ಚಕ್ರ ಎಸೆತ ಸ್ಪರ್ಧೆ : ಮಾಧುರ್ಯ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಉಡುಪಿ, ನ.15: ತುಮಕೂರಿನ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಹಿಲಿಯಾಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಮಾಧುರ್ಯ ಭಾಗವಹಿಸಿ, ಚಕ್ರ ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ. ಮಾಧುರ್ಯ ಶಾಲೆಯ ದೈಹಿಕ ಶಿಕ್ಷಕಿ ಸುಗಂಧಿ ಅವರಿಂದ ತರಬೇತಿ ಪಡೆದಿದ್ದಾಳೆ.
Next Story