Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾರ್ಚ್ 2019ರ ವೇಳೆಗೆ ದೇಶದ ಶೇ.50ರಷ್ಟು...

ಮಾರ್ಚ್ 2019ರ ವೇಳೆಗೆ ದೇಶದ ಶೇ.50ರಷ್ಟು ಎಟಿಎಂಗಳು ಮುಚ್ಚುವ ಸಾಧ್ಯತೆ

ನೋಟ್ ಬ್ಯಾನ್ ಆಘಾತ, ಕಠಿಣ ಮಾನದಂಡ

ವಾರ್ತಾಭಾರತಿವಾರ್ತಾಭಾರತಿ21 Nov 2018 8:26 PM IST
share
ಮಾರ್ಚ್ 2019ರ ವೇಳೆಗೆ ದೇಶದ ಶೇ.50ರಷ್ಟು ಎಟಿಎಂಗಳು ಮುಚ್ಚುವ ಸಾಧ್ಯತೆ

ಮುಂಬೈ,ನ.21: ನಿಯಂತ್ರಣ ಕ್ರಮಗಳಲ್ಲಿನ ಬದಲಾವಣೆಗಳಿಂದಾಗಿ ಎಟಿಎಂಗಳನ್ನು ನಿರ್ವಹಿಸುವುದು ಕಷ್ಟವಾಗುತ್ತಿದ್ದು,2019, ಮಾರ್ಚ್ ವೇಳೆಗೆ ಭಾರತದಲ್ಲಿಯ 2.38 ಎಟಿಎಂಗಳ ಪೈಕಿ ಅರ್ಧದಷ್ಟು ಯಂತ್ರಗಳು ಮುಚ್ಚಲ್ಪಡಬಹುದು ಎಂದು ಎಟಿಎಂ ಉದ್ಯಮದ ಒಕ್ಕೂಟ(ಸಿಎಟಿಎಂಐ) ಬುಧವಾರ ಎಚ್ಚರಿಕೆ ನೀಡಿದೆ.

ಎಟಿಎಂಗಳ ಮುಚ್ಚುವಿಕೆಯು ಸಾವಿರಾರು ಉದ್ಯೋಗಗಳ ನಷ್ಟಕ್ಕೆ ಕಾರಣವಾಗಲಿದೆ ಮತ್ತು ಸರಕಾರದ ಆರ್ಥಿಕ ಸೇರ್ಪಡೆ ಪ್ರಯತ್ನಗಳ ಮೇಲೆ ದುಷ್ಪರಿಣಾಮವನ್ನು ಬೀರಲಿದೆ. ಸೇವಾ ಪೂರೈಕೆದಾರರು 2019,ಮಾರ್ಚ್ ವೇಳೆಗೆ ಸುಮಾರು 1.13 ಲ.ಎಟಿಎಂಗಳನ್ನು ಮುಚ್ಚುವುದು ಅನಿವಾರ್ಯವಾಗಲಿದೆ. ಇವುಗಳಲ್ಲಿ ಸುಮಾರು ಒಂದು ಲಕ್ಷ ಆಫ್-ಸೈಟ್ ಎಟಿಎಂ ಮತ್ತು 15,000ಕ್ಕೂ ಅಧಿಕ ವೈಟ್ ಲೇಬಲ್ ಎಟಿಎಂಗಳು ಸೇರಿವೆ ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

 ಉದ್ಯಮವೀಗ ಬಿಕ್ಕಟ್ಟಿನ ಉತ್ತುಂಗ ಸ್ಥಿತಿಯಲ್ಲಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಎಟಿಎಂಗಳು ಮುಚ್ಚಲಿವೆ. ಫಲಾನುಭವಿಗಳು ಸರಕಾರದ ಸಬ್ಸಿಡಿಗಳನ್ನು ಪಡೆಯಲು ಈ ಯಂತ್ರಗಳನ್ನೇ ಬಳಸುತ್ತಿರುವುದರಿಂದ ಇದು ಆರ್ಥಿಕ ಸೇರ್ಪಡೆ ಪ್ರಯತ್ನಗಳ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಅದು ಹೇಳಿದೆ.

 ಹಾರ್ಡ್‌ವೇರ್ ಮತ್ತು ಸಾಫ್ಟ್‌ವೇರ್‌ಗಳ ಉನ್ನತೀಕರಣ ಸೇರಿದಂತೆ ಇತ್ತೀಚಿನ ನಿಯಮಾವಳಿಗಳಲ್ಲಿ ಬದಲಾವಣೆಗಳಿಂದಾಗಿ ಉದ್ಯಮವು 3,000 ಕೋ.ರೂ.ಗಳ ವೆಚ್ಚವನ್ನು ಭರಿಸಬೇಕಾಗುತ್ತದೆ. ಎಟಿಎಂ ಉದ್ಯಮವು ಇನ್ನೂ ನೋಟು ನಿಷೇಧದ ಆಘಾತದಿಂದ ಹೊರಗೆ ಬಂದಿಲ್ಲ. ಹೀಗಿರುವಾಗ ಹೆಚ್ಚುವರಿ ಕಠಿಣ ಮಾನದಂಡಗಳನ್ನು ಪೂರೈಸುವುದು ಭಾರೀ ವೆಚ್ಚಕ್ಕೆ ಕಾರಣವಾಗಿ ಸ್ಥಿತಿಯನ್ನು ಇನ್ನಷ್ಟು ಹದಗೆಡಿಸಲಿದೆ. ಸೇವಾ ಪೂರೈಕೆದಾರರಿಗೆ ಈ ಹೆಚ್ಚುವರಿ ಹೊರೆಯನ್ನು ಭರಿಸುವ ಹಣಕಾಸು ಸಾಮರ್ಥ್ಯವಿಲ್ಲ. ಈ ಹೊರೆಯನ್ನು ಬ್ಯಾಂಕುಗಳು ಭರಿಸದಿದ್ದರೆ ಉದ್ಯಮವು ಹೆಚ್ಚಿನ ಗುತ್ತಿಗೆಗಳನ್ನು ಸ್ಥಗಿತಗೊಳಿಸಬೇಕಾಗುತ್ತದೆ ಮತ್ತು ಇದು ಭಾರೀ ಸಂಖ್ಯೆಯಲ್ಲಿ ಎಟಿಎಂಗಳ ಮುಚ್ಚುವಿಕೆಗೆ ಕಾರಣವಾಗುತ್ತದೆ ಎಂದು ಸಿಎಟಿಎಂಐ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X