Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಚಿಲಂಪಾಡಿ ಸೇತುವೆಯ ಅಡಿಭಾಗದಲ್ಲಿ ಅಕ್ರಮ...

ಇಚಿಲಂಪಾಡಿ ಸೇತುವೆಯ ಅಡಿಭಾಗದಲ್ಲಿ ಅಕ್ರಮ ಮರಳುಗಾರಿಕೆ: ವಸಂತ ಕುಬುಲಾಡಿ

ವಾರ್ತಾಭಾರತಿವಾರ್ತಾಭಾರತಿ20 Nov 2018 10:23 PM IST
share

ಕಡಬ, ನ.20. ಸುಬ್ರಹ್ಮಣ್ಯ - ಧರ್ಮಸ್ಥಳ ರಾಜ್ಯ ಹೆದ್ದಾರಿ ಹಾದು ಹೋಗಿರುವ ಇಚಿಲಂಪಾಡಿ ಸೇತುವೆಯ ಅಡಿಭಾಗದಲ್ಲಿ ಕಳೆದೆರಡು ತಿಂಗಳುಗಳಿಂದ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದು, ಈ ದಂಧೆಯಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ದಲಿತ ಮುಖಂಡ ವಸಂತ ಕುಬುಲಾಡಿ ಆರೋಪ‌ ಮಾಡಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇಚಿಲಂಪಾಡಿ ಸೇತುವೆಯ ಅನತಿ ದೂರದಲ್ಲೇ ಈ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದು, ಕತ್ತಲು ಆವರಿಸುತ್ತಿದಂತೆಯೇ ಅಕ್ರಮ ಮರಳುಗಾರಿಕೆ ನಡೆಯಲು ಅರಂಭವಾಗುತ್ತದೆ. ರಾತ್ರೆಯಾಗುತ್ತಿದ್ದಂತೆಯೇ ಸುಮಾರು ಹತ್ತಿಪ್ಪತ್ತು ಮಂದಿ ನದಿಗೆ ಇಳಿದು ಮರಳನ್ನು ರಾಶಿ ಮಾಡಿಡುತ್ತಾರೆ. ರಾತ್ರಿ ಹತ್ತು ಗಂಟೆಯ ವೇಳೆಗೆ ಸರತಿಯಲ್ಲಿ ಹಲವು ಮಿನಿ ಟಿಪ್ಪರ್ ಗಳು ಆಗಮಿಸುತ್ತವೆ. ಆದರೆ ನದಿಯಲ್ಲಿ ರಾಶಿ ಹಾಕಿದ ಮರಳನ್ನು ಕೊಂಡೊಯ್ಯಲು ಒಂದು ಟಿಪ್ಪರ್ ಮಾತ್ರ ನದಿಗೆ ಇಳಿಯುತ್ತದೆ. ಅದು ಲೋಡ್ ಆಗಿ ತೆರಳುತ್ತಿರುವಾಗ ಇನ್ನೊಂದು ಟಿಪ್ಪರ್ ಗೆ ಸರತಿಯಲ್ಲಿ ತಿಳಿಸಲಾಗುತ್ತದೆ. ಬೆಳಗ್ಗಿನ ಜಾವ ನಾಲ್ಕು ಗಂಟೆಯ ತನಕವೂ ಅಕ್ರಮ ಮರಳುಗಾರಿಕೆ ಸಾಗುತ್ತದೆ. ಒಂದೊಂದು ಲೋಡ್‌ ಮರಳು ಕುಡಾ ದುಬಾರಿ ಹಣಕ್ಕೆ ಬಿಕರಿಯಾಗುತ್ತದೆ ಎಂದು ಆರೋಪಿಸಿದರು.

ಬಡವರು ಮರಳು ಸಿಗದೆ ಮನೆ ಕಟ್ಟಲು ಪರದಾಡುತ್ತಿದ್ದು, ಧನಿಕರು ದುಬಾರಿ ಬೆಲೆಗೆ ಮರಳನ್ನು ಖರೀದಿಸಿ ಅಕ್ರಮ ದಂಗೆಕೋರರನ್ನು ಬೆಂಬಲಿಸುತ್ತಿದ್ದಾರೆ ಎಂದು ದೂರಿದ ಅವರು ಇಚಿಲಂಪಾಡಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ದಂಧೆಯನ್ನು ನಿಲ್ಲಿಸದೇ ಹೋದರೆ ಮುಂದಿನ ದಿನಗಳಲ್ಲಿ ನಾವು ಕೂಡಾ ನದಿಗಿಳಿದು ಮರಳು ತೆಗೆಯಲಿದ್ದೇವೆ ಎಂದು ಎಚ್ಚರಿಸಿದರು.

ಬೃಹತ್ ಗಾತ್ರದ ಅಕ್ರಮ ಮರಳುಗಾರಿಕೆ ಬಗ್ಗೆ ಪೊಲೀಸ್ ಇಲಾಖೆಯ ಮೇಲಾಧಿಕಾರಿಗಳಿಂದ ಹಿಡಿದು ಕಡಬ ಪೊಲೀಸ್ ಠಾಣಾ ಅಧಿಕಾರಿಗಳಿಗೂ ಪದೇ ಪದೇ ದೂರು ನೀಡುತ್ತಾ ಬಂದಿದ್ದರೂ ಈ ಅಕ್ರಮ ಮರಳುಗಾರಿಕೆಯನ್ನು ನಿಲ್ಲಿಸಲು ಇದುವರೆಗೂ ಯಾರಿಂದಲೂ ಸಾಧ್ಯವಾಗಿಲ್ಲ. ಒಂದೊಂದು ಪಿಕಪ್ ಗೂ ತಲಾ ಇಂತಿಷ್ಟು ಸಾವಿರದಂತೆ ಸಂಬಂಧಪಟ್ಟ ಇಲಾಖೆಗಳ ಮೇಲಾಧಿಕಾರಿಗಳಿಂದ ಹಿಡಿದು ಕಿರಿಯ ಅಧಿಕಾರಿಗಳವರೆಗೆ ಹೋಗಿರುವುದರಿಂದ ದಾಳಿ ಮಾಡುವ ಮೊದಲೇ ಇದೇ ಅಧಿಕಾರಿಗಳು ಸ್ಥಳಕ್ಕೆ ಮೆಸೇಜ್ ನೀಡಿ ಕಾಟಾಚರಕ್ಕೆ ದಾಳಿ ಮಾಡ್ತಾರೆ. ಇದರಿಂದಾಗಿ ರೈಡ್ ಮಾಡಿದರೂ ಪೊಲೀಸರು ಸ್ಥಳಕ್ಕೆ ಬರುವ ಮೊದಲೇ ಅಕ್ರಮ ಮರಳುಗಾರರು ಕಾಲ್ಕಿತ್ತಿರುತ್ತಾರೆ. ರಾತ್ರಿ ವೇಳೆ ರೈಡ್ ಮಾಡುವಾಗಲೂ ಎಲ್ಲ ಪಿಕಪ್ ಗಳು ಬಲೆಗೆ ಬೀಳೋದಿಲ್ಲ. ಒಂದೆರಡು ಪಿಕಪ್ ಗಳನ್ನು ಹಿಡಿದು ಸಣ್ಣ ಮೊತ್ತದ ದಂಡ ವಿಧಿಸಿ ಬಿಡುತ್ತಾರೆಂಬ ದೂರು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

ಸೇತುವೆಯ ಅಡಿಭಾಗದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯನ್ನು ನಿಲ್ಲಿಸದೆ ಹೋದರೆ ಬಂಟ್ವಾಳದ ಮುಲ್ಲರಪಟ್ಣ ಸೇತುವೆ ಕುಸಿದ ರೀತಿಯಲ್ಲಿ ಕೋಟ್ಯಂತರ ರೂ. ವೆಚ್ಚದ ಇಚಿಲಂಪಾಡಿ ಸೇತುವೆಯೂ ಕುಸಿಯುವ ಭೀತಿ ಎದುರಾಗಬಹುದು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದು, ಅಧಿಕಾರಿಗಳು ಎಚ್ಚೆತ್ತುಕೊಳ್ಳುವಂತೆ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X