Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಾರದಾ ಜಿ.ಬಂಗೇರ ದೇಸೀ ಸಂಸ್ಕೃತಿಯ ಜ್ಞಾನ...

ಶಾರದಾ ಜಿ.ಬಂಗೇರ ದೇಸೀ ಸಂಸ್ಕೃತಿಯ ಜ್ಞಾನ ಭಂಡಾರ: ಅಬ್ದುಲ್ ರಝಾಕ್ ಅನಂತಾಡಿ

ವಾರ್ತಾಭಾರತಿವಾರ್ತಾಭಾರತಿ18 Nov 2018 5:50 PM IST
share
ಶಾರದಾ ಜಿ.ಬಂಗೇರ ದೇಸೀ ಸಂಸ್ಕೃತಿಯ ಜ್ಞಾನ ಭಂಡಾರ: ಅಬ್ದುಲ್ ರಝಾಕ್ ಅನಂತಾಡಿ

ಬಂಟ್ವಾಳ, ನ. 18: ತೌಳವ ಸಂಸ್ಕೃತಿಯ ಸೊಗಡನ್ನು ಇಂದಿಗೂ ತನ್ನ ಮೈಮನಮನೆಗಳಲ್ಲಿ ಮೈಗೂಡಿಸಿಕೊಂಡಿರುವ ತುಳುನಾಡಿನ ಶ್ರೇಷ್ಠ ಜಾನಪದ ಕಲಾವಿದೆ ಶಾರದಾ ಜಿ.ಬಂಗೇರಾ ದೇಸಿ ಸಂಸ್ಕøತಿಯ ಜ್ಞಾನ ಭಂಡಾರವಾಗಿದ್ದಾರೆ. ಇಂತಹ ಕಲಾವಿದೆಯನ್ನು ಗುರುತಿಸಿ, ಗೌರವಿಸಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಕಾರ್ಯ ಶ್ಲಾಘನೀಯ ಎಂದು ಉಪನ್ಯಾಸಕ, ಲೇಖಕ ಅಬ್ದುಲ್ ರಝಾಕ್ ಅನಂತಾಡಿ ಹೇಳಿದ್ದಾರೆ.

ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯು ತುಳು ಕ್ಷೇತ್ರದ ಸಾಧಕರಿಗೆ ಕೊಡಮಾಡುವ "ಚಾವಡಿ ತಮ್ಮನ" ಪುರಸ್ಕಾರಕ್ಕೆ ಆಯ್ಕೆಯಾಗಿರುವ ಬಂಟ್ವಾಳ ತಾಲೂಕು ಮಣಿನಾಲ್ಕೂರು ಗ್ರಾಮದ ಉಜಿರಂಡಿಪಲ್ಕೆ ನಿವಾಸಿ, ಹಿರಿಯ ಜಾನಪದ ಕಲಾವಿದೆ ಶಾರದಾ ಜಿ.ಬಂಗೇರ ಅವರಿಗೆ ಮಂಗಳೂರು ಉರ್ವಸ್ಟೋರ್‍ನಲ್ಲಿರುವ ಅಕಾಡಮಿಯ ತುಳುಭವನದ "ಸಿರಿಚಾವಡಿ"ಯಲ್ಲಿ ಶನಿವಾರ ನಡೆದ "ಚಾವಡಿ ತಮ್ಮನ" ಕಾರ್ಯಕ್ರಮದಲ್ಲಿ ಶಾರದಾ ಜಿ.ಬಂಗೇರ ಅವರ ಬಗ್ಗೆ ಅಭಿನಂದನಾ ಭಾಷಣ ಮಾಡಿದರು. 

ಒಂದೇ ವೇದಿಕೆಯಲ್ಲಿ ಹತ್ತಾರು ಸಾಧಕರನ್ನು ಕುಳ್ಳಿರಿಸಿ ಆ ಸಾಧಕರ ಬಗ್ಗೆ ಒಂದೆರೆಡು ನಿಮಿಷದ ಮಾತುಗಳನ್ನಾಡಿ ಸನ್ನಾನಿಸುವ ಪರಂಪರೆಯ ಬದಲಾಗಿ ಒಂದೇ ಸಾಧಕರನ್ನು ವೇದಿಕೆಯಲ್ಲಿ ಕುಳ್ಳಿರಿಸಿ ಅವರ ಸಾಧನೆಯ ಬಗ್ಗೆ ಅವಲೋಖನ ನಡೆಸುವ ತುಳು ಸಾಹಿತ್ಯ ಅಕಾಡಮಿಯ ಈ ಕಾರ್ಯ ಸ್ತುತ್ಯಾರ್ಹ ವಾದುದು ಎಂದು ಹೇಳಿದರು.

ಬಾಲ್ಯದ ಬದುಕಿನಲ್ಲಿ ಹಿರಿಯರ ಆಚಾರ ವಿಚಾರಗಳು ಶಾರದಾ ಅವರ ಮೆಲೆ ಪ್ರಬಾವ ಬೀರಿದೆ. ಗದ್ದೆಯಲ್ಲಿನ ದುಡಿಮೆಯೇ ಅವರಿಗೆ ತುಳುವ ಸಂಸ್ಕøತಿಯನ್ನು ಕಲಿಸಿಕೊಟ್ಟಿದೆ. ಅವರ ಎಲ್ಲ ಕಬಿತೆ. ಉರಲ್, ಸಂದಿ, ಪಾರ್ದನಗಳಲ್ಲಿ ಸ್ತ್ರೀಯರ ನೋವು, ಸಂಕಟ, ಸಮಸ್ಯೆಗಳು ಮೇಳೈಯಿಸುತ್ತಿದ್ದು, ಇವೆಲ್ಲವೂ ಮುದ್ರಿತವಾಗಿ ಮುಂದಿನ ಜನಾಂಗಕ್ಕೆ ತಲುಪಬೇಕಾದ ಅಗತ್ಯವಿದೆ. ಕಳೆದ ನಲ್ವತ್ತು ವರ್ಷಗಳ ಹಿಂದೆ ಕಾಣುತ್ತಿದ್ದ ತುಳುನಾಡಿನ ಆಚಾರ ವಿಚಾರಗಳನ್ನು ಇಂದಿಗೂ ಶಾರದಾ ಅವರ ಮನೆಯಲ್ಲಿ ಕಾಣಲು ನನಗೆ ಈ ಮೂಲಕ ಅವಕಾಶವಾಗಿದೆ ಎಂದು ರಝಾಕ್ ಹೇಳಿದರು.

ಅಕಾಡಮಿ ಅಧ್ಯಕ್ಷ ಎ.ಸಿ.ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ತುಳು ಸಾಹಿತ್ಯ ಅಕಾಡಮಿಯು ಪ್ರಸ್ತುತ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದ್ದು ಈ ನಿಟ್ಟಿನಲ್ಲಿ ಹಲವಾರು ವಿನೂತನ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಇದರಲ್ಲಿ ಚಾವಡಿ ತಮ್ಮನವು ಒಂದಾಗಿದ್ದು ತುಳು ಬಾಷೆ, ಸಂಸ್ಕøತಿ ವಿಚಾರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯವನನು ನಡೆಸಲಾಗುತ್ತಿದೆ ಎಂದು ಅವರು ಹೇಳಿದರು. 

ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ವಿಜಯಲಕ್ಷ್ಮೀ ಬಿ.ಶೆಟ್ಟಿ ಸನ್ಮಾನಿಸಿದರು.  ಅಕಾಡಮಿ ರಿಜಿಸ್ಟಾರ್ ಚಂದ್ರಹಾಸ ರೈ ಬಿ., ಸದಸ್ಯರಾದ ಡಾ.ವೈ.ಎನ್.ಶೆಟ್ಟಿ, ಶಿವಾನಂದ ಕರ್ಕೆರ, ಪ್ರಭಾಕರ ನೀರುಮಾರ್ಗ, ಸುಧಾ ನಾಗೇಶ್, ವಿದ್ಯಾಶ್ರೀ ಉಪಸ್ಥಿತರಿದ್ದರು.

ಕಾರ್ಯಕ್ರಮದ ಸದಸ್ಯ ಸಂಚಾಲಕ ಎ.ಗೋಪಾಲ ಅಂಚನ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸದಸ್ಯ ಡಾ.ವಾಸುದೇವ ಬೆಳ್ಳೆ ಕಾರ್ಯಕ್ರಮ ನಿರೂಪಿಸಿದರು. ಸದಸ್ಯ ಬೆನೆಟ್ ಅಮ್ಮಣ್ಣ ವಂದಿಸಿದರು. ಇದೇ ಸಂದರ್ಭ ತುಳು ಲಿಪಿ ಹಾಗೂ ತುಳು ಬಾಷೆ ಕಲಿತ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X