Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೀರೂರು: ಆರೋಪ-ಪ್ರತ್ಯಾರೋಪಕ್ಕೆ...

ಬೀರೂರು: ಆರೋಪ-ಪ್ರತ್ಯಾರೋಪಕ್ಕೆ ಸಾಕ್ಷಿಯಾದ ಪುರಸಭೆ ವಿಶೇಷ ಸಾಮಾನ್ಯ ಸಭೆ

ವಾರ್ತಾಭಾರತಿವಾರ್ತಾಭಾರತಿ15 Nov 2018 11:30 PM IST
share
ಬೀರೂರು: ಆರೋಪ-ಪ್ರತ್ಯಾರೋಪಕ್ಕೆ ಸಾಕ್ಷಿಯಾದ ಪುರಸಭೆ ವಿಶೇಷ ಸಾಮಾನ್ಯ ಸಭೆ

ಬೀರೂರು, ನ.15: ಪಟ್ಟಣ ವ್ಯಾಪ್ತಿಯ ಬಡಾವಣೆಯಲ್ಲಿ ವಿವಿಧ ಅನುದಾನದಡಿ ಇ-ಪ್ರೊಕ್ಯೂರ್‍ಮೆಂಟ್ ಹಾಗೂ ಮ್ಯಾನುಯಲ್ ಟೆಂಡರ್ ಮುಖಾಂತರ ಕರೆದಿರುವ ಕಾಮಗಾರಿಗಳಿಗೆ ಟೆಂಡರ್ ಮಂಜೂರಾತಿ ಹಾಗೂ ಆಡಳಿತಾತ್ಮಕ ಮಂಜೂರಾತಿಗಾಗಿ ಪುರಸಭೆ ಅಧ್ಯಕ್ಷೆ ಸವಿತಾ ರಮೇಶ್ ಅಧ್ಯಕ್ಷತೆಯಲ್ಲಿ ಗುರುವಾರ ವಿಶೇಷ ಸಭೆ ನಡೆಯಿತು.

ಬಡಾವಣೆಗಳಲ್ಲಿ ಪೈಪ್‍ಲೈನ್ ಅಳವಡಿಸುವುದು, ರುದ್ರಭೂಮಿಗಳಲ್ಲಿ ರಸ್ತೆ ಅಭಿವೃದ್ದಿ, ಶೌಚಾಲಯ ನಿರ್ಮಾಣ, ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಕಾಂಪೌಂಡ ನಿರ್ಮಾಣ, ಕಚೇರಿಗೆ ಸಿಸಿ ಟಿವಿ ಅಳವಡಿಕೆ, ಸಮುದಾಯ ಭವನಗಳ ದುರಸ್ಥಿ ಸೇರಿದಂತೆ ಹಲವಾರು ಕಾಮಗಾರಿಗಳಿಗೆ ಸುಮಾರು 2.22 ಕೋಟಿ ಅನುದಾನವನ್ನು ಉಪಯೋಗಿಸಿಕೊಳ್ಳಲು ನಿರ್ಣಯ ಕೈಗೊಳ್ಳಲಾಯಿತು.

ಭೆಯ ಆರಂಭಕ್ಕೂ ಮುನ್ನ ಪುರಸಭೆ ಸದಸ್ಯ ಲೋಕೇಶಪ್ಪ ಮಾತನಾಡಿ, ಅಕ್ರಮವಾಗಿ ಅತಿಕ್ರಮಿಸಿರುವ ಪುರಸಭೆ ನಿವೇಶನಗಳ ಬಗ್ಗೆ ಹಲವಾರು ಬಾರಿ ಸದಸ್ಯರು ಮಾಹಿತಿ ನೀಡಿದ್ದರೂ ಹಾಗೂ ಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾದರೂ ಪುರಸಭೆ ಕಣ್ಮುಚ್ಚಿ ಕುಳಿತಿದೆ ಎಂದು ನಾಗರೀಕರು ದೂರುತ್ತಿದ್ದಾರೆ. ಸಂಗೀತ ಶಾಲೆಗೆ ಗುರುತಿಸಲಾಗಿದ್ದ ನಿವೇಶನವನ್ನು ತೆರವುಗೊಳಿಸಿ ಎಂದು ಜಿಲ್ಲಾಧಿಕಾರಿಯವರೆ ಆದೇಶಿಸಿದ್ದರೂ ಅಧಿಕಾರಿ ವರ್ಗ ನಿಷ್ಕ್ರಿಯವಾಗಿದೆ, ಅಧ್ಯಕ್ಷರೂ ಸೇರಿದಂತೆ ಸಿಬ್ಬಂದಿ ಈ ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು. 

ಇದಕ್ಕೆ ಉತ್ತರಿಸಿದ ಪುರಸಭೆ ಅಧ್ಯಕ್ಷೆ ಸವಿತಾ ರಮೇಶ್, ನಾನು ಅಕ್ರಮಗಳ ವಿಷಯವಾಗಿ ಕಾನೂನು ಬದ್ಧ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ದಾಖಲೆಯಿಲ್ಲದ ಮಾತಿನಿಂದ ಯಾವುದೂ ಸಾಭೀತಾಗುವುದಿಲ್ಲ, ದಾಖಲೆಗಳಿದ್ದರೆ ನೀಡಿ ತನಿಖೆಯಿಂದಲೇ ಸತ್ಯ ಹೊರ ಬರಲಿ ಎಂದು ಹೇಳಿದರು. ನಿಮ್ಮ ವಾರ್ಡ್‍ನಲ್ಲಿ ಮೆಸ್ಕಾಂ ಅಳವಡಿಸಿದ ವಿದ್ಯುತ್ ಕಂಬಕ್ಕೆ ಗುತ್ತಿಗೆದಾರನ ಮೂಲಕ ನೀವು ಮಾಡಿಸಿದ ಕೆಲಸ ಎಂದು ಬಿಲ್ ಪಾವತಿಸಲು ಹೇಳಿದ್ದಿರಿ. ಕೆಲಸವನ್ನೇ ಮಾಡದೆ ಗುತ್ತಿಗೆದಾರನಿಗೆ ಬಿಲ್ ಪಾವತಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಅವರು ಗುತ್ತಿಗೆದಾರ ಕೆಲಸ ಮಾಡಿದ್ದರೆ ಸಭೆಗೆ ಕರೆಸಿ ಅವನಿಂದ ಹೇಳಿಕೆ ಕೊಡಿಸಿ ಬಿಲ್ ಪಡೆಯಬೇಕಿತ್ತು. ನಿಮ್ಮ ಕೋರಿಕೆ ಮಾನ್ಯ ಮಾಡದಿರುವುದಕ್ಕೆ ಆರೋಪಿಸುತ್ತಿದ್ದೀರಿ ಎಂದು ಹರಿಹಾಯ್ದರು.

ಮುಖ್ಯಾಧಿಕಾರಿ ಮಂಜಪ್ಪ ಮಾತನಾಡಿ, ನೀವು ಲಿಖಿತವಾಗಿ ನೀಡಿರುವ ದೂರುಗಳಿಗೆ ಲಿಖಿತವಾಗಿ ಉತ್ತರ ನೀಡಲಾಗುವುದು. ನಿವೇಶನ ಅತಿಕ್ರಮಣ ಕುರಿತು ಸದರಿಯವರಿಗೆ ನೋಟಿಸ್ ಜಾರಿ ಮಾಡಿದ್ದು, ಇಂದು ಎರಡನೇ ನೋಟಿಸ್ ಜಾರಿಗೊಳಿಸಲಾಗುವುದು. ಅವರು ಕಟ್ಟಡ ನಿರ್ಮಿಸಿದರೂ ತೆರವು ಮಾಡುವುದು ಖಚಿತ ಎಂದರು. 

ಬೀದಿ ದೀಪಗಳ ಅಳವಡಿಕೆ ಮತ್ತು ಅವುಗಳ ನಿರ್ವಹಣೆ ವಿಷಯವಾಗಿ ಮೂಡಿ ಬಂದ ಚರ್ಚೆಯಲ್ಲಿ ಸರ್ಕಾರದ ನಿರ್ದೇಶನದಂತೆ ಜಿಲ್ಲಾಧ್ಯಂತ ಸರ್ವೆ ನಡೆದು ಪ್ರತಿ ಕಂಬಗಳಿಗೂ ಎಲ್‍ಇಡಿ ಬಲ್ಬ್ ಅಳವಡಿಸುವುದು ಮತ್ತು 10 ವರ್ಷಗಳ ಅವಧಿಗೆ ನಿರ್ವಹಣೆ ಮಾಡುವುದು ಗುತ್ತಿಗೆದಾರನ ಜವಾಬ್ದಾರಿಯಾಗಲಿದ್ದು, ಈ ಕುರಿತಂತೆ ಕಾರ್ಯ ಆದೇಶ ಆಗುವವರೆಗೂ ಸಧ್ಯ ನಿರ್ವಹಣೆ ಮಾಡುತ್ತಿರುವ ಗುತ್ತಿಗೆದಾರರೇ ಕೆಲಸ ನಿರ್ವಹಿಸಲಿ ಎಂದು ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಮಾಹಿತಿ ನೀಡಿದರು. 

ಐಡಿಎಸ್‍ಎಂಟಿ ಯೋಜನೆಯಲ್ಲಿ ಮತ್ತು ವಾಣಿಜ್ಯ ಮಳಿಗೆಗಳಿಂದ ವಸೂಲಾಗಿರುವ ಮೊತ್ತದಲ್ಲಿ ಪುರಸಭೆ ಆವರಣದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಿಸಲು ಜಿಲ್ಲಾಧಿಕಾರಿಯವರಿಗೆ ಪ್ರಸ್ತಾವನೆ ಸಲ್ಲಿಸಲು ಸದಸ್ಯರು ಅಧಿಕಾರಿ ಮತ್ತು ಸಿಬ್ದಂದಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಸದಸ್ಯರಾದ ಗೀತಾ ಹೇಮಂತ್, ಬಸವರಾಜು, ರುದ್ರಪ್ಪ, ನಾಗರಾಜು, ಸುದರ್ಶನ್, ವಸಂತಾ ರಮೇಶ್, ಮಾರ್ಗದ ಮಧು, ರವಿಕುಮಾರ್ ಹಾಗೂ ಪುರಸಭೆ ಸಿಬ್ಬಂದಿಗಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X