Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೆಂಪೇಗೌಡ ಪ್ರಶಸ್ತಿ: ರಾಜ್ಯೋತ್ಸವ...

ಕೆಂಪೇಗೌಡ ಪ್ರಶಸ್ತಿ: ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಮಾನದಂಡಗಳ ಅನುಕರಣೆಗೆ ಮುಂದಾದ ಬಿಬಿಎಂಪಿ

ವಾರ್ತಾಭಾರತಿವಾರ್ತಾಭಾರತಿ20 Nov 2018 7:16 PM IST
share
ಕೆಂಪೇಗೌಡ ಪ್ರಶಸ್ತಿ: ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಮಾನದಂಡಗಳ ಅನುಕರಣೆಗೆ ಮುಂದಾದ ಬಿಬಿಎಂಪಿ

ಬೆಂಗಳೂರು, ನ.20: ಕೆಂಪೇಗೌಡ ಜಯಂತಿ ಅಂಗವಾಗಿ ಬಿಬಿಎಂಪಿ ನೀಡುವ ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಸಾಧಕರ ಆಯ್ಕೆ ವೇಳೆ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯ ಕೆಲ ಮಾನದಂಡಗಳನ್ನು ಅನುಸರಿಸಲು ಬಿಬಿಎಂಪಿ ಮುಂದಾಗಿದೆ.

ಪ್ರಸಕ್ತ ಸಾಲಿನಲ್ಲಿ ಪ್ರಶಸ್ತಿ ಪ್ರದಾನ ಸಂದರ್ಭದಲ್ಲಿ ನಡೆದ ಗೊಂದಲ ಮರುಕಳಿಸದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಬಿಬಿಎಂಪಿ ಈ ಕ್ರಮಕ್ಕೆ ಮುಂದಾಗಿದೆ. ಅದರಂತೆ ಮುಂದಿನ ವರ್ಷ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲು ಮಾರ್ಗಸೂಚಿ ರೂಪಿಸಲು ನಿರ್ಧರಿಸಿದೆ. ಅಲ್ಲದೆ, ಸಾಧಕರ ಆಯ್ಕೆಗಾಗಿಯೇ ಪ್ರತ್ಯೆಕ ಸಮಿತಿ ರಚಿಸುವ ಬಗ್ಗೆಯೂ ಚಿಂತಿಸಲಾಗಿದ್ದು, ಈ ಕುರಿತು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ನಡೆಸಿದೆ.

ಗಣನೀಯ ಸಾಧನೆಗೆ ಆದ್ಯತೆ: ರಾಜ್ಯೋತ್ಸವದ ಸಂದರ್ಭದಲ್ಲಿ ನೀಡುವ ಪ್ರಶಸ್ತಿಗಳಿಗೆ ಸರಕಾರ ಅನುಸರಿಸುವ ಮಾನದಂಡಗಳನ್ನು ಪಾಲಿಕೆಯೂ ನಿಗದಿ ಮಾಡಿದ್ದು, ನೈತಿಕ ಅಧಃಪತನ ಹೊಂದಿರುವ, ಅಪರಾಧ ಹಿನ್ನೆಲೆ ಹೊಂದಿರುವವರನ್ನು ಪ್ರಶಸ್ತಿಗೆ ಆಯ್ಕೆ ಮಾಡುವುದು, ಪ್ರಶಸ್ತಿ ಆಯ್ಕೆಗೆ ಸಲಹಾ ಸಮಿತಿ ನೀಡುವ ಹೆಸರುಗಳೇ ಅಂತಿಮವಾಗಿ ಪರಿಗಣಿಸುವುದು, ಶಿಫಾರಸು ಮಾಡುವ ಮೊದಲೇ ವ್ಯಕ್ತಿಯ ಹಿನ್ನೆಲೆ, ಸಂಬಂಧಿಸಿದ ಕ್ಷೇತ್ರದಲ್ಲಿ ಗಣನೀಯ ಸಾಧನೆಯನ್ನು ಪರಿಗಣಿಸಬೇಕು ಸೇರಿದಂತೆ ಕೆಲವು ಅಂಶಗಳನ್ನು ಪಾಲಿಕೆಯು ಬಳಸಿಕೊಂಡು ಮಾರ್ಗಸೂಚಿಯನ್ನು ರೂಪಿಸಲಿದೆ.

ಪ್ರತಿಷ್ಠೆಗೆ ಬಲಿಯಾದ ಪ್ರಶಸ್ತಿ: ಪ್ರಸಕ್ತ ಸಾಲಿನಲ್ಲಿ ಮೂರು-ನಾಲ್ಕು ಬಾರಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ನಿಗದಿ ಮಾಡಿ ಮುಂದೂಡಲಾಗಿತ್ತು. 230 ಜನ ಸಾಧಕರಿಗೆ ಪ್ರಶಸ್ತಿ ನೀಡಲು ಸಮಿತಿ ನಿರ್ಧಾರ ಮಾಡಿತ್ತಾದರೂ, ಪ್ರದಾನ ಸಮಾರಂಭದಲ್ಲಿ ಪಾಲಿಕೆ ಸದಸ್ಯರ ಬೆಂಬಲಿಗರು, ರಾಜಕೀಯ ಪಕ್ಷಗಳ ನಾಯಕರು ವೇದಿಕೆಗೆ ಬಂದದ್ದರಿಂದ ಗೊಂದಲದ ಗೂಡಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X