Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಟಿಪ್ಪು ಮತಾಂಧ ಎನ್ನುವವರು ನಿಜವಾದ...

ಟಿಪ್ಪು ಮತಾಂಧ ಎನ್ನುವವರು ನಿಜವಾದ ಮತಾಂಧರು: ವೈರಲ್ ಆದ ಬಿಜೆಪಿ ನಾಯಕನ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ15 Nov 2018 7:20 PM IST
share
ಟಿಪ್ಪು ಮತಾಂಧ ಎನ್ನುವವರು ನಿಜವಾದ ಮತಾಂಧರು: ವೈರಲ್ ಆದ ಬಿಜೆಪಿ ನಾಯಕನ ಹೇಳಿಕೆ

ಶಿವಮೊಗ್ಗ, ನ. 15: ಒಂದೆಡೆ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ವಿರೋಧಿಸಿ, ಇತ್ತೀಚೆಗೆ ಬಿಜೆಪಿ ಪಕ್ಷ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತ್ತು. ಮತ್ತೊಂದೆಡೆ ಯಡಿಯೂರಪ್ಪ ಸ್ವಕ್ಷೇತ್ರ ಶಿಕಾರಿಪುರ ಪಟ್ಟಣದ ಪುರಸಭೆಯ ಬಿಜೆಪಿ ಸದಸ್ಯರೋರ್ವರು, 'ಟಿಪ್ಪು ಸುಲ್ತಾನ್ ಮತಾಂಧ ಎಂದು ಹೇಳುವವರೇ ನಿಜವಾದ ಮತಾಂಧರು' ಎಂದು ಹೇಳುವ ಮೂಲಕ ಪಕ್ಷದ ನಾಯಕರಲ್ಲಿ ತೀವ್ರ ಇರುಸುಮುರಸು ಉಂಟು ಮಾಡಿದ್ದಾರೆ.

ಶಿಕಾರಿಪುರ ಪಟ್ಟಣದ ಬಿಜೆಪಿ ಕಾರ್ಯದರ್ಶಿಯೂ ಆಗಿರುವ ಪರಶುರಾಮ್ ಚಾರುಗಲ್ಲಿ ಟಿಪ್ಪುವಿನ ಗುಣಗಾನ ಮಾಡಿದ್ದಾರೆ. ಟಿಪ್ಪುವನ್ನು ಹೊಗಳುವ ಅವರ ಭಾಷಣದ ವೀಡಿಯೋ ತುಣುಕು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪರ-ವಿರುದ್ದ ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ. 

ಶಿಕಾರಿಪುರ ಪಟ್ಟಣದ ಮಾವಿನಕೊಪ್ಪಲಿನ ಕುಂಬಾರಗುಂಡಿ ಮಸೀದಿಯಲ್ಲಿ ಇತ್ತೀಚೆಗೆ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ 2ನೇ ವಾರ್ಡ್‍ನ ಪರಶುರಾಮ್ ಚಾರುಗಲ್ಲಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ತಮ್ಮ ಭಾಷಣದಲ್ಲಿ ಅವರು ಟಿಪ್ಪು ಸುಲ್ತಾನ್ ಗುಣಗಾನ ಮಾಡಿದ್ದರು. 

'ಟಿಪ್ಪು ಮತಾಂಧ ಎಂದು ಕರೆಯುವವರಿಗೆ ಇತಿಹಾಸದ ಅರಿವಿಲ್ಲ. ಅದಕ್ಕಾಗಿ ಹಾಗೆ ಮಾತನಾಡುತ್ತಾರೆ. ಟಿಪ್ಪು ಜಯಂತಿ ವಿರೋಧಿಸುವವರು ನಿಜವಾದ ಮತಾಂಧರಾಗಿದ್ದಾರೆ. ಹಿಂದೂ ದೇವಾಲಯ ರಕ್ಷಿಸಿದ್ದ ಟಿಪ್ಪು ಮಹಾ ಸಾಧಕನಾಗಿದ್ದಾನೆ. ಬ್ರಿಟಿಷರ ವಿರುದ್ದ ಹೋರಾಟ ನಡೆಸಿದ ಅವರು ದೇಶಪ್ರೇಮಿಯಾಗಿದ್ದಾರೆ. ಸುಮ್ಮನೆ ಅವರಿಗೆ ಮೈಸೂರು ಹುಲಿ ಎಂದು ಬಿರುದು ಬಂದಿಲ್ಲ. ಆ ಮಟ್ಟಕ್ಕೆ ಅವರು ಹೋರಾಟ ನಡೆಸಿದ್ದಾರೆ. ರಾಜ್ಯ ಸಂರಕ್ಷಣೆಗಾಗಿ ತಮ್ಮ ಇಬ್ಬರು ಮಕ್ಕಳನ್ನು ಒತ್ತೆಯಿಟ್ಟಿದ್ದರು ಎಂದಿದ್ದಾರೆ. 

ರೈತರು, ದೀನದಲಿತರ ಪರವಾಗಿ ಕಾರ್ಯನಿರ್ವಹಿಸಿದ ಟಿಪ್ಪು, ನೂರಾರು ಹಿಂದೂ ದೇವಾಲಯಗಳ ಸಂರಕ್ಷಣೆ ಮಾಡಿದ್ದಾರೆ. ರಾಜಕೀಯ ಉದ್ದೇಶಕ್ಕಾಗಿ ಟಿಪ್ಪು ಜಯಂತಿ ವಿರೋಧಿಸಲಾಗುತ್ತಿದೆ. ಬೇರೆ ಜಾತಿಯವರ ಜಯಂತಿ ಮಾಡಿದಾಗ ನೀವು ಆಕ್ಷೇಪ ವ್ಯಕ್ತಪಡಿಸುವುದಿಲ್ಲ. ಸಹಕಾರ ಕೊಡುತ್ತೀರಿ. ಆದೇ ರೀತಿಯಲ್ಲಿ ನಾವು ಕೂಡ ಸಹಕಾರ ನೀಡಬೇಕು. ಟಿಪ್ಪು ದೇಶ, ರಾಜ್ಯಕ್ಕಾಗಿ ಸಾಕಷ್ಟು ತ್ಯಾಗ ಮಾಡಿದ್ದಾರೆ. ಶೃಂಗೇರಿ ಮಠಕ್ಕೆ ಮರಾಠರು, ಪೇಶ್ವೆಗಳು ದಾಳಿ ಮಾಡಿ ಹಾನಿಗೊಳಿಸಿದಾಗ ಜೀರ್ಣೋದ್ದಾರಗೊಳಿಸಿದ್ದರು ಎಂದು ಟಿಪ್ಪುವಿನ ಗುಣಗಾನ ಮಾಡಿದ್ದರು. 

ಕಳೆದೆರಡು ದಿನಗಳ ಹಿಂದೆ ಶಿಕಾರಿಪುರ ಕಾಂಗ್ರೆಸ್ ಪಕ್ಷದ ನಾಯಕರೋರ್ವರು, ಬಿಜೆಪಿ ಪುರಸಭಾ ಸದಸ್ಯ ಪರಶುರಾಮ್ ಚಾರುಗಲ್ಲಿ ಮಾಡಿದ್ದ ಭಾಷಣದ ವೀಡಿಯೋ ತುಣಕನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಇದೀಗ ಇದು ಸಾಕಷ್ಟು ಸದ್ದು ಮಾಡಲಾರಂಭಿಸಿದೆ. 

ತಬ್ಬಿಬ್ಬು: ಜಿಲ್ಲೆಯಲ್ಲಿ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಆಯೋಜಿಸಿದ್ದ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮಕ್ಕೆ ಬಿಜೆಪಿ ಪಕ್ಷದ ಯಾವೊಬ್ಬ ಜನಪ್ರತಿನಿಧಿಯೂ ಭಾಗವಹಿಸಿರಲಿಲ್ಲ. ಜಯಂತಿ ಆಚರಣೆ ವಿರುದ್ಧ ಆ ಪಕ್ಷ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ ಕೂಡ ನಡೆಸಿತ್ತು. ಮತ್ತೊಂದೆಡೆ ಯಡಿಯೂರಪ್ಪ ಸ್ವಕ್ಷೇತ್ರದ ಪಕ್ಷದ ಪುರಸಭಾ ಸದಸ್ಯ, ಮಸೀದಿಯೊಂದರಲ್ಲಿ ಆಯೋಜಿಸಿದ್ದ ಟಿಪ್ಪು ಜಯಂತಿ ಆಚರಣೆಯಲ್ಲಿ ಭಾಗಿಯಾಗಿದ್ದಲ್ಲದೆ ಟಿಪ್ಪುವಿನ ಗುಣಗಾನ ಮಾಡಿದ ಅಂಶ ಬೆಳಕಿಗೆ ಬಂದಿರುವುದು ಆ ಪಕ್ಷದ ಸ್ಥಳೀಯ ಮುಖಂಡರನ್ನು ತಬ್ಬಿಬ್ಬುಗೊಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X