Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಕ್ಷಣಾ ಖರೀದಿ ಭರದಿಂದ ನಡೆಯುತ್ತಿದೆ:...

ರಕ್ಷಣಾ ಖರೀದಿ ಭರದಿಂದ ನಡೆಯುತ್ತಿದೆ: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್

ವಾರ್ತಾಭಾರತಿವಾರ್ತಾಭಾರತಿ15 Nov 2018 11:09 PM IST
share
ರಕ್ಷಣಾ ಖರೀದಿ ಭರದಿಂದ ನಡೆಯುತ್ತಿದೆ: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್

ಹೊಸದಿಲ್ಲಿ,ನ.15: ಫ್ರಾನ್ಸ್‌ನಿಂದ ರಫೇಲ್ ಯುದ್ಧವಿಮಾನಗಳ ಖರೀದಿ ಕುರಿತಂತೆ ಸೃಷ್ಟಿಯಾಗಿರುವ ವಿವಾದಗಳ ನಡುವೆಯೇ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು,ರಕ್ಷಣಾ ಖರೀದಿ ಪ್ರಕ್ರಿಯೆಯನ್ನು ಸರಳಗೊಳಿಸಲಾಗಿದೆ ಮತ್ತು ಅದು ಭರದಿಂದ ಸಾಗುತ್ತಿದೆ,ಆದರೆ ಅಗತ್ಯವಾಗಿರುವ ಶ್ರದ್ಧೆಯನ್ನು ಕಾಯ್ದುಕೊಳ್ಳಲಾಗಿದೆ ಎಂದು ಗುರುವಾರ ಇಲ್ಲಿ ಹೇಳಿದರು.

 ಇಂಡಿಯನ್ ಡಿಫೆನ್ಸ್ ಕಾಂಕ್ಲೇವ್‌ನಲ್ಲಿ ದೇಶಿಯ ರಕ್ಷಣಾ ಉಪಕರಣಗಳ ತಯಾರಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು,ಸಶಸ್ತ್ರ ಪಡೆಗಳು ನಿಮ್ಮಿಂದ ಉತ್ಪನ್ನಗಳನ್ನು ಖರೀದಿಸುವುದನ್ನು ತಾನು ಕಡ್ಡಾಯಗೊಳಿಸುವಂತಿಲ್ಲ. ಹೀಗಾಗಿ ನೀವು ನಿಮ್ಮ ಉತ್ಪನ್ನಗಳ ಗುಣಮಟ್ಟ, ಉದ್ದೇಶ,ಉಪಯುಕ್ತತೆ ಮತ್ತು ಪ್ರಸಕ್ತತೆಯನ್ನು ಸಶಸ್ತ್ರ ಪಡೆಗಳಿಗೆ ಮನದಟ್ಟು ಮಾಡುವುದು ಅಗತ್ಯವಾಗಿದೆ. ಕಾರ್ಯಾಚರಣೆಗಳಿಗೆ ಸಶಸ್ತ್ರ ಪಡೆಗಳ ಸನ್ನದ್ಧತೆಗೆ ಯಾವುದೇ ತಡೆಯುಂಟಾಗದಂತೆ ನೊಡಿಕೊಳ್ಳುವ ನಿಟ್ಟಿನಲ್ಲಿ ತಾನು ಶ್ರಮಿಸಬೇಕಿದೆ ಎಂದು ಹೇಳಿದರು.

ತನ್ನ ಪೂರ್ವಾಧಿಕಾರಿಗಳಾಗಿದ್ದ ಮನೋಹರ ಪಾರಿಕ್ಕರ್ ಮತ್ತು ಅರುಣ್ ಜೇಟ್ಲಿ ಅವರನ್ನು ಪ್ರಶಂಸಿಸಿದ ಸೀತಾರಾಮನ್, ಅವರು ರಕ್ಷಣಾ ಖರೀದಿಯನ್ನು ಸರಳಗೊಳಿಸುವ ಜೊತೆಗೆ ಅದರಲ್ಲಿ ಪಾರದರ್ಶಕತೆಯನ್ನೂ ಖಚಿತಪಡಿಸಿದ್ದಾರೆ ಎಂದರು.

ದೇಶಿಯ ಮಾರುಕಟ್ಟೆಯನ್ನು ಮಾತ್ರ ಕೇಂದ್ರೀಕರಿಸದೆ ರಫ್ತು ಮಾರುಕಟ್ಟೆಯತ್ತಲೂ ಗಮನ ಹರಿಸುವಂತೆ ರಕ್ಷಣಾ ತಯಾರಕರನ್ನು ಆಗ್ರಹಿಸಿದ ಅವರು,ತಮ್ಮ ಉತ್ಪನ್ನಗಳನ್ನು ರಫ್ತು ಮಾಡಲು ಉದ್ಯಮಕ್ಕೆ ಸಾಧ್ಯವಿರುವ ಎಲ್ಲ ನೆರವುಗಳು ದೊರೆಯುವಂತೆ ಸರಕಾರವು ನೋಡಿಕೊಳ್ಳಲಿದೆ ಎಂದು ಭರವಸೆಯನ್ನು ನೀಡಿದರು.

ದೇಶಿಯ ರಕ್ಷಣಾ ಉಪಕರಣಗಳ ತಯಾರಕರನ್ನು ಉತ್ತೇಜಿಸಲು ಈ ಹಿಂದೆ ಆರ್ಡನನ್ಸ್ ಫ್ಯಾಕ್ಟರಿಗಳು ಮತ್ತು ಸಾರ್ವಜನಿಕ ಕ್ಷೇತ್ರದ ರಕ್ಷಣಾ ಉದ್ಯಮಗಳಿಗೆ ಮೀಸಲಾಗಿದ್ದ ಹಲವಾರು ಉಪಕರಣಗಳನ್ನು ಆ ಪಟ್ಟಿಯಿಂದ ತೆಗೆಯಲಾಗಿದೆ ಎಂದು ತಿಳಿಸಿದ ಅವರು,ಸರಕಾರದ ‘ಮೇಕ್ ಇನ್ ಇಂಡಿಯಾ ’ ಕೇವಲ ಕಾಗದದ ಮೇಲಿನ ಯೋಜನೆಯಲ್ಲ ಮತ್ತು ಅಗತ್ಯ ಆದೇಶಗಳನ್ನು ಹೊರಡಿಸಲಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X