Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದ...

ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದ ಸಕಲೇಶಪುರ ಬೀದಿ ನಾಯಿ ಹತ್ಯೆ ಪ್ರಕರಣ

ಪುರಸಭೆ ಮುಖ್ಯಾಧಿಕಾರಿ, ಗುತ್ತಿಗೆದಾರರಿಗೆ ನೋಟಿಸ್ ಜಾರಿ

ವಾರ್ತಾಭಾರತಿವಾರ್ತಾಭಾರತಿ18 Nov 2018 8:08 PM IST
share
ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದ ಸಕಲೇಶಪುರ ಬೀದಿ ನಾಯಿ ಹತ್ಯೆ ಪ್ರಕರಣ

ಸಕಲೇಶಪುರ, ನ.19: ಬೀದಿ ನಾಯಿಗಳ ಸಾಮೂಹಿಕ ಹತ್ಯೆ ಪ್ರಕರಣ ಈಗ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ್ದು, ಪುರಸಭೆ ಮುಖ್ಯಾಧಿಕಾರಿ ವಿಲ್ಸನ್ ಮತ್ತು ಗುತ್ತಿಗೆದಾರ ವಿ.ಜಾರ್ಜ್ ರಾಬರ್ಟ್ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. 

ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಮೀರಿದ್ದಕ್ಕೆ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಬೇಕು ಎಂದು ಕೋರಿ ಪ್ರಾಣಿಗಳ ಹಕ್ಕು ಕಾರ್ಯಕರ್ತರಾದ ನವೀನ ಕಾಮತ್ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆಗೆ ಒಪ್ಪಿದ ನ್ಯಾಯಮೂರ್ತಿ ಎನ್.ವಿ.ರಾಮಣ್ಣ ಮತ್ತು ಎಂ.ಎಂ.ಶಾಂತನಗೌಡರ್ ಅವರನ್ನು ಒಳಗೊಂಡ ಪೀಠ, ಪುರಸಭೆಯ ಮುಖ್ಯಾಧಿಕಾರಿ ವಿಲ್ಸನ್ ವಿ.ಟಿ. ಮತ್ತು ಗುತ್ತಿಗೆದಾರ ವಿ.ಜಾರ್ಜ್ ರಾಬರ್ಟ್ ಅವರಿಗೆ ನೋಟಿಸ್ ಜಾರಿ ಮಾಡಿದೆ ಮತ್ತು ನಾಲ್ಕು ವಾರಗಳಲ್ಲಿ ಉತ್ತರಿಸಲು ಸೂಚಿಸಿದೆ.

ನವೀನ ಕಾಮತ್ ಪರವಾಗಿ ಹಾಜರಾದ ವಕೀಲ ಸಿದ್ಧಾರ್ಥ್ ಗರ್ಗ್ ಅವರು, ಸುಪ್ರೀಂ ಕೋರ್ಟ್‌ನ ನಿರ್ದಿಷ್ಟ ನಿರ್ದೇಶನಗಳನ್ನು ಉದ್ದೇಶ ಪೂರ್ವಕವಾಗಿ ಉಲ್ಲಂಘಿಸಿದ್ದಕ್ಕಾಗಿ ನ್ಯಾಯಾಂಗ ನಿಂದನಾ ಕ್ರಮಗಳನ್ನು ಆರಂಭಿಸಬೇಕೆಂದು ಕೋರಿದರು.

ಪುರಸಭೆ ವಿರುದ್ಧ ಆರೋಪ
ಬೀದಿನಾಯಿ ಸಮಸ್ಯೆ ಪರಿಹರಿಸುವ ನೆಪದಲ್ಲಿ ಪುರಸಭೆ 350 ನಾಯಿಗಳನ್ನು ಹಿಡಿದು ಬೇರೆಡೆಗೆ ಸಾಗಿಸಲು 91,537 ರೂ. ಬಿಲ್ ಮಾಡಿ ಕೆಲವು ನಾಯಿಗಳನ್ನು ಹಿಡಿದು ಕೊಂದು, ಭೂಮಿಯಲ್ಲಿ ಹೂತಿರುವ ಅಮಾನವೀಯ ಪ್ರಕರಣ ತಡವಾಗಿ ಬೆಳಕಿಗೆ ಬಂದಿತ್ತು. ಈ ಪ್ರಕರಣಕ್ಕೆ ಸಂಬಂದಿಸಿದಂತೆ ಮೇನೆಕಾ ಗಾಂಧಿ ಸಂಸ್ಥೆಯ ಶಿಫಾರಸು ಮೇರೆಗೆ ಬೆಂಗಳೂರಿನ ಕ್ಯೂಪ ಸಂಸ್ಥೆಯ ಹರೀಶ್ ಕೆ.ಪಿ. ಎಂಬವರು ಪಟ್ಟಣ ಠಾಣೆಗೆ ದೂರು ಸಲ್ಲಿಸಿದ್ದರು.
ಪುರಸಭೆಯ ಮುಖ್ಯಧಿಕಾರಿ, ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ಸಾಕ್ಷಿ ನಾಶ ಪಡಿಸುವ ಸಾಧ್ಯತೆ ಇರುವುದರಿಂದ ನಾಯಿಗಳನ್ನು ಹೂತಿರುವ ಸ್ಥಳಕ್ಕೆ ಭದ್ರತೆ ನೀಡುವಂತೆ ದೂರಿನಲ್ಲಿ ಮನವಿ ಮಾಡಿದ್ದರು.

ದಾಖಲೆಗಳ ಪ್ರಕಾರ ನಾಯಿಗಳನ್ನು ಹಿಡಿಯಲು ಪುರಸಭೆ ಟೆಂಡರ್ ಕಾಲ್ ಮಾಡಲಾಗಿತ್ತು. ಹಾಗೂ 1 ನಾಯಿಗೆ 250 ರೂ.ನಂತೆ ನಿಗದಿಪಡಿಸಿ ಸ್ಥಳೀಯ ಪತ್ರಿಕೆಗಳಲ್ಲಿ ಜಾಹಿರಾತು ನೀಡಲಾಗಿತ್ತು. ಕೇರಳ ಮೂಲದ ವ್ಯಕ್ತಿಗೆ ಟೆಂಡರ್ ನೀಡಲಾಗಿದ್ದು, ಈತನ ಹೆಸರಿಗೆ 91,537 ರೂ. ಚೆಕ್ ನೀಡಲಾಗಿದೆ ಎಂದು ದಾಖಲೆಗಳಿಂದ ತಿಳಿದು ಬಂದಿದೆ.

ಹಿಡಿದ ನಾಯಿಗಳನ್ನು ಏನು ಮಾಡಲಾಯಿತು? ಎಷ್ಟು ರೋಗಗ್ರಸ್ಥ ನಾಯಿಗಳು ಕಂಡು ಬಂದವು? ಈ ನಾಯಿಗಳಿಗೆ ರೋಗವಿದೆ ಎಂದು ಹೇಗೆ ಪರೀಕ್ಷಿಸಲಾಯಿತು? ಪರೀಕ್ಷಿಸಿದ ವೈದ್ಯರು ಯಾರು? ಹಾಗೂ ದಾಖಲೆಗಳಿವೆಯೇ? ಫೋಟೊ ಇದೆಯೇ? ಎಂದು ಪ್ರಶ್ನಿಸಿ ಹರೀಶ್ ಕೆ.ಬಿ. ಅವರು ಮಾಹಿತಿ ಪಡೆದುಕೊಳ್ಳಲು ಪುರಸಭೆಗೆ ಅರ್ಜಿ ಸಲ್ಲಿಸಿದ್ದರು. ಈ ಯಾವುದೇ ಪ್ರಶ್ನೆಗೆ ಪುರಸಭೆಯ ಮುಖ್ಯಾಧಿಕಾರಿ ಉತ್ತರಿಸಿರಲಿಲ್ಲ.

ಎಫ್‌ಐಆರ್ ದಾಖಲು: ಬೀದಿ ನಾಯಿಗಳನ್ನು ಕೊಂದು ಹೂತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪುರಸಭೆಯ ಮುಖ್ಯ ಅಧಿಕಾರಿ ವಿಲ್ಸನ್ ಹಾಗೂ ನಾಯಿ ಹಿಡಿಯುವ ಗುತ್ತಿಗೆದಾರ ಜಾರ್ಜ್ ರೊರ್ಬಟ್ ವಿರುದ್ದ ಎಫ್ಐಆರ್ ದಾಖಲಾಗಿತ್ತು.

ನಾಯಿಗಳನ್ನು ಕೊಲ್ಲುವುದು ಅಪರಾಧ: ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಣಿದಯಾ ಸಂಘದ ಕಾರ್ಯಕರ್ತ ಹರೀಶ್ ಬಿ.ಕೆ. ಮಾತನಾಡಿ, ಐಪಿಸಿ 1860 ಸೆಕ್ಷನ್ 428, 429 ಹಾಗೂ ಪಿಸಿಎ 1960 ಕಾಯ್ದೆ ಸೆಕ್ಷನ್ 11 ಪ್ರಕಾರ ನಾಯಿ ಕೊಲ್ಲುವುದು ಅಪರಾಧವಾಗಿರುತ್ತದೆ. ಬೀದಿ ನಾಯಿ ಸಮಸ್ಯೆ ಪರಿಹಾರಕ್ಕೆ ನಾಯಿಗಳನ್ನು ಕೊಲ್ಲುವುದು ಪರಿಹಾರವಲ್ಲ. ಇತರ ವೈಜ್ಞಾನಿಕ ಅಂಶಗಳನ್ನು ಕಾರ್ಯರೂಪಕ್ಕೆ ತರಬೇಕು. ಸಂತಾನೋತ್ಪತ್ತಿ ತಡೆಗಟ್ಟುವುದು ಸರಿಯಾದ ಕ್ರಮವಾಗಿದೆ ಎಂದರು. ನಾಯಿಗಳು ಮನುಷ್ಯರನ್ನು ಕಚ್ಚುವುದು ಗಂಭೀರವಾದ ಸಮಸ್ಯೆ. ಈ ಸಮಸ್ಯೆಗೆ ಪುರಸಭೆ ನೇರ ಹೊಣೆಯಾಗಿದೆ. ಹಂತ ಹಂತವಾಗಿ ಸಂತಾನ ಹರಣ ಮಾಡುವುದರಿಂದ ನಾಯಿಗಳು ದೈಹಿಕವಾಗಿ ಬಲಹೀನವಾಗುತ್ತವೆ. ನಾಯಿ ಸಂತಾನ ಕಡಿಮೆಯಾಗುತ್ತದೆ. ಈ ಮೂಲಕ ಮಾತ್ರ ಸಮಸ್ಯೆ ಪರಿಹಾರವಾಗುತ್ತದೆ. ಕೊಲ್ಲುವ ಕ್ರಮ ಅಮಾನವೀಯ ಹಾಗೂ ಪುರಸಭೆಯ ಅಧಿಕಾರಿಗಳಿಗೆ ಆದಾಯವಾಗುತ್ತದೆ ಎಂದರು.

ಪುರಸಭೆಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಕೋರ್ಟ್‌ನ ಆದೇಶದಿಂದ ನುಣುಚಿಕೊಳ್ಳುವ, ನವೀನ ತಂತ್ರಗಳ ಪ್ರಯೋಗವನ್ನು ಸಹಿಸುವುದಿಲ್ಲ. ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ 1960 ಮತ್ತು ಪ್ರಾಣಿಗಳ ಜನನ ನಿಯಂತ್ರಣ ನಿಯಮಾವಳಿ 2001ನ್ನು ಕಡ್ಡಾಯವಾಗಿ ಪಾಲಿಸಬೇಕು. ನಾಯಿಗಳನ್ನು ಸಂತಾನ ಶಕ್ತಿ ಹರಣ ಚಿಕಿತ್ಸೆಗಾಗಿ ಹಿಡಿದಿದ್ದರೂ ಹಿಂದಿದ್ದ ಪ್ರದೇಶದಲ್ಲೇ ತಂದು ಬಿಡಬೇಕು.

ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದ ಪ್ರಕರಣ: ಸುಪ್ರೀಂ ಕೋರ್ಟ್ ಪ್ರಕರಣವನ್ನು ಕೈಗೆತ್ತಿಕೊಂಡ ಬಳಿಕ ಸುದ್ದಿ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಮಾಧ್ಯಮಗಳಲ್ಲಿ ಪ್ರಕಟವಾಗಿ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯಿತು. ಸಾಮಾಜಿಕ ತಾಣಗಳಲ್ಲಿಯೂ ಸುದ್ದಿ ವೈರಲ್ ಆಗಿತ್ತು. ತಾಲೂಕಿನಲ್ಲಿ ಜನ ಸಾಮಾನ್ಯರಲ್ಲೂ ಚರ್ಚೆಯಾಗುತ್ತಿತ್ತು. ಊರಿನ ಬೀದಿನಾಯಿಯ ಸಾವಿನ ಬಗ್ಗೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸುವುದು ಜನಸಾಮಾನ್ಯರಿಗೆ ಸೋಜಿಗದ ಸಂಗತಿಯಾಗಿದೆ.

ಐಪಿಸಿ 1860 ಸೆಕ್ಷನ್ 428, 429 ಹಾಗೂ ಪಿಸಿಎ 1960 ಕಾಯ್ದೆ ಸೆಕ್ಷನ್ 11 ಪ್ರಕಾರ ನಾಯಿ ಕೊಲ್ಲುವುದು ಅಪರಾಧವಾಗಿರುತ್ತದೆ. ನಾಯಿಗಳನ್ನು ಕೊಲ್ಲುವುದು ಸಮಸ್ಯೆಗೆ ಪರಿಹಾರವಲ್ಲ. ಇತರ ವೈಜ್ಞಾನಿಕ ಅಂಶಗಳನ್ನು ಕಾರ್ಯರೂಪಕ್ಕೆ ತರಬೇಕು. ಸಂತಾನೋತ್ಪತ್ತಿ ತಡೆಗಟ್ಟುವುದು ಸರಿಯಾದ ಕ್ರಮವಾಗಿದೆ. ಕೊಲ್ಲುವ ಕ್ರಮ ಅಮಾನವೀಯ.

-ಹರೀಶ್ ಬಿ.ಕೆ., ಪ್ರಾಣಿದಯಾ ಸಂಘದ ಕಾರ್ಯಕರ್ತ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X