Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯುಎಫ್‌ಸಿ ಮಕ್ಕಳ ಹಬ್ಬ: ಜೇಸಿಸ್ ಆಂಗ್ಲ...

ಯುಎಫ್‌ಸಿ ಮಕ್ಕಳ ಹಬ್ಬ: ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಗೆ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ19 Nov 2018 9:04 PM IST
share
ಯುಎಫ್‌ಸಿ ಮಕ್ಕಳ ಹಬ್ಬ: ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಗೆ ಪ್ರಶಸ್ತಿ

ಉದ್ಯಾವರ, ನ.19: ಸ್ಥಳೀಯ ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಜರಗಿದ 9ನೇ ವರ್ಷದ ಉಡುಪಿ ಜಿಲ್ಲಾ ಮಟ್ಟದ ಪ್ರೌಢ ಮತ್ತು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಸಾಮೂಹಿಕ ನೃತ್ಯ ಸ್ಪರ್ಧೆ ‘ಯುಎಫ್‌ಸಿ ಮಕ್ಕಳ ಹಬ್ಬ-2018’ರಲ್ಲಿ ಕಾರ್ಕಳದ ಜೇಸಿಸ್ ಆಂಗ್ಲ ಮಾಧ್ಯಮ ಶಾಲಾ ತಂಡ ಎರಡೂ ವಿಭಾಗದ ಪ್ರಶಸ್ತಿಗಳನ್ನು ಗೆದ್ದುಕೊಂಡವು.

ಫ್ರೌಡ ಶಾಲಾ ವಿಭಾಗದಲ್ಲಿ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಪೂಜಿತ ಮತ್ತು ಬಳಗ ಹಾಗೂ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಅದೇ ಶಾಲೆಯ ಸ್ವೀಕೃತಿ ಮತ್ತು ಬಳಗ ಪ್ರಥಮ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.

ಉಳಿದ ಬಹುಮಾನಗಳ ವಿವರ: ಪ್ರೌಢಶಾಲಾ ವಿಭಾಗ:ದ್ವಿತೀಯ- ಹರ್ಷಲ್ ಮತ್ತು ಬಳಗ, ಬಾಲಕಿಯರ ಪದವಿ ಪೂರ್ವ ಕಾಲೇಜು ಉಡುಪಿ, ತೃತಿಯ- ಸುರಭಿ ಮತ್ತು ಬಳ, ಶ್ರೀನಾರಾಯಣ ಗುರು ಆಂಗ್ಲ ಮಾಧ್ಯಮ ಪ್ರೌಢಶಾಲೆ ಪಡುಬೆಳ್ಳೆ.

ಪ್ರಾಥಮಿಕ ಶಾಲಾ ವಿಭಾಗ: ದ್ವಿತೀಯ- ಕೃತಿ ಎಸ್. ಉಚ್ಚಿಲ್ ಮತ್ತು ಬಳಗ ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿ, ತೃತೀಯ-ಆಶ್ಲೇಷ್ ಮತ್ತು ಬಳಗ ವಾಸುದೇವ ಕೃಪಾ ವಿದ್ಯಾ ಮಂದಿರ ಹಿರಿಯ ಪ್ರಾಥಮಿಕ ಶಾಲೆ ಬೈಲೂರು.

 ವಿಜೇತ ತಂಡಗಳಿಗೆ ಎರಡೂ ವಿಭಾಗಗಳಲ್ಲಿ ಪ್ರತ್ಯೇಕವಾಗಿ ರೂ. 5000, ರೂ.3000 ಹಾಗೂ ರೂ.2000 ಅಲ್ಲದೇ ಸ್ಮರಣಿಕೆ, ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಭಾಗವಹಿಸಿದ ಎಲ್ಲಾ ತಂಡಗಳಿಗೆ ರೂ.1000 ಮತ್ತು ಪುಸ್ತಕ ಸ್ಮರಣಿಕೆ, ಪ್ರಮಾಣ ಪತ್ರಗಳನ್ನು ನೀಡಲಾಯಿತು. ಉತ್ಸವದಲ್ಲಿ 29 ಪ್ರಾಥಮಿಕ ಶಾಲಾ ತಂಡಗಳು ಮತ್ತು 9 ಪ್ರೌಡಶಾಲಾ ತಂಡಗಳು ಭಾಗವಹಿಸಿದ್ದವು.

ಸಮಾರೋಪ: ಮಕ್ಕಳ ಹಬ್ಬದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ನೃತ್ಯ ನಿಕೇತನ ಕೊಡವೂರು ಇದರ ನಿರ್ದೇಶಕಿ ಮಾನಸಿ ಸುಧೀರ್, ಇಂದು ತೋರಿಕೆಗೆ ಮಕ್ಕಳು ಮಕ್ಕಳ ಹಾಗೆ ಕಾಣುತ್ತಾರೆ, ಆದರೆ ದೊಡ್ಡವರ ಹಾಗೆ ವರ್ತಿಸುತ್ತಾರೆ. ಅವರಲ್ಲಿ ಮಗುತನವೇ ಇಲ್ಲವಾಗಿದೆ. ಮಕ್ಕಳು ಇಂದು ನಗುವುದನ್ನೇ ಮರೆತಿದ್ದಾರೆ. ಇದಕ್ಕೆ ನಾವು ಹೆತ್ತವರು ಮತ್ತು ಶಿಕ್ಷಕರು ಕಾರಣ ಎಂದು ನನ್ನ ಅನಿಸಿಕೆ ಎಂದರು.

ನಾವು ಮಕ್ಕಳಿಗೆ ಅತೀಯಾದ ಒತ್ತಡವನ್ನು ಹಾಕುತ್ತಿದ್ದೇವೆ.ಅವರ ಇಚ್ಛೆಯಂತೆ ಇರಲು ಬಿಡೋದಿಲ್ಲ. ಶಿಕ್ಷಕರ ಅತಿಯಾದ ಶಿಸ್ತು, ಮಕ್ಕಳನ್ನು ಗಂಭೀರವಾಗಿಸಿದೆ. ಅವರ ತುಂಟತನ ಮಾಯವಾಗಿದೆ. ಮಕ್ಕಳು ಮಾತು ಕಡಿಮೆ ಮಾಡಲು ಮುಖ್ಯ ಕಾರಣ ಅತಿಯಾದ ಮೊಬೈಲ್ ಬಳಕೆ. ಮಕಳನ್ನು ಸಾಂಸ್ಕೃತಿಕವಾಗಿ ತೊಡಗಿಸಿದರೆ ಮಕ್ಕಳು ತಮ್ಮ ಸೃಜನಶೀಲತೆಯನ್ನು ಹೆಚ್ಚಿಸಿಕೊಳ್ಳುತ್ತಾರೆ ಎಂದರು.

ಉಡುಪಿ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ಶೇಷಶಯಯನ ಕಾರಿಂಜ ಸಮಾರಂಭದ ಅದ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅರ್.ಜೆ ಎರೋಲ್ ಗೊನ್ಸಾಲ್ವಿಸ್, ಉದ್ಯಾವರ ಬಿಲ್ಲವ ಮಹಾಜನ ಸಂಘದ ಅಧ್ಯಕ್ಷ ಪ್ರತಾಪ್ ಕುಮಾರ್, ಉದ್ಯಾವರ ಗ್ರಾಪಂ ಉಪಾದ್ಯಕ್ಷ ರಿಯಾಝ್ ಪಳ್ಳಿ ಉಪಸ್ಥಿತರಿದ್ದರು.

 ವೇದಿಕೆಯಲ್ಲಿ ನಿರ್ದೇಶಕರಾದ ಉದ್ಯಾವರ ನಾಗೇಶ್ ಕುಮಾರ್, ಶರತ್ ಕುಮಾರ್, ಚಂದ್ರಾವತಿ ಭಂಡಾರಿ, ಯು.ಪದ್ಮನಾಭ ಕಾಮತ್, ಉಪಾದ್ಯಕ್ಷ ಲೋಕನಾಥ್ ಬೊಳ್ಜೆ, ಕೋಶಾಧಿಕಾರಿ ಸೋಮಶೇಖರ್ ಸುರತ್ಕಲ್ ಉಪಸ್ಥಿತರಿದ್ದರು. 

ಮಾಜಿ ಅಧ್ಯಕ್ಷ ಯು. ಆರ್. ಚಂದ್ರಶೇಖರ್ ಸಾಗತಿಸಿ, ಉಪಾಧ್ಯಕ್ಷೆ ಸುಗಂಧಿ ಶೇಖರ್ ವಂದಿಸಿದರು.ಆಬಿದ್ ಆಲಿ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X