Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಯುವಕನನ್ನು 99 ವರ್ಷಗಳ ಜೈಲುಶಿಕ್ಷೆಯಿಂದ...

ಯುವಕನನ್ನು 99 ವರ್ಷಗಳ ಜೈಲುಶಿಕ್ಷೆಯಿಂದ ಪಾರು ಮಾಡಿದ ಸೆಲ್ಫಿ!

ವಾರ್ತಾಭಾರತಿವಾರ್ತಾಭಾರತಿ20 Nov 2018 2:17 PM IST
share
ಯುವಕನನ್ನು 99 ವರ್ಷಗಳ ಜೈಲುಶಿಕ್ಷೆಯಿಂದ ಪಾರು ಮಾಡಿದ ಸೆಲ್ಫಿ!

ಟೆಕ್ಸಾಸ್, ನ.20: ಸೆಲ್ಫಿ ಗೀಳು ಹಲವು ಮಂದಿಗೆ ಮಾರಣಾಂತಿಕವಾಗಿ ಪರಿಣಮಿಸಿದ ನಿದರ್ಶನಗಳಿವೆ. ಆದರೆ ಇಲ್ಲೊಂದು ಪ್ರಕರಣದಲ್ಲಿ ಸೆಲ್ಫಿಯೊಂದು ಯುವಕನೊಬ್ಬನನ್ನು ಸಂಭಾವ್ಯ 99 ವರ್ಷಗಳ ಜೈಲುಶಿಕ್ಷೆಯಿಂದ ಪಾರು ಮಾಡಿ ಆತನ ಪಾಲಿಗೆ ಆಪತ್ಬಾಂಧವನಾಗಿದೆ.

ಸೆಂಟ್ರಲ್ ಟೆಕ್ಸಾಸ್ ನಿವಾಸಿ ಕ್ರಿಸ್ಟೋಫರ್ ಪ್ರಿಕೋಪಿಯಾ (21) ಎಂಬ ಯುವಕ ಜಾರ್ಜ್ ಟೌನ್‍ನಲ್ಲಿ ತನ್ನ ಉದ್ಯೋಗದಲ್ಲಿ ನಿರತನಾಗಿದ್ದ ವೇಳೆ ಸೆಪ್ಟೆಂಬರ್ 22, 2017ರಂದು ಪೊಲೀಸರು ಆತನನ್ನು ಬಂಧಿಸಿದಾಗ ಆತನ ಪಾಲಿಗೆ ಆಘಾತವಾಗಿತ್ತು.

ಮಾಜಿ ಗರ್ಲ್ ಫ್ರೆಂಡ್ ಆತನ ವಿರುದ್ಧ ದೂರು ನೀಡಿದ್ದೇ ಬಂಧನಕ್ಕೆ ಕಾರಣವಾಗಿತ್ತು. ಆತ ತನ್ನ ಮನೆಯೊಳಕ್ಕೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ ಎಂದು ಆಕೆ ಆರೋಪಿಸಿದ್ದಳು. ಆತ ತಾನು ನಿರಪರಾಧಿ ಎಂದು ಹೇಳಿದರೂ ಯಾರೂ ಕೇಳುವವರಿರಲಿಲ್ಲ, ಆತ ಮತ್ತು  ದೂರುದಾರೆ ಹೈಸ್ಕೂಲ್ ದಿನಗಳಲ್ಲಿ ಡೇಟಿಂಗ್ ಮಾಡುವುದನ್ನು ಬಿಟ್ಟರೆ ನಂತರದ ವರ್ಷಗಳಲ್ಲಿ  ಅವರಿಬ್ಬರ ನಡುವೆ ಸಂಪರ್ಕವಿರಲಿಲ್ಲ ಎಂದು ಆತನ ವಕೀಲರು ವಾದಿಸಿದ್ದರು.

ಘಟನೆ ಸೆಪ್ಟೆಂಬರ್ 20, 2017ರಂದು  ಸಂಜೆ 7.20ರ ಸುಮಾರಿಗೆ  ನಡೆದಿದೆಯೆಂದು ಆರೋಪಿಸಲಾಗಿತ್ತು. ಆದರೆ ಆ ದಿನ, ಆ ಸಮಯ  ಕ್ರಿಸ್ಟೋಫರ್ ತನ್ನ ತಾಯಿ ಎರಿನ್ ಪ್ರಿಕೋಪಿಯಾ ಜತೆಗೆ ಆಸ್ಟಿನ್‍ನಲ್ಲಿ ಸಮಾರಂಭವೊಂದರಲ್ಲಿ ಭಾಗವಹಿಸುತ್ತಿದ್ದ ಎಂದು ತಾಯಿಗೆ ನೆನಪಾಗಿತ್ತು. ಅದೇ ದಿನ ರಾತ್ರಿ ಆ ಕಾರ್ಯಕ್ರಮದ ಸಂದರ್ಭ ತಾನು ತೆಗೆದಿದ್ದ ಸೆಲ್ಫಿಯನ್ನು ಎರಿನ್ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದರು.  ಆ ಸೆಲ್ಫಿಯ ಮೆಟಾಡಾಟಾ ಪರಿಶೀಲಿಸಿದಾಗ ಅದು 7:02 ಗಂಟೆಗೆ ತೆಗೆದಿದ್ದೆಂದು ಪೊಲೀಸರಿಗೆ ತಿಳಿದು ಬಂದಿತ್ತು. ಆದರೆ ಹಲ್ಲೆ ಘಟನೆ ನಡೆದಿದ್ದು ಬೆಲ್ ಕೌಂಟಿ ಹಾಗೂ ಅದು ಆ ಸಂದರ್ಭ ಕ್ರಿಸ್ಟೋಫರ್ ಇದ್ದ ಸ್ಥಳದಿಂದ 70 ಮೈಲಿಗಳಾಚೆಗಿತ್ತು.

ಈ  ಸೆಲ್ಫಿ ಸಾಕ್ಷ್ಯದ ಆಧಾರದಲ್ಲಿಯೇ ನ್ಯಾಯಾಲಯ ಕ್ರಿಸ್ಟೋಫರ್ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿದೆ. ಇದೀಗ ಆತನ ಕುಟುಂಬ ಆತನ ವಿರುದ್ಧ ಆರೋಪ ಹೊರಿಸಿದ ಯುವತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಚಿಂತಿಸುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X