Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ದಲಿತ ಫಲಾನುಭವಿಗಳಿಗೆ ತಾಲೂಕಿನ ಯಾವುದೇ...

'ದಲಿತ ಫಲಾನುಭವಿಗಳಿಗೆ ತಾಲೂಕಿನ ಯಾವುದೇ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ನೀಡುತ್ತಿಲ್ಲ'

ಬಂಟ್ವಾಳ ತಾಲೂಕು ಮಟ್ಟದ ದಲಿತ ದೌರ್ಜನ್ಯ ಕುಂದು ಕೊರತೆ ನಿವಾರಣ ಸಭೆಯಲ್ಲಿ ಆರೋಪ

ವಾರ್ತಾಭಾರತಿವಾರ್ತಾಭಾರತಿ15 Nov 2018 10:11 PM IST
share
ದಲಿತ ಫಲಾನುಭವಿಗಳಿಗೆ ತಾಲೂಕಿನ ಯಾವುದೇ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ನೀಡುತ್ತಿಲ್ಲ

ಬಂಟ್ವಾಳ, ನ. 15: ವಿವಿಧ ಯೋಜನೆಗಳಡಿ ಸಹಾಯಧನ ಪಡೆಯುವ ದಲಿತ ಫಲಾನುಭವಿಗಳಿಗೆ ತಾಲೂಕಿನ ಯಾವುದೇ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ನೀಡುತ್ತಿಲ್ಲ ಎಂದು ದಲಿತ ಮುಖಂಡರು ಬ್ಯಾಂಕ್‍ಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ತಹಶೀಲ್ದಾರ್ ಪುರಂದರ ಹೆಗ್ಡೆ ಅಧ್ಯಕ್ಷತೆಯಲ್ಲಿ ನಡೆದ ತಾಲೂಕು ಮಟ್ಟದ ದಲಿತ ದೌರ್ಜನ್ಯ ಕುಂದು ಕೊರತೆ ನಿವಾರಣ ಸಭೆಯಲ್ಲಿ ಅಳಲು ತೋಡಿಕೊಂಡ ಅವರು, ಬ್ಯಾಂಕ್ ಅಧಿಕಾರಿಗಳ ಈ ನಿರ್ಲಕ್ಷ ಧೋರಣೆಯಿಂದಾಗಿ ದಲಿತ ಫಲಾನುಭವಿಗಳಿಗೆ ತೊಂದರೆ ಉಂಟಾಗಿದೆ ಎಂದು ಸಭೆಯ ಗಮನಕ್ಕೆ ತಂದರು.

ಈ ಸಂದರ್ಭ ಪಶುಸಂಗೋಪನಾ ಇಲಾಖಾ ಅಧಿಕಾರಿ ಮಾತನಾಡಿ, ತಮ್ಮ ಇಲಾಖೆಯ ಇಬ್ಬರು ಫಲಾನುಭವಿಗಳ ಅರ್ಜಿಯನ್ನು ಬಿ.ಸಿ.ರೋಡಿನ ಎರಡು ರಾಷ್ಟ್ರೀಕೃತ ಬ್ಯಾಂಕ್‍ಗಳಿಗೆ ಕೊರಿಯರ್ ಮೂಲಕ ಕಳುಹಿಸಿ ಕೊಡಲಾಗಿತ್ತಾದರೂ ಸ್ಪಂದಿಸದ ಬ್ಯಾಂಕ್ ಅಧಿಕಾರಿಗಳು ಅರ್ಜಿಯ ವಾಯಿದೆ ಮುಗಿದ ಬಳಿಕ ಮರಳಿ ಅರ್ಜಿಯನ್ನು ಇಲಾಖೆಗೆ ಕಳುಹಿಸಿಕೊಟ್ಟಿದ್ದಾರೆ ಎಂದು ಸಭಾಧ್ಯಕ್ಷರಿಗೆ ತಿಳಿಸಿದರು. ಬ್ಯಾಂಕ್‍ಗೆ ಒಂದುವಾರಗಳ ಕಾಲ ಗಡುವು ನೀಡಿ ತಹಶೀಲ್ದಾರ್ ಈ ಬಗ್ಗೆ ಕ್ರಮ ಜರುಗಿಸಬೇಕು ಎಂದು ದಲಿತ ಮುಖಂಡರೊಬ್ಬರು ಆಗ್ರಹಿಸಿದರು. ಈ ಬಗ್ಗೆ ಸಂಬಂಧಪಟ್ಟ ಎಲ್ಲ ಬ್ಯಾಂಕಿನ ಶಾಖಾಧಿಕಾರಿಗಳ ಜೊತೆ ಮಾತುಕತೆ ನಡೆಸಿ ಮುಂದಿನ ಕ್ರಮ ಜರಗಿಸುವ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ತಹಶೀಲ್ದಾರ್ ಪುರಂದರ ಹೆಗ್ಡೆ ತಿಳಿಸಿದರು. 

ಮನೆ ಮತ್ತಿತರ ಕಟ್ಟಡ ನಿರ್ಮಾಣಕ್ಕೆ ಮರಳು ಅಭಾವ ಉಂಟಾಗಿರುವ ಹಿನ್ನಲೆಯಲ್ಲಿ ಅನೇಕ ದಲಿತ ಕುಟುಂಬಗಳ ಮನೆ ನಿರ್ಮಾಣ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡು ತುಂಬಾ ತೊಂದರೆ ಪಡುತ್ತಿದ್ದಾರೆ. ಆದಷ್ಟು ಬೇಗ ಮರಳು ಸಮಸ್ಯೆಯನ್ನು ಬಗೆಹರಿಸಿ ದಲಿತರಿಗೆ  ಮನೆ ಕಟ್ಟಲು ಮರಳು ಸಮಸ್ಯೆಯನ್ನು ಬಗೆಹರಿಸ ಬೇಕೆಂದು ದಲಿತ ಮುಖಂಡ ರಾಜಾ ಪಲ್ಲಮಜಲು ಆಗ್ರಹಿಸಿದರು.

ತಮ್ಮ ಸ್ವಂತ ಮನೆ ನಿರ್ಮಾಣಕ್ಕೆ ಮರಳು ಕೊಂಡೊಯ್ದರೂ ಅದಕ್ಕೆ ದಂಡ ವಿಧಿಸಲಾಗುತ್ತಿದೆ. ಬಡವರು ಮನೆ ಮತ್ತಿತರ ಕಟ್ಟಡ ಕಟ್ಟಲು ಮರಳು ಕೊಂಡೊಯ್ಯುತ್ತಾರೆಯೇ ವಿನಃ ಅಕ್ರಮವಾಗಿ ಸಾಗಟ ಮಾಡುವುದಲ್ಲ ಎಂದು ವಿಶ್ವನಾಥ ಚೆಂಡ್ತಿಮಾರ್ ತಿಳಿಸಿದರು. 

ಮರಳು ಸಮಸ್ಯೆಯ ಬಗ್ಗೆ ಈಗಾಗಲೇ ಅನೇಕ ದೂರುಗಳು ಕೇಳಿ ಬಂದಿದೆ. ಇದು ಜಿಲ್ಲಾಮಟ್ಟದಲ್ಲಿ ಇತ್ಯರ್ಥವಾಗಬೇಕಾದ ವಿಚಾರವಾಗಿದೆ ಎಂದು ತಹಶೀಲ್ದಾರ್ ಪುರಂದರ ಹೆಗ್ಡೆ ಸ್ಪಷ್ಟ ಪಡಿಸಿದರು.

ಅನಾಥಶ್ರಮವೊಂದರಲ್ಲಿ ಮಹಿಳೆಯರಿಗೆ ತೊಂದರೆ ನೀಡಲಾಗುತ್ತಿದೆ ಎಂದು ದಲಿತ ಮಹಿಳೆಯೊಬ್ಬರು ಸಭೆಯ ಗಮನಕ್ಕೆ ತಂದರು. ಆದರೆ, ಇದು ಎಲ್ಲಿನ ಅನಾಥಶ್ರಮ ಮತ್ತು ಯಾರು ತೊಂದರೆ ನೀಡುತ್ತಿರುವುದು ಎನ್ನುವ ಬಗ್ಗೆ ಪೂರ್ಣ ಮಾಹಿತಿ ನೀಡಲು ನಿರಾಕರಿಸಿದ ಮಹಿಳೆ ಈ ಬಗ್ಗೆ ಪೊಲೀಸರಿಗೂ ತಿಳಿದಿದೆ ಎಂದರು.

ಡಿಸಿ ಮನ್ನ ಜಮೀನು ಹಂಚಿಕೆಯ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು. ಖಾಸಗಿ ಸಂಘ ಸಂಸ್ಥೆಗಳು ಸರಕಾರಿ ಜಮೀನಿನಲ್ಲಿ ದೊಡ್ಡ ಕಟ್ಟಡಗಳನ್ನು ನಿರ್ಮಿಸುತ್ತಿದ್ದರೂ ಕೂಡ ಅಧಿಕಾರಿಗಳು ಮಾತನಾಡುವುದಿಲ್ಲ, ಆದರೆ ದಲಿತರಿಗೆ ಹಂಚಿಕೆ ಮಾಡಲು ಜಮೀನು ಲಭ್ಯವಿಲ್ಲ ಎನ್ನುತ್ತೀರಿ ಎಂದು ರಾಜಾ ಪಲ್ಲಮಜಲು ಆಕ್ರೋಶ ವ್ಯಕ್ತಪಡಿಸಿದರು.

ತಾಪಂ ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಗಾಯತ್ರಿ ವೇದಿಕೆಯಲ್ಲಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X