Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವರದಕ್ಷಣಿ ಕಿರುಕುಳ ಆರೋಪ: ಎರಡು...

ವರದಕ್ಷಣಿ ಕಿರುಕುಳ ಆರೋಪ: ಎರಡು ಪ್ರತ್ಯೇಕ ದೂರು

ವಾರ್ತಾಭಾರತಿವಾರ್ತಾಭಾರತಿ20 Nov 2018 10:34 PM IST
share

ಕಾಪು, ನ. 20: ವರದಕ್ಷಿಣೆ ನೀಡುವಂತೆ ಕಿರುಕುಳ ನೀಡಿರುವ ಬಗ್ಗೆ ಕಾಪು ಠಾಣೆಯಲ್ಲಿ ಎರಡು ಪ್ರತ್ಯೇಕ ದೂರು ದಾಖಲಾಗಿದೆ. 

ಮಂಗಳೂರಿನ ಕುಂಜತ್ತಬೈಲು ನಿವಾಸಿ ತರನಮ್ ಬಾನು ಎಂಬವರಿಗೆ ಉಚ್ಚಿಲದ ಸುಭಾಸ್ ನಗರ ನಿವಾಸಿ ಮುಹಮ್ಮದ್ ಆಲಮ್ ಉಸ್ಮಾನ್ ಎಂಬವರೊಂದಿಗೆ 2015ರ ಆಗಸ್ಟ್ 16ರಂದು ಮಂಗಳೂರಿನಲ್ಲಿ ಮದುವೆ ಮಾಡಿಕೊಡಲಾಗಿತ್ತು. ಮದುವೆಯ ವೇಳೆ 70 ಪವನ್ ಚಿನ್ನ ಮತ್ತು 2 ಲಕ್ಷ ರೂ. ವರದಕ್ಷಿಣೆ ಬೇಡಿಕೆ ಇಟ್ಟಿದ್ದರು. ಅದರಂತೆ 43 ಪವನ್ ಚಿನ್ನ ಮತ್ತು 1,20,000 ರೂ. ವರದಕ್ಷಿಣೆ ನೀಡಲಾಗಿತ್ತು.

ಮದುವೆಯಾದ ಸ್ವಲ್ಪ ಸಮಯದ ಬಳಿಕ ಆರೋಪಿಗಳಾದ ಮುಹಮ್ಮದ್ ಆಲಮ್ ಉಸ್ಮಾನ್, ಸಯ್ಯದ್ ಇಕ್ಬಾಲ್ ಮಝ್‍ಹರ್ ಪಾಶಾ, ಸಾಧಿಕಾ ಬಾನು, ಅಷ್ಪಿಯಾ ಫರ್ಝಾನಾ, ಹನೀಫ್ ಯಾನೆ ಅಜರ್ ಸೇರಿ ವರದಕ್ಷಿಣೆ ತರುವಂತೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಲು ಪ್ರಾರಂಭಿಸಿದ್ದರು. ಅಲ್ಲದೆ ಆರೋಪಿಗಳು ಮೋಸ ಮಾಡುವ ಉದ್ದೇಶದಿಂದ ತರನಮ್ ಬಾನುರವರಿಗೆ ಮಾಹಿತಿ ಇಲ್ಲದ ಕೆಲವೊಂದು ದಾಖಲಾತಿಗಳಿಗೆ ಸಹಿ ಪಡೆದುಕೊಂಡು ನಂಬಿಕೆ ದ್ರೋಹ ಮಾಡಿರುತ್ತಾರೆ ಎನ್ನಲಾಗಿದ್ದು, ಕೆಲ ಸಮಯದ ನಂತರ ಆರೋಪಿಗಳು ತರನಮ್ ಬಾನು ರವರಿಗೆ ಚಿನ್ನವನ್ನು ಮನೆಯಲ್ಲಿ ಇಟ್ಟು ತಂದೆ ಮನೆಗೆ ಹೋಗಿ ಬರುವಂತೆ ಹೇಳಿ ಕಳುಹಿಸಿದ್ದರು.  ಮನೆಗೆ ಬಂದು ವಾಪಾಸು ಗಂಡನ ಮನೆಗೆ ಹೋದಾಗ ಆರೋಪಿಗಳು ಮನೆ ಒಳಗೆ ಸೇರಿಸದೆ ಮನೆಯಿಂದ ಹೊರಗೆ ಹಾಕಿರುವುದಾಗಿ ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದಾರೆ. ಅದರಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೈಲ್ವೇ ಸೇತುವೆ ಬಳಿ ಮಜೂರು ನಿವಾಸಿ ದಿಲ್ಶಾದ್ ಬಾನು ಅವರಿಗೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನ ಪರಪ್ಪನಹಳ್ಳಿ ನಿವಾಸಿ ಮುಹಮ್ಮದ್ ಜಫರ್ ಎಂಬವರೊಂದಿಗೆ  2010ರ ಮಾರ್ಚ್ 11ರಂದು ಮದುವೆಯಾಗಿದ್ದರು. ಮದುವೆ ಸಂದರ್ಭದಲ್ಲಿ ಮುಹಮ್ಮದ್ ಜಾಫರ್ ಮತ್ತು ಅವರ ಮನೆಯವರು ಬೇಡಿಕೆ ಇಟ್ಟಂತೆ 5 ಪವನ್ ಚಿನ್ನ ಹಾಗೂ 70 ಸಾವಿರ ರೂ. ಹಣವನ್ನು ನೀಡಿರುತ್ತಾರೆ. ಮದುವೆಯ ನಂತರ ಆರೋಪಿಗಳಾದ ಗಂಡ ಮುಹಮ್ಮದ್ ಜಫರ್, ಮುಹಮ್ಮದ್ ಸಾಧಿಕ್, ಹಯಾತ್ ಪಾಷಾ, ಹಾಜಿರಾಬಿ, ರೆಹಮತುಲ್ಲಾ, ಶಂಶಾದ್, ಶಮೀಮ್ ಇವರು ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಲು ಪ್ರಾರಂಭಿಸಿದ್ದರು ಎಂದು ದೂರಲಾಗಿದೆ.

ಕೆಲವು ಸಮಯದ ಬಳಿಕ ಗಂಡ ಮುಹಮ್ಮದ್ ಜಫರ್ ಅವರಿಗೆ ದಿಲ್ಶಾದ್ ತಂದೆ ಗ್ಯಾರೇಜ್ ಅಂಗಡಿ ಮಾಡಿಕೊಟ್ಟಿದ್ದರು. ಬಳಿಕ ಮತ್ತೆ ಪದೇ ಪದೇ ಹಣಕ್ಕೆ ಬೇಡಿಕೆ ಇಡುತಿದ್ದರು. ಅದರಂತೆ 75ಸಾವಿರ ರೂ. ಹಣವನ್ನು ಗಂಡನಿಗೆ ನೀಡಿದ್ದಾರೆ. ನಂತರ ಆರೋಪಿ ವರದಕ್ಷಿಣೆ ತರುವಂತೆ ಪೀಡಿಸುತಿದ್ದರು. ಅಲ್ಲದೆ ಎರಡನೇ ಮದುವೆಯಾಗಲು ತಲಾಕ್ ನೀಡಲು ಒಪ್ಪಿಗೆ ನೀಡುವಂತೆ ಎಲ್ಲಾ ಆರೋಪಿಗಳು ಸೇರಿ ಕಿರುಕುಳ ನೀಡಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಬಲವಂತವಾಗಿ ಗರ್ಭಪಾತವನ್ನು ಮಾಡಿ ಹೆಚ್ಚಿನ ವರದಕ್ಷಣೆ ಹಣವನ್ನು ತರದಿದ್ದರೆ ಕೊಲ್ಲುವುದಾಗಿ ಜೀವ ಬೆದರಿಕೆ ನೀಡಿದ್ದಾರೆ ಎಂದು ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದು, ಅದರಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X