Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ಹಜ್ ಭವನ ಶೀಘ್ರ ನಿರ್ಮಾಣ: ಸಚಿವ...

ಮಂಗಳೂರು ಹಜ್ ಭವನ ಶೀಘ್ರ ನಿರ್ಮಾಣ: ಸಚಿವ ಝಮೀರ್ ಅಹ್ಮದ್

ವಾರ್ತಾಭಾರತಿವಾರ್ತಾಭಾರತಿ16 Nov 2018 9:22 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮಂಗಳೂರು ಹಜ್ ಭವನ ಶೀಘ್ರ ನಿರ್ಮಾಣ: ಸಚಿವ ಝಮೀರ್ ಅಹ್ಮದ್

ಮಂಗಳೂರು, ನ.16: ನಗರದ ಹೊರವಲಯ ಅಡ್ಯಾರ್‌ನಲ್ಲಿ ಜಾಗವನ್ನು ಗುರುತಿಸಿ ಶೀಘ್ರದಲ್ಲಿಯೇ ಹಜ್ ಭವನವನ್ನು ನಿರ್ಮಾಣ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ, ಅಲ್ಪಸಂಖ್ಯಾತರ ಮತ್ತು ವಕ್ಫ್ ಇಲಾಖೆ ಸಚಿವ ಝಮೀರ್ ಅಹ್ಮದ್ ಖಾನ್ ತಿಳಿಸಿದರು.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಶುಕ್ರವಾರ ನಡೆದ ಆಹಾರ ಇಲಾಖೆ, ಕಾನೂನು ಮಾಪನಶಾಸ್ತ್ರ, ಅಲ್ಪಸಂಖ್ಯಾತರ ಮತ್ತು ವಕ್ಫ್ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಅಡ್ಯಾರ್‌ನಲ್ಲಿನ ಜಾಗವನ್ನು ಮೊದಲು ಸರ್ವೇ ಮಾಡಿಸಲಾಗುವುದು. ಬಳಿಕ ಸರಕಾರವು ಆ ಜಾಗವನ್ನು ಸ್ವಾಧೀನಕ್ಕೆ ಪಡೆದುಕೊಂಡು ಹಜ್ ಭವನವನ್ನು ನಿರ್ಮಿಸಲಾಗುವುದು ಎಂದರು.

ಜಿಲ್ಲೆಯ 16 ಕಡೆ ನ್ಯಾಯಬೆಲೆ ಅಂಗಡಿಗಳಲ್ಲಿ ನೆಟ್‌ವರ್ಕ್ ಸಮಸ್ಯೆಯಿಂದ ಪಿಒಎಸ್ (ಪಾಯಿಂಟ್ ಆಫ್ ಸೇಲ್) ಅಳವಡಿಸದೇ ಕೂಪನ್ ಮೂಲಕ ಪಡಿತರ ವಿತರಿಸಲಾಗುತ್ತಿದೆ. ಈ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ಸಮಸ್ಯೆ ಬಗೆಹರಿಸುವುದಾಗಿ ಸಚಿವರು ತಿಳಿಸಿದರು.

ನ್ಯಾಯಬೆಲೆ ಅಂಗಡಿಗಳ ಮಾಲಕರೇ 20-25 ಸಾವಿರ ರೂ. ವೆಚ್ಚದಲ್ಲಿ ಕಂಪ್ಯೂಟರ್, ಪ್ರಿಂಟರ್, ಲ್ಯಾಪ್‌ಟಾಪ್, ಪಿಒಎಸ್ ಮತ್ತಿತರ ಸಲಕರಣೆ ಅಳವಡಿಸಿಕೊಂಡು ಪಡಿತರ ವಿತರಿಸುತ್ತಿದ್ದಾರೆ. ಕೆಲವೊಮ್ಮೆ ನ್ಯಾಯಬೆಲೆ ಅಂಗಡಿಯವರೇ ನೆಟ್‌ವರ್ಕ್ ಬರುತ್ತಿಲ್ಲ, ಕಾರ್ಡ್ ಕೊಡಲಾಗುವುದಿಲ್ಲ ಎಂದು ನೆಪ ಹೇಳಿ ಜನರಿಗೆ ತೊಂದರೆ ಕೊಡುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಪದ್ಧತಿಯನ್ನು ಕೈಬಿಟ್ಟು ಸರಕಾರದಿಂದಲೇ ಖಾಸಗಿ ಕಂಪೆನಿಗಳ ಜೊತೆ ಒಪ್ಪಂದ ಮಾಡಿಕೊಂಡು ನೆಟ್‌ವರ್ಕ್ ಸಮಸ್ಯೆ ಬಗೆಹರಿಸಲಾಗುವುದು ಎಂದು ಆಶ್ವಾಸನೆ ನೀಡಿದರು.

‘ಇಲಾಖೆಯಿಂದ 1,586 ಫಲಾನುಭವಿಗಳಿಗೆ ಅಡುಗೆ ಅನಿಲ ಸಂಪರ್ಕ ಕಲ್ಪಿಸುವ ಗುರಿ ಹೊಂದಲಾಗಿದ್ದು, ಮೊದಲ ಹಂತದಲ್ಲಿ 1,349 ಫಲಾನುಭವಿಗಳಿಗೆ ಗ್ಯಾಸ್ ಸಂಪರ್ಕ ಕಲ್ಪಿಸಲು ಏಜೆನ್ಸಿಗೆ ಅನುದಾನವೂ ಜಮೆ ಮಾಡಲಾಗಿದೆ. 824 ಸ್ಟವ್‌ಗಳನ್ನು ಫಲಾನುಭವಿಗಳಿಗೆ ವಿತರಿಸಲಾಗಿದೆ. 581 ಫಲಾನುಭವಿಗಳಿಗೆ ಗ್ಯಾಸ್ ಸಂಪರ್ಕ ಕಲ್ಪಿಸಲಾಗಿದೆ’ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಅನಿಲ ಭಾಗ್ಯ ಯೋಜನೆಯಡಿ ನವೆಂಬರ್ ಅಂತ್ಯದೊಳಗೆ ಸಂಪೂರ್ಣ ಗುರಿಯನ್ನು ತಲುಪಿ ಎಲ್ಲ ಫಲಾನುಭವಿಗಳಿಗೆ ಗ್ಯಾಸ್ ಸಂಪರ್ಕ ಕಲ್ಪಿಸಬೇಕು. ಬಾಕಿ ಇರುವ 768 ಗ್ಯಾಸ್ ಸಂಪರ್ಕವನ್ನು ಶೀಘ್ರದಲ್ಲೇ ಫಲಾನುಭವಿಗಳಿಗೆ ನೀಡಬೇಕು ಎಂದು ಸೂಚಿಸಿದರು.

ಹೊಸ ಪಡಿತರ ಚೀಟಿಯಲ್ಲಿ ಹೆಸರನ್ನು ಸೇರ್ಪಡೆಗೊಳಿಸುವುದು, ತಿದ್ದುಪಡಿ ಕೋರಿ ಸಲ್ಲಿಸಿರುವ ಅರ್ಜಿದಾರರಿಗೆ ಪಡಿತರ ಚೀಟಿಗಳು ಮುದ್ರಣವಾಗಿ ತಲುಪುತ್ತಿಲ್ಲ. ಇದು ಸಕಾಲದಲ್ಲಿ ಬರುತ್ತಿಲ್ಲ ಎನ್ನುವುದನ್ನು ಅಧಿಕಾರಿಗಳು ಸಚಿವರ ಗಮನ ಸೆಳೆದರು. ಸರಕಾರದ ಮಟ್ಟದಲ್ಲಿ ಚರ್ಚೆ ನಡೆಸಿ, ಕ್ರಮ ಕೈಗೊಳ್ಳಲಾಗುವುದು. ಹೊಸ ಪಡಿತರಕ್ಕೆ ಸಂಬಂಧಿಸಿದಂತೆ 7,009 ಅರ್ಜಿಗಳು ಬಾಕಿ ಉಳಿದಿದ್ದು, ತ್ವರಿತವಾಗಿ ಅರ್ಜಿಗಳನ್ನು ಪರಿಹರಿಸಿ ಅರ್ಹರಿಗೆ ಪಡಿತರ ಕಾರ್ಡ್‌ಗಳನ್ನು ವಿತರಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ತೊಗರಿ ಬೇಳೆ ಬೇಡಿಕೆ ಕಡಿಮೆಯಿದ್ದು, ಬದಲಾಗಿ ಹೆಸರು ಬೇಳೆಗೆ ಬೇಡಿಕೆ ಇದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು. ಸ್ಥಳೀಯ ಬೇಡಿಕೆಯಂತೆಯೇ ಧಾನ್ಯ ನೀಡಲಾಗುವುದು. ಈ ಬಗ್ಗೆ ಸರಕಾರದ ಮಟ್ಟದಲ್ಲಿ ಸಭೆ ನಡೆಸಿ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ಗ್ರಾಹಕರಿಗೆ ಪಡಿತರ ವಿತರಣೆಯಲ್ಲಿ ಅಳತೆ ಮತ್ತು ತೂಕದಲ್ಲಿ ಲೋಪದೋಷ ಉಂಟಾಗುತ್ತಿದೆ ಎನ್ನುವ ದೂರುಗಳು ಬಂದಿದ್ದು, ಈ ಬಗ್ಗೆ ಅಧಿಕಾರಿಗಳನ್ನು ಪರಿಶೀಲನೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಚಿವರು ತಿಳಿಸಿದರು.

ಸಿಬ್ಬಂದಿ ಕೊರತೆ: ಜಿಲ್ಲೆಯ ಆಹಾರ ಇಲಾಖೆಯಲ್ಲಿ 9 ಸಿಬ್ಬಂದಿಯ ಕೊರತೆಯಿದೆ. ಯೋಜನೆಗಳನ್ನು ಜಾರಿಗೆ ತರುವಲ್ಲಿ ವಿಳಂಬವಾಗುತ್ತಿದೆ ಎಂದು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು. ಸಿಬ್ಬಂದಿ ಕೊರತೆ ಸಮಸ್ಯೆ ನಿವಾರಿಸಲು ಇಲಾಖೆಯ ಆಯುಕ್ತರನ್ನು ಸಂಪರ್ಕಿಸಿ ಸಮಾಲೋಚನೆ ನಡೆಸುವುದಾಗಿ ಸಚಿವರು ಭರವಸೆ ನೀಡಿದರು.

ಸಭೆಯಲ್ಲಿ ಆಹಾರ ಮತ್ತು ನಾಗರಿಕ ಇಲಾಖೆಯ ಜಿಲ್ಲಾ ಅಧಿಕಾರಿ ಶ್ರೀನಿವಾಸಯ್ಯ, ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಉಸ್ಮಾನ್, ವಕ್ಫ್ ಜಿಲ್ಲಾ ಅಧಿಕಾರಿ ಅಬೂಬಕರ್, ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ವ್ಯವಸ್ಥಾಪಕ ಶ್ರೀಧರ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು. .

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X