Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾನೂನು ರಚನೆಯಲ್ಲಿ ನ್ಯಾಯಾಲಯದ ಪ್ರವೇಶ...

ಕಾನೂನು ರಚನೆಯಲ್ಲಿ ನ್ಯಾಯಾಲಯದ ಪ್ರವೇಶ ಚರ್ಚಾಸ್ಪದ: ತುಷಾರ್ ಮೆಹ್ತಾ

ವಾರ್ತಾಭಾರತಿವಾರ್ತಾಭಾರತಿ17 Nov 2018 8:03 PM IST
share
ಕಾನೂನು ರಚನೆಯಲ್ಲಿ ನ್ಯಾಯಾಲಯದ ಪ್ರವೇಶ ಚರ್ಚಾಸ್ಪದ: ತುಷಾರ್ ಮೆಹ್ತಾ

ಮಂಗಳೂರು, ನ. 17: ಕಾನೂನು ರೂಪಿಸುವ ಅಧಿಕಾರ ಸಂವಿಧಾನದತ್ತವಾಗಿ ಶಾಸಕಾಂಗಕ್ಕೆ ಇದೆ. ಆದರೆ ದೇಶದಲ್ಲಿ ಕಾನೂನು ರೂಪಿಸಲು ನ್ಯಾಯಾಲಯ ಹೊರಟಿರುವುದು ಚರ್ಚಾಸ್ಪದ ಸಂಗತಿಯಾಗಿದೆ ಎಂದು ಭಾರತ ಸರಕಾರದ ಸಾಲಿಸಿಟ್ ರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದ್ದಾರೆ.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು, ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಇದರ ವತಿಯಿಂದ ಹಮ್ಮಿಕೊಂಡ ಬೆಳ್ಳಿ ಹಬ್ಬದ ದತ್ತಿ ನಿಧಿ ಉಪನ್ಯಾಸ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಿದ್ದರು.

ದೇಶದ ಸಂವಿಧಾನದ ಪ್ರಕಾರ ಕಾನೂನು ರೂಪಿಸುವ ಅಧಿಕಾರ ಇಲ್ಲಿನ ಸಮಾಜ ಅಂದರೆ ಅವರನ್ನು ಪ್ರತಿನಿಧಿಸುವ ಜನಪ್ರತಿನಿಧಿಗಳಿರುವ ಶಾಸಕಾಂಗಕ್ಕೆ ನೀಡಲಾಗಿದೆ. ಆದರೆ ಇತ್ತೀಚೆಗೆ ನ್ಯಾಯಾಲಯವೆ ಕಾನೂನು ರೂಪಿಸಲು ನಿರ್ದೇಶನ ನೀಡುತ್ತಿರುವುದು ಸಂವಿಧಾನದ ಪಾವಿತ್ರತೆಯ ಪ್ರಶ್ನೆಯಾಗಿದೆ. ಇತ್ತೀಚಿಗೆ ಸಂವಿಧಾನದ 377 ವಿಧಿಯ ವಿಚಾರದಲ್ಲಿನ ತೀರ್ಪು , ಕೆಲಸದ ಸ್ಥಳಗಳಲ್ಲಿ ಲೈಂಗಿಕ ಕಿರುಕುಳದ ಬಗ್ಗೆ ನ್ಯಾಯಾಲಯದ ನಿರ್ದೇಶನ ವಿಚಾರಗಳನ್ನು ಸಂವಿಧಾನದ ಪರಿಮಿತಿಯಲ್ಲಿ ಯೋಚಿಸಬೇಕಾಗಿದೆ. ಸಮಾಜದ ನೈತಿಕತೆಯನ್ನು ನ್ಯಾಯಾಲಯ ನಿರ್ಧರಿಸುವುದು ಎಷ್ಟು ಸರಿ ಎನ್ನುವುದು ನಮ್ಮ ಮುಂದಿರುವ ಪ್ರಶ್ನೆಯಾಗಿದೆ. ಸಂವಿಧಾನದ ಪ್ರಮುಖ ಅಂಗಗಳಾದ ಕಾರ್ಯಾಂಗ, ಶಾಸಕಾಂಗಗಳು ಎಡವಿದಾಗ ಅವುಗಳನ್ನು ಎಚ್ಚರಿಸುವ ಕೆಲಸ ಮಾಡಬೇಕಾದ ನ್ಯಾಯಾಂಗ ನೇರವಾಗಿ ಅವುಗಳ ಕೆಲಸವನ್ನು ಮಾಡಲು ಮುಂದಾಗುವುದು ಸಂವಿಧಾನದ ನೈತಿಕತೆಗೆ ಸವಾಲಾಗಿದೆ ಎಂದು ತುಷಾರ್ ಮೆಹ್ತಾ ತಿಳಿಸಿದರು.

ಸಮಾಜದಲ್ಲಿ ಶಾಂತಿ ಸ್ಥಾಪನೆ ನ್ಯಾಯದಾನದ ಗುರಿ:- ಸಮಾಜದಲ್ಲಿ ಶಾಂತಿ ಸ್ಥಾಪನೆ ನ್ಯಾಯದಾನದ ಗುರಿಯಾಗಿದೆ.ಪ್ರಾಚೀನ ಕಾಲದಿಂದಲೂ ಸಮಾಜದಲ್ಲಿ ನ್ಯಾಯದಾನದ ವ್ಯವಸ್ಥೆ ಇತ್ತು. ಅವುಗಳ ಅಂತಿಮ ಗುರಿ ಕುಟುಂಬ,ಸಮಾಜದಲ್ಲಿ ಶಾಂತಿ ಸ್ಥಾಪಿಸುವುದಾಗಿತ್ತು ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.

ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಇಬ್ಬರ ನಡುವಿನ ವಿವಾದಗಳನ್ನು ಪರಸ್ಪರ ಮಾತುಕತೆಯೊಂದಿಗೆ ಬಗೆ ಹರಿಸುವ ಕೆಲಸ ನ್ಯಾಯಾದಾನ ಕೇಂದ್ರಗಳಿಂದ ನಡೆದುಕೊಂಡು ಬರುತ್ತಿದೆ.ಹಿಂದಿನ ಗ್ರಾಮ ಪಂಚಾಯತ್‌ಗಳು ಈ ರೀತಿಯ ಕೆಲಸಗಳನ್ನು ನಿರ್ವಹಿಸಿಕೊಂಡು ಸಮಾಜದಲ್ಲಿ ಶಾಂತಿ ನೆಲಸಲು ಕಾರಣವಾಗಿತ್ತು.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಈ ರೀತಯ ನ್ಯಾಯದಾನದ ವ್ಯವಸ್ಥೆ ನೂರಾರು ವರುಷಗಳಿಂದ ನಡೆದುಕೋಂಡು ಬರುತ್ತಿದೆ ಎಂದು ಡಾ.ಡಿ.ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ. ಸಮಾರಂಭದಲ್ಲಿ ಭಾರತ ಸರಕಾರದ ಹೆಚ್ಚುವರಿ ಸಾಲಿಸೀಟರ್ ಜನರಲ್ ಕೆ.ಎಂ.ನಟರಾಜ್, ಎಸ್‌ಡಿಎಂ ಕಾನೂನು ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎಂ.ಆರ್.ಬಲ್ಲಾಳ್,ಉಪಾಧ್ಯಕ್ಷ ಉದಯ ಪ್ರಕಾಶ್ ಮುಳಿಯ ಉಪಸ್ಥಿತರಿದ್ದರು. ಎಸ್‌ಡಿಎಂ ಕಾನೂನು ಕಾಲೇಜಿನ ಪ್ರಾಂಶುಪಾಲ ಡಾ.ತಾರಾನಾಥ ಸ್ವಾಗತಿಸಿದರು. ಡಾ.ಬಾಲಿಕಾ ವಂದಿಸಿದರು.ಆದಿತ್ಯ ರಯಾನ್ ಡಿಮೆಲ್ಲೋ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X