Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಝಿಂಬಾಬ್ವೆ ಗೆಲುವಿಗೆ 443 ರನ್ ಗುರಿ

ಝಿಂಬಾಬ್ವೆ ಗೆಲುವಿಗೆ 443 ರನ್ ಗುರಿ

ಮಹ್ಮೂದುಲ್ಲಾ 2ನೇ ಶತಕ

ವಾರ್ತಾಭಾರತಿವಾರ್ತಾಭಾರತಿ14 Nov 2018 11:44 PM IST
share
ಝಿಂಬಾಬ್ವೆ ಗೆಲುವಿಗೆ 443 ರನ್ ಗುರಿ

2ನೇ ಟೆಸ್ಟ್

ಢಾಕಾ, ನ.14: ಮಹ್ಮೂದುಲ್ಲಾ ರಿಯಾದ್ ಎಂಟು ವರ್ಷಗಳ ಬಳಿಕ ಮೊದಲ ಬಾರಿ ಸಿಡಿಸಿದ ಶತಕದ ನೆರವಿನಿಂದ ಬಾಂಗ್ಲಾದೇಶ ತಂಡ ಝಿಂಬಾಬ್ವೆ ತಂಡಕ್ಕೆ ಎರಡನೇ ಟೆಸ್ಟ್ ಪಂದ್ಯದ ಗೆಲುವಿಗೆ 443 ರನ್ ಕಠಿಣ ಗುರಿ ನೀಡಿದೆ.

ಬುಧವಾರ ನಾಲ್ಕನೇ ದಿನದಾಟದಂತ್ಯಕ್ಕೆ ಝಿಂಬಾಬ್ವೆ 2 ವಿಕೆಟ್ ನಷ್ಟಕ್ಕೆ 76 ರನ್ ಗಳಿಸಿ ಸಂಕಷ್ಟಕ್ಕೆ ಸಿಲುಕಿದೆ. ಹ್ಯಾಮಿಲ್ಟನ್ ಮಸಕಝ(25) ಹಾಗೂ ಬ್ರಿಯಾನ್ ಚಾರಿ(43)ಮೊದಲ ವಿಕೆಟ್‌ಗೆ 68 ರನ್ ಜೊತೆಯಾಟ ನಡೆಸಿದರು. ಆಫ್-ಸ್ಪಿನ್ನರ್ ಮೆಹಿದಿ ಹಸನ್ ಮೊದಲ ವಿಕೆಟ್ ಜೊತೆಯಾಟವನ್ನು ಮುರಿದರು. ಖಾತೆ ತೆರೆಯುವ ಮೊದಲೇ ಜೀವದಾನ ಪಡೆದು 43 ರನ್ ಗಳಿಸಿದ್ದ ಬ್ರಿಯಾನ್‌ಗೆ ಸ್ಪಿನ್ನರ್ ತೈಜುಲ್ ಇಸ್ಲಾಮ್ ಪೆವಿಲಿಯನ್ ಹಾದಿ ತೋರಿಸಿದರು.

ದಿನದಾಟದಂತ್ಯಕ್ಕೆ ಬ್ರೆಂಡನ್ ಟೇಲರ್(4) ಹಾಗೂ ಸಿಯಾನ್ ವಿಲಿಯಮ್ಸ್(2)ಕ್ರೀಸ್ ಕಾಯ್ದುಕೊಂಡಿದ್ದಾರೆ. ಝಿಂಬಾಬ್ವೆ ಪಂದ್ಯವನ್ನು ಗೆಲ್ಲಲು ಅಥವಾ ಡ್ರಾ ಸಾಧಿಸಲು ಭಾರೀ ಬೆವರಿಳಿಸುವ ಅಗತ್ಯವಿದೆ. ಮೊದಲ ಪಂದ್ಯವನ್ನು ಜಯಿಸಿರುವ ಝಿಂಬಾಬ್ವೆ 7 ವರ್ಷಗಳ ಬಳಿಕ ಸರಣಿ ಜಯಿಸಬೇಕಾದರೆ ಪಂದ್ಯ ಡ್ರಾಗೊಳಿಸುವ ಅಗತ್ಯವಿದೆ.

ಬಾಂಗ್ಲಾದೇಶಕ್ಕೆ ಸರಣಿಯನ್ನು ಸಮಬಲಗೊಳಿಸಲು ಪಂದ್ಯವನ್ನು ಗೆಲ್ಲಲೇಬೇಕಾಗಿದೆ.

ಇದಕ್ಕೂ ಮೊದಲು ಬಾಂಗ್ಲಾದೇಶ ತಂಡ ಮೊದಲ ಇನಿಂಗ್ಸ್‌ನಲ್ಲಿ 218 ರನ್ ಮುನ್ನಡೆ ಪಡೆದರೂ ಎದುರಾಳಿ ತಂಡಕ್ಕೆ ಫಾಲೋ-ಆನ್ ಹೇರದೇ ಎರಡನೇ ಇನಿಂಗ್ಸ್ ಆರಂಭಿಸಿತು. ಆಲ್‌ರೌಂಡರ್ ಮಹ್ಮೂದುಲ್ಲಾ ಲೆಗ್ ಸ್ಪಿನ್ನರ್ ಬ್ರೆಂಡನ್ ಮವುಟ ಎಸೆತದಲ್ಲಿ 2 ರನ್ ಗಳಿಸಿ 2ನೇ ಶತಕ ಪೂರೈಸಿದ ಬೆನ್ನಿಗೇ 6 ವಿಕೆಟ್‌ಗಳ ನಷ್ಟಕ್ಕೆ 224 ರನ್‌ಗೆ ಇನಿಂಗ್ಸ್ ಡಿಕ್ಲೇರ್ ಮಾಡಿ ಝಿಂಬಾಬ್ವೆಗೆ ಗೆಲ್ಲಲು ಕಠಿಣ ಗುರಿ ನೀಡಿತು.

ಬಾಂಗ್ಲಾದೇಶ ತಂಡ 25 ರನ್‌ಗೆ 4 ವಿಕೆಟ್‌ಗಳನ್ನು ಕಳೆದುಕೊಂಡು ಕಳಪೆ ಆರಂಭ ಪಡೆದಿತ್ತು. ಆರಂಭಿಕ ಆಟಗಾರರಾದ ಇಮ್ರುಲ್ ಕಯೆಸ್(3) ಹಾಗೂ ಲಿಟನ್ ದಾಸ್(6)ಮೂರು ಎಸೆತಗಳ ಅಂತರದಲ್ಲಿ ಅಲ್ಪ ಮೊತ್ತಕ್ಕೆ ಔಟಾದರು. ಮೊದಲ ಇನಿಂಗ್ಸ್‌ನಲ್ಲಿ ಶತಕ ಸಿಡಿಸಿದ್ದ ಮೊಮಿನುಲ್ ಹಕ್(1) ಹಾಗೂ ದ್ವಿಶತಕ ಸಿಡಿಸಿದ್ದ ಮುಶ್ಫಿಕುರ್ರಹೀಂ(7 ರನ್)ಬೇಗನೆ ಔಟಾದರು. ಆಗ ಚೊಚ್ಚಲ ಪಂದ್ಯವನ್ನಾಡುತ್ತಿರುವ ಮುಹಮ್ಮದ್ ಮಿಥುನ್(67 ರನ್, 110 ಎಸೆತ)ಅವರೊಂದಿಗೆ 6ನೇ ವಿಕೆಟ್‌ಗೆ 118 ರನ್ ಜೊತೆಯಾಟ ನಡೆಸಿದ ಮಹ್ಮೂದುಲ್ಲಾ ತಂಡವನ್ನು ಆಧರಿಸಿದರು. 2010ರಲ್ಲಿ ಹ್ಯಾಮಿಲ್ಟನ್‌ನಲ್ಲಿ ನ್ಯೂಝಿಲೆಂಡ್ ವಿರುದ್ಧ ಚೊಚ್ಚಲ ಶತಕ ಸಿಡಿಸಿದ್ದ ಮಹ್ಮೂದುಲ್ಲಾ ಇಂದು 122 ಎಸೆತಗಳನ್ನು ಎದುರಿಸಿ 4 ಬೌಂಡರಿ, 2 ಸಿಕ್ಸರ್‌ಗಳನ್ನು ಸಿಡಿಸಿ ಔಟಾಗದೆ ಉಳಿದರು. ಝಿಂಬಾಬ್ವೆ ಮೊದಲ ಇನಿಂಗ್ಸ್‌ನಲ್ಲಿ ಬಾಂಗ್ಲಾದೇಶದ 7ಕ್ಕೆ 522 ರನ್‌ಗೆ ಉತ್ತರವಾಗಿ 304 ರನ್‌ಗೆ ಆಲೌಟಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X