೀಡಿತ ಸಂತ್ರಸ್ತ ವಯಸ್ಕ ಯುವಕ- ಯುವತಿಯರಿಗೆ ಫಿಜಿಯೊಥೆರಫಿ, ತರಬೇತಿ ನೀಡಲಾಗುತ್ತಿದೆ. ಇದಕ್ಕೆ ಹಲವು ಸಂಘಟನೆ ಗಳು, ಶಿಕ್ಷಕರು ಒಳ್ಳೆಯ ಕಾರ್ಯಕ್ರಮಗಳನ್ನು ಹಾಕಿಕೊಂಡು ಸೇವೆ ನೀಡುತ್ತಿದ್ದಾರೆ. ಕೆಲವು ಕೇಸುಗಳು ಹದಗೆಟ್ಟಿದ್ದು, 29 ವರ್ಷದ ಸಂತೋಷ ಎಂಬ ಯುವಕನಿಗೆ ಪುನರಾವಸ್ಥೆಯಾಗಬೇಕು.ಇನ್ನು ನಾಲ್ಕೈದು ಡೇ ಕೇರ್ ಸೆಂಟರ್‌ಗಳು ಪ್ರಾರಂಭವಾಗಲಿವೆ ಎಂದರು.

ಸಂತ್ರಸ್ತ ಕುಟುಂಬಗಳು ಸೊಸೈಟಿಗಳನ್ನು ಕಟ್ಟಿಕೊಂಡಿರುವ ಬಗ್ಗೆ ಸಭೆಯಲ್ಲಿ ಕೇಳಿಬಂದಿದ್ದು, ಇಂತಹ ಸೇವೆ ಸ್ವಾಗತಾರ್ಹ ಕಾರ್ಯವಾಗಿದೆ. ಈ ಸೊಸೈಟಿ ಗಳಿಗೆ ಜಾಗ, ಕಟ್ಟಡಗಳನ್ನು ನಿರ್ಮಿಸಿ ಕೊಡುವ ಬಗ್ಗೆ ಸಮಿತಿಯು ಸರಕಾರಕ್ಕೆ ಪ್ರಸ್ತಾವ ಸಲ್ಲಿಸಲಿದೆ. ಡೇ ಕೇರ್ ಸೆಂಟರ್‌ಗಳಲ್ಲಿ ತರಬೇತಿ, ಚಿಕಿತ್ಸೆಗಳನ್ನು ನೀಡಲಾಗುತ್ತಿದೆ. ಜೊತೆಗೆ ಆಸಕ್ತ ಸಂತ್ರಸ್ತರಿಗೆ ಚಿತ್ರಕಲೆ ಮತ್ತಿತರ ವಿಷಯಗಳ ಬಗ್ಗೆ ತರಬೇತಿ ನೀಡಲಾಗುತ್ತಿದೆ ಎಂದರು.

4000 ಸಂತ್ರಸ್ತರಿಗೆ ಪೋಷಕಾಂಶಯುಕ್ತ ಬೇಳೆ, ಎಣ್ಣೆ, ಮತ್ತಿತರ ಧಾನ್ಯ ಆಹಾರ ಪೂರೈಸಲಾಗುವುದು. ಈ ಬಗ್ಗೆ ಜಿಲ್ಲಾದ್ಯಂತ ಸರ್ವೇ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ. ಸಂತ್ರಸ್ತರಿಗೆ ನೀಡುತ್ತಿರುವ ಪರಿಹಾರ ಧನವನ್ನು ಮಾನವೀಯ ನೆಲೆಯಲ್ಲಿ ಜಿಲ್ಲಾಧಿಕಾರಿ ಹೆಚ್ಚಳ ಮಾಡುವಂತೆ ಸಮಿತಿಗೆ ಒತ್ತಾಯಿಸಿದ್ದು, ಸರಕಾರದ ಮಟ್ಟದಲ್ಲಿ ಚರ್ಚಿಸಿ ಕೂಡಲೇ ಪರಿಹಾರ ಧನ ತಲುಪುವಂತೆ ಮಾಡಲಾಗುವುದು ಎಂದು ಹೇಳಿದರು.

ಎಂಡೋಪೀಡಿತರಿಗೆ ಚಿಕಿತ್ಸೆ ನೀಡಲು ಮೊಬೈಲ್ ಆ್ಯಂಬುಲೆನ್ಸ್‌ಗಳನ್ನು ಈಗಾಗಲೇ ಸರಕಾರ ಪೂರೈಕೆ ಮಾಡಿದ್ದು ಸೇವೆ ನೀಡುತ್ತಿವೆ. ಆದರೆ ಆ್ಯಂಬುಲೆನ್ಸ್‌ಗಳು ಸಮರ್ಪಕವಾಗಿ ಸೇವೆ ನೀಡುತ್ತಿಲ್ಲ. ಎತ್ತರದ ಪ್ರದೇಶಗಳಲ್ಲಿ ಈ ಆ್ಯಂಬುಲೆನ್ಸ್‌ಗಳು ಹತ್ತಲು ಸಮರ್ಥವಿಲ್ಲ ಎನ್ನುವುದು ಸಭೆಯಲ್ಲಿ ಬೆಳಕಿಗೆ ಬಂದಿದೆ. ಇನ್ನು ಹೆಚ್ಚಿನ ಸಾಮರ್ಥ್ಯದ ಆ್ಯಂಬುಲೆನ್ಸ್‌ಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಕೇರಳ ಮಾದರಿಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗೆ ಶಾಶ್ವತ ಪರಿಹಾರವನ್ನು ನೀಡಲು ಅಲ್ಲಿನ ಜಿಲ್ಲಾ ಮಟ್ಟದ ಆಡಳಿತದೊಂದಿಗೆ ಸಮಾಲೋಚನೆ ನಡೆಸಲಾಗುವುದು. ಈ ಬಗ್ಗೆ ರಾಜ್ಯ ಕಾರ್ಯದರ್ಶಿ ಜೊತೆ ಸಮಾಲೋಚನೆ ನಡೆಸಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್‌ನ ಸರಕಾರಿ ಭರವಸೆಗಳ ಸಮಿತಿಯ ಸದಸ್ಯರಾದ ಡಾ.ತೇಜಸ್ವಿನಿಗೌಡ, ಎಸ್.ರವಿ, ಕೆ.ಟಿ. ಶ್ರೀಕಂಠೇಗೌಡ, ಕೆ.ವಿ. ನಾರಾಯಣಸ್ವಾಮಿ, ಎಂ.ಎ. ಗೋಪಾಲಸ್ವಾಮಿ, ಕೆ.ಹರೀಶ್ ಕುಮಾರ್, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಸಿಇಒ ಡಾ.ಸೆಲ್ವಮಣಿ, ಡಿಎಚ್ ಒ ಡಾ.ರಾಮಕೃಷ್ಣ ರಾವ್ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X