Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಖಶೋಗಿ ಹತ್ಯೆ ಬಳಿಕ ಸೌದಿ ಯುವರಾಜನ...

ಖಶೋಗಿ ಹತ್ಯೆ ಬಳಿಕ ಸೌದಿ ಯುವರಾಜನ ವಿರುದ್ಧ ತಿರುಗಿಬಿದ್ದ ರಾಜ ಕುಟುಂಬ ?

ವಾರ್ತಾಭಾರತಿವಾರ್ತಾಭಾರತಿ20 Nov 2018 11:17 PM IST
share
ಖಶೋಗಿ ಹತ್ಯೆ ಬಳಿಕ ಸೌದಿ ಯುವರಾಜನ ವಿರುದ್ಧ ತಿರುಗಿಬಿದ್ದ ರಾಜ ಕುಟುಂಬ ?

ಲಂಡನ್, ನ. 20: ಸೌದಿ ಅರೇಬಿಯದ ಭಿನ್ನಮತೀಯ ಪತ್ರಕರ್ತ ಜಮಾಲ್ ಖಶೋಗಿ ಹತ್ಯೆಗೆ ಜಾಗತಿಕ ಆಕ್ರೋಶ ವ್ಯಕ್ತವಾಗುತ್ತಿರುವಂತೆಯೇ, ಸೌದಿ ಯುವರಾಜ ಮುಹಮ್ಮದ್ ಬಿನ್ ಸುಲ್ತಾನ್ ರಾಜನಾಗುವುದನ್ನು ತಪ್ಪಿಸಲು ದೇಶದ ಆಡಳಿತಾರೂಢ ಕುಟುಂಬದ ಕೆಲವು ಸದಸ್ಯರು ಆಂದೋಲನದಲ್ಲಿ ತೊಡಗಿದ್ದಾರೆ ಎಂದು ರಾಜ ಕುಟುಂಬಕ್ಕೆ ನಿಕಟವಾಗಿರುವ ಮೂಲಗಳು ತಿಳಿಸಿವೆ.

ಅಲ್ ಸೌದ್ ಕುಟುಂಬದ ಪ್ರಭಾವಿ ಶಾಖೆಗಳ ಡಝನ್‌ಗಟ್ಟಳೆ ರಾಜಕುಮಾರರು ಮತ್ತು ಸೋದರ ಸಂಬಂಧಿಗಳು, ಉತ್ತರಾಧಿಕಾರಿ ಸರದಿಯಲ್ಲಿ ಬದಲಾವಣೆಯಾಗಬೇಕೆಂದು ಬಯಸುತ್ತಿದ್ದಾರೆ. ಆದರೆ, ಯುವರಾಜನ 82 ವರ್ಷದ ತಂದೆ ಹಾಗೂ ದೊರೆ ಸಲ್ಮಾನ್ ಬದುಕಿರುವವರೆಗೆ ಅವರು ಈ ನಿಟ್ಟಿನಲ್ಲಿ ಮುಂದುವರಿಯುವುದಿಲ್ಲ ಎಂದು ಮೂಲಗಳು ಹೇಳಿವೆ.

ದೊರೆ ತನ್ನ ನೆಚ್ಚಿನ ಪುತ್ರನ ವಿರುದ್ಧ ಹೋಗುವ ಸಾಧ್ಯತೆಯಿಲ್ಲ ಎಂಬುದನ್ನು ಅವರು ಒಪ್ಪಿಕೊಳ್ಳುತ್ತಾರೆ.

ಬದಲಿಗೆ, ದೊರೆಯ ಮರಣಾನಂತರ, ಅವರ ಖಾಸಾ ತಮ್ಮ 76 ವರ್ಷದ ರಾಜಕುಮಾರ ಅಹ್ಮದ್ ಬಿನ್ ಅಬ್ದುಲಝೀಝ್ ಸಿಂಹಾಸನ ಏರುವ ಸಾಧ್ಯತೆ ಬಗ್ಗೆ ಅಸಂತುಷ್ಟ ರಾಜಕುಮಾರರು ಕುಟುಂಬದ ಇತರ ಸದಸ್ಯರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.

ದೊರೆ ಸಲ್ಮಾನ್‌ರ ಬದುಕುಳಿದಿರುವ ಏಕೈಕ ಖಾಸಾ ತಮ್ಮ ರಾಜಕುಮಾರ ಅಹ್ಮದ್, ಕುಟುಂಬ ಸದಸ್ಯರು, ಭದ್ರತಾ ವ್ಯವಸ್ಥೆ ಮತ್ತು ಕೆಲವು ಪ್ರಭಾವಿ ಪಾಶ್ಚಾತ್ಯ ದೇಶಗಳ ಬೆಂಬಲ ಹೊಂದಿದ್ದಾರೆ ಎಂದು ಮೂಲಗಳು ಅಭಿಪ್ರಾಯಪಟ್ಟಿವೆ.

ಮಗನನ್ನು ಬೆಂಬಲಿಸಿದ ದೊರೆ ಸಲ್ಮಾನ್

ಜಮಾಲ್ ಖಶೋಗಿ ಹತ್ಯೆ ಬಳಿಕ ಮೊದಲ ಬಾರಿಗೆ ಸೋಮವಾರ ಸಾರ್ವಜನಿಕವಾಗಿ ಮಾತನಾಡಿರುವ ಸೌದಿ ಅರೇಬಿಯ ದೊರೆ ಸಲ್ಮಾನ್, ತನ್ನ ಮಗ ಹಾಗೂ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್‌ರನ್ನು ಬೆಂಬಲಿಸಿದರು ಹಾಗೂ ನ್ಯಾಯಾಂಗವನ್ನು ಪ್ರಶಂಸಿಸಿದರು.

‘‘ಸೌದಿ ಅರೇಬಿಯವನ್ನು ನ್ಯಾಯ ಮತ್ತು ಸಮಾನತೆಯ ಇಸ್ಲಾಮಿಕ್ ತತ್ವಗಳ ಆಧಾರದಲ್ಲಿ ಸ್ಥಾಪಿಸಲಾಗಿದೆ. ನ್ಯಾಯಾಂಗ ಮತ್ತು ಪಬ್ಲಿಕ್ ಪ್ರಾಸಿಕ್ಯೂಶನ್ ಮಾಡುತ್ತಿರುವ ಪ್ರಯತ್ನಗಳ ಬಗ್ಗೆ ನಾವು ಹೆಮ್ಮೆ ಪಡುತ್ತೇವೆ’’ ಎಂದು 82 ವರ್ಷದ ದೊರೆ ಹೇಳಿದರು.

ಸರಕಾರದ ಅತ್ಯುನ್ನತ ಸಲಹಾ ಮಂಡಳಿ ಶೂರಾ ಕೌನ್ಸಿಲ್‌ನ ವಾರ್ಷಿಕ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ತನ್ನ ಮಗನ ಆರ್ಥಿಕ ಸುಧಾರಣೆ ಕಾರ್ಯಕ್ರಮಗಳನ್ನು ಅವರು ತನ್ನ ಭಾಷಣದಲ್ಲಿ ಶ್ಲಾಘಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X