Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಹಾಂಕಾಂಗ್ ಓಪನ್: ಸಿಂಧು, ಸಮೀರ್ ಎರಡನೇ...

ಹಾಂಕಾಂಗ್ ಓಪನ್: ಸಿಂಧು, ಸಮೀರ್ ಎರಡನೇ ಸುತ್ತಿಗೆ ಲಗ್ಗೆ

ವಾರ್ತಾಭಾರತಿವಾರ್ತಾಭಾರತಿ14 Nov 2018 11:38 PM IST
share
ಹಾಂಕಾಂಗ್ ಓಪನ್: ಸಿಂಧು, ಸಮೀರ್ ಎರಡನೇ ಸುತ್ತಿಗೆ ಲಗ್ಗೆ

ಕೌಲೂನ್, ನ.14: ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ವಿಜೇತೆ ಪಿ.ವಿ.ಸಿಂಧು ಹಾಗೂ ಸಮೀರ್ ವರ್ಮಾ ಹಾಂಕಾಂಗ್ ಓಪನ್ ವರ್ಲ್ಡ್ ಟೂರ್ ಸೂಪರ್500 ಬ್ಯಾಡ್ಮಿಂಟನ್ ಟೂರ್ನಮೆಂಟ್‌ನಲ್ಲಿ ಬುಧವಾರ ಶುಭಾರಂಭ ಮಾಡಿದ್ದಾರೆ.

ಮೂರನೇ ಶ್ರೇಯಾಂಕದ ಸಿಂಧು ಒಂದು ಗಂಟೆಯೊಳಗೆ ಕೊನೆಗೊಂಡ ಮಹಿಳೆಯರ ಸಿಂಗಲ್ಸ್ ನ ಮೊದಲ ಸುತ್ತಿನ ಪಂದ್ಯದಲ್ಲಿ ಥಾಯ್ಲೆಂಡ್‌ನ ನಿಟ್ಚಾಯೊನ್ ಜಿಂದಾಪೊಲ್‌ರನ್ನು 21-15, 13-21, 21-17 ಗೇಮ್‌ಗಳ ಅಂತರದಿಂದ ಮಣಿಸಿದರು.

ಸಿಂಧು ಥಾಯ್ಲೆಂಡ್ ಆಟಗಾರ್ತಿಯ ವಿರುದ್ಧ ನಾಲ್ಕನೇ ಜಯ ದಾಖಲಿಸಿದರು. ಸಿಂಧು ಈ ಋತುವಿನಲ್ಲಿ ಕಾಮನ್‌ವೆಲ್ತ್ ಗೇಮ್ಸ್, ವಿಶ್ವ ಚಾಂಪಿಯನ್‌ಶಿಪ್ ಹಾಗು ಏಶ್ಯನ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ. ಹೈದರಾಬಾದ್‌ನ 23ರ ಹರೆಯದ ಆಟಗಾರ್ತಿ ಸಿಂಧು ಮುಂದಿನ ಸುತ್ತಿನಲ್ಲಿ ಕೊರಿಯಾ ಆಟಗಾರ್ತಿ ಸಂಗ್ ಜಿ ಹಿಯುನ್‌ರನ್ನು ಎದುರಿಸಲಿದ್ದಾರೆ. ಸಿಂಧು ಕೊರಿಯಾ ಆಟಗಾರ್ತಿ ವಿರುದ್ಧ 8-5 ಹೆಡ್-ಟು-ಹೆಡ್ ದಾಖಲೆ ಕಾಯ್ದುಕೊಂಡಿದ್ದಾರೆ.

ಈ ವರ್ಷ ಸ್ವಿಸ್ ಓಪನ್ ಹಾಗೂ ಹೈದರಾಬಾದ್ ಓಪನ್ ಪ್ರಶಸ್ತಿ ಜಯಿಸಿರುವ ಸಮೀರ್ ಪುರುಷರ ಸಿಂಗಲ್ಸ್‌ನಲ್ಲಿ ಥಾಯ್ಲೆಂಡ್‌ನ ಇನ್ನೋರ್ವ ಆಟಗಾರ ಸುಪ್ಪನ್ಯು ಅವಿಹಿಂಗ್‌ಸನನ್‌ರನ್ನು 21-17, 21-14 ಅಂತರದಿಂದ ಸೋಲಿಸಿದರು.

ಸಮೀರ್ ಮುಂದಿನ ಸುತ್ತಿನಲ್ಲಿ ಚೀನಾದ ಒಲಿಂಪಿಕ್ಸ್ ಚಾಂಪಿಯನ್ ಚೆನ್ ಲಾಂಗ್‌ರನ್ನು ಎದುರಿಸಲಿದ್ದಾರೆ.

ಇದೇ ವೇಳೆ, ಮಾಜಿ ಸಿಂಗಾಪುರ ಓಪನ್ ಚಾಂಪಿಯನ್ ಬಿ.ಸಾಯಿ ಪ್ರಣೀತ್ 62 ನಿಮಿಷಗಳಲ್ಲಿ ಕೊನೆಗೊಂಡ ಮೊದಲ ಸುತ್ತಿನ ಪಂದ್ಯದಲ್ಲಿ ಥಾಯ್ಲೆಂಡ್‌ನ ಖೊಸಿಟ್ ಫೆಟ್‌ಪ್ರದಾಬ್ ವಿರುದ್ಧ ಆಘಾತಕಾರಿ ಸೋಲನುಭವಿಸಿದರು. ಈ ಪಂದ್ಯಕ್ಕಿಂತ ಮೊದಲು ಪ್ರಣೀತ್ ಅವರು ಖೊಸಿಟ್ ವಿರುದ್ದ ಆಡಿರುವ ಎಲ್ಲ 3 ಪಂದ್ಯಗಳನ್ನು ಜಯಿಸಿದ್ದರು. ಆದರೆ, ಇಲ್ಲಿ ಬುಧವಾರ ನಡೆದ ಪಂದ್ಯದಲ್ಲಿ 21-16, 11-21, 15-21 ಅಂತರದಿಂದ ಸೋತು ಟೂರ್ನಿಯಿಂದ ಹೊರ ನಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X